ಬ್ರೇಕಿಂಗ್ ನ್ಯೂಸ್
23-09-23 04:53 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.23: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುವುದನ್ನು ವಿರೋಧಿಸಿ ಕನ್ನಡ ಮತ್ತು ರೈತ ಪರ ಸಂಘಟನೆಗಳು ಸೆ.26ರಂದು ಬೆಂಗಳೂರು ಬಂದ್ ನಡೆಸಲು ನಿರ್ಧರಿಸಿವೆ. ಶನಿವಾರ ಫ್ರೀಡಂ ಪಾರ್ಕ್ ನಲ್ಲಿ ಸೇರಿದ ವಿವಿಧ ರಾಜಕೀಯ ಪಕ್ಷಗಳ ನಾಯಕರು ಮತ್ತು ರೈತ ಸಂಘಟನೆಗಳ ನಾಯಕರು ಬೆಂಗಳೂರು ಬಂದ್ ಮಾಡಿ ರಾಜ್ಯ ಸರಕಾರಕ್ಕೆ ಬಿಸಿ ಮುಟ್ಟಿಸಲು ನಿರ್ಣಯಿಸಿದ್ದಾರೆ.
ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರಕಾರದ ಧೋರಣೆ ಹಾಗೂ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಇಂದು ಕನ್ನಡ ಪರ ಸಂಘಟನೆಗಳು, ಕಬ್ಬು ಬೆಳೆಗಾರರು, ರೈತರ ಸಂಘಟನೆಗಳು ಸಭೆ ಸೇರಿದ್ದರು. ಧರಣಿ ನಡೆಸುತ್ತಿದ್ದ ಸ್ಥಳಕ್ಕೆ ಬಿಜೆಪಿ ನಾಯಕರಾದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಅಶ್ವತ್ಥ ನಾರಾಯಣ, ಜೆಡಿಎಸ್ ಮುಖಂಡ ಎಚ್.ಡಿ. ಕುಮಾರಸ್ವಾಮಿ ಆಗಮಿಸಿ ಧರಣಿಗೆ ಬೆಂಬಲ ಘೋಷಿಸಿದ್ದಾರೆ. ಅಲ್ಲದೆ, ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರಕಾರದ ನಡೆಯನ್ನು ಟೀಕಿಸಿದ್ದಾರೆ.
ಸಭೆಯ ಬಳಿಕ ರೈತ ಮುಖಂಡ ಕುರಬೂರು ಶಾಂತಕುಮಾರ್ ಸುದ್ದಿಗೋಷ್ಟಿ ಕರೆದು ಸೆ.26ರಂದು ಬಂದ್ ಕರೆ ನೀಡಿದ್ದನ್ನು ತಿಳಿಸಿದ್ದಾರೆ. ಅಂದು ಬೆಳಗ್ಗೆ ಬೆಂಗಳೂರಿನ ಟೌನ್ ಹಾಲ್ ನಲ್ಲಿ ಸೇರಲಿದ್ದು, ಮೈಸೂರು ಬ್ಯಾಂಕ್ ವರೆಗೂ ಮೆರವಣಿಗೆ ನಡೆಸಲಾಗುವುದು. ಬಂದ್, ಪ್ರತಿಭಟನೆಯಲ್ಲಿ ಐಟಿ ಕಂಪನಿಗಳು, ಬೀದಿ ವ್ಯಾಪಾರಿಗಳು ಸೇರಿದಂತೆ ಎಲ್ಲರೂ ಭಾಗಿಯಾಗಬೇಕು. ಸಿನಿಮಾ ರಂಗದವರೂ ಬಂದ್ ಗೆ ಬೆಂಬಲ ಕೊಟ್ಟು ಜೊತೆ ಸೇರಬೇಕು. ಸಿನಿಮಾ ರಂಗದವರನ್ನು ಜನಸಾಮಾನ್ಯರು ಬೆಳೆಸಿದ್ದಾರೆ. ಇಡೀ ಚಿತ್ರೋದ್ಯಮ ಒಂದು ದಿನ ಚಟುವಟಿಕೆ ನಿಲ್ಲಿಸಿ ಕೈಜೋಡಿಸಬೇಕು ಎಂದು ಹೇಳಿದರು.
ಈಗಾಗಲೇ ಮಂಡ್ಯ ಬಂದ್ ಆಗಿದೆ, ಮಂಗಳವಾರ ಒಂದು ದಿನ ಪೂರ್ತಿಯಾಗಿ ಬೆಂಗಳೂರು ಬಂದ್ ಮಾಡುತ್ತೇವೆ. ಕೇಂದ್ರ ಸರಕಾರ ಬೆಂಗಳೂರು ನಗರವನ್ನು ನಿರ್ಲಕ್ಷ್ಯ ಮಾಡಿದ್ದು, ನಮ್ಮ ಬಿಸಿ ಎಲ್ಲರಿಗೂ ತಟ್ಟುವಂತೆ ಮಾಡಬೇಕು ಎಂದು ಕುರಬೂರು ಶಾಂತಕುಮಾರ್ ಹೇಳಿದ್ದಾರೆ.
ಶುಕ್ರವಾರ ಸಿಎಂ ಸಿದ್ದರಾಮಯ್ಯ ಕ್ಯಾಬಿನೆಟ್ ಸಭೆ ನಡೆಸಿ, ಸುಪ್ರೀಂ ಕೋರ್ಟ್ ಸೂಚನೆಯಂತೆ ನೀರು ಹರಿಸಲು ಒಪ್ಪಿಗೆ ನೀಡಿದ್ದಾರೆ. ಅದರಂತೆ, ಶನಿವಾರದಿಂದ ದಿನಕ್ಕೆ 5 ಸಾವಿರ ಕ್ಯೂಸೆಕ್ ನಷ್ಟು ನೀರು ತಮಿಳುನಾಡಿಗೆ ಬಿಡಲಾಗುತ್ತಿದೆ.
In the wake of a call by pro-Kannada organisations for a 'bandh' to oppose the release of Cauvery water to Tamil Nadu from dams in Karnataka, most of the shops in the district headquarters town of Mandya, the Cauvery heartland, remained closed on Saturday.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
22-08-25 05:07 pm
Mangalore Correspondent
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
22-08-25 09:57 pm
HK News Desk
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm