ಬ್ರೇಕಿಂಗ್ ನ್ಯೂಸ್
23-09-23 07:45 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.23: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಸೇರಿ 7 ಮಂದಿ ಆರೋಪಿಗಳ ನ್ಯಾಯಾಂಗ ಬಂಧನವನ್ನು ಬೆಂಗಳೂರಿನ 3 ನೇ ಎಪಿಎಂಸಿ ನ್ಯಾಯಾಲಯ ಅಕ್ಟೊಬರ್ 6 ರ ವರೆಗೆ ವಿಸ್ತರಿಸಿದೆ.
ಚೈತ್ರಾ ಜತೆಗೆ ಇತರ ಪ್ರಮುಖ ಆರೋಪಿಗಳಾದ ಅಭಿನವ ಹಾಲಶ್ರೀ, ಶ್ರೀಕಾಂತ್, ಗಗನ್, ರಮೇಶ್, ಪ್ರಜ್ವಲ್ ಮತ್ತು ಧನರಾಜ್ ಸಹಿತ 7 ಮಂದಿ ಆರೋಪಿಗಳನ್ನು ಸೆಪ್ಟೆಂಬರ್ 13 ರಂದು ನ್ಯಾಯಾಲಯ 10 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಪೊಲೀಸ್ ಕಸ್ಟಡಿ ಅಂತ್ಯಗೊಂಡ ಕಾರಣ ಶನಿವಾರ ಅವರನ್ನು ಕೋರ್ಟ್ಗೆ ಹಾಜರುಪಡಿಸಲಾಯಿತು.
ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರು ಚೈತ್ರಾ ಮತ್ತು ಇತರ ಎಂಟು ಮಂದಿ ವಿರುದ್ಧ ಬೆಂಗಳೂರಿನ ಬಂಡೆಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಚೈತ್ರಾ ಮತ್ತು ಆಕೆಯ ಸಹಚರರು ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ದೊರಕಿಸಿ ಕೊಡುವ ನೆಪದಲ್ಲಿ 5 ಕೋಟಿ ರೂ. ಹಣ ಪಡೆದು ವಂಚಿಸಿದ್ದಾರೆ ಎಂಬ ಆರೋಪ ಮಾಡಲಾಗಿದೆ.
ಚೈತ್ರಾ ಮತ್ತು ತಂಡ ಸಿಸಿಬಿ ತನಿಖಾಧಿಕಾರಿ ಎದುರು ತಪ್ಪೊಪ್ಪಿಗೆ ಹೇಳಿಕೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ ಚೈತ್ರಾ ಸಹಿತ ಎಲ್ಲರ ಹೇಳಿಕೆಗಳನ್ನೂ ವೀಡಿಯೋ ಚಿತ್ರೀಕರಿಸಿಕೊಳ್ಳಲಾಗಿದೆ. ಇಡೀ ವಂಚನೆಯ ಸಂಚನ್ನು ಗಗನ್, ಹಾಲಶ್ರೀ ಸ್ವಾಮೀಜಿ, ಶ್ರೀಕಾಂತ್ ಪೂಜಾರಿ ಹಾಗೂ ತಾನು ಸೇರಿ ರೂಪಿಸಿದ್ದು, ಇತರರಿಗೆ ಹಣದ ಆಮಿಷವೊಡ್ಡಿ ಸಹಾಯ ಪಡೆದುಕೊಂಡಿದ್ದೇವೆ ಅಷ್ಟೇ ಎಂದು ಚೈತ್ರಾ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಚೈತ್ರಾ ಕುಂದಾಪುರ ಮತ್ತೆ ಕಣ್ಣೀರು!
ಚೈತ್ರಾ ಕುಂದಾಪುರ ಅವರನ್ನು ಮೊದಲ ಬಾರಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಸಂದರ್ಭದಲ್ಲಿ ಪೊಲೀಸರ ಮೇಲೆ ದೂರು ಹೇಳಿ ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ್ದರು. ಈ ಬಾರಿ ವಕೀಲರ ಬದಲಾವಣೆಗೆ ಚೈತ್ರಾ ಮನವಿ ಮಾಡಿಕೊಂಡರು. ಅಲ್ಲದೇ ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದರು.
Chaitra Kundapura, six others sent to judicial custody till October 6th. Chaitra Kundapura and six accused in the sensational BJP MLA cash-for-ticket scam were sent to judicial custody till October 6 by the Third Additional Chief Metropolitan Magistrate Court in Bengaluru on Saturday.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am