ಬ್ರೇಕಿಂಗ್ ನ್ಯೂಸ್
23-09-23 09:37 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.23: ವಿಧಾನಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಂದ ಕೋಟ್ಯಾಂತರ ರೂ. ವಂಚನೆ ನಡೆಸಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಹೆಸರಿನ ಜೊತೆಗೆ ‘ಕುಂದಾಪುರ’ ಎಂಬ ಸ್ಥಳನಾಮ ಬಳಸದಂತೆ ಬೆಂಗಳೂರು ನಗರದ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಆರೋಪಿ ಜೊತೆಗಿನ ಕುಂದಾಪುರ ಹೆಸರು ತೆಗೆದುಹಾಕುವಂತೆ ಕೋರಿ ನ್ಯಾಯಾಲಯಕ್ಕೆ ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಉದ್ಯಮಿ, ಪ್ರಸ್ತುತ ಬೆಂಗಳೂರು ಹನುಮಂತ ನಗರದ ನಿವಾಸಿ ಗಣೇಶ್ ಶೆಟ್ಟಿ ಅರ್ಜಿ ಸಲ್ಲಿಸಿದ್ದರು.
ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಅವರ ಸುದ್ದಿ ಪ್ರಸಾರ ಮಾಡುವಾಗ ಹೆಸರಿನ ಜೊತೆಗೆ ಕುಂದಾಪುರ ಹೆಸರನ್ನು ಬಳಸುವುದರಿಂದ ಕುಂದಾಪುರ ಊರಿನ ಹೆಸರಿಗೆ ಘಾಸಿಯಾಗುತ್ತದೆ. ಈ ಒಂದು ಘಟನೆಯಿಂದ ಭವಿಷ್ಯದ ಪೀಳಿಗೆಯನ್ನು ಕೆಟ್ಟ ದೃಷ್ಟಿಯಿಂದ ನೋಡುವಂತಾಗಬಹುದು. ಕುಂದಾಪುರ ದೇವಾಲಯಗಳಿರುವ ಮತ್ತು ಪ್ರಕೃತಿ ಸೊಬಗಿನ ಊರು. ಈ ಊರಿನ ಹೆಸರು ಆರೋಪಿಯೊಬ್ಬರ ಹೆಸರಿನ ಜೊತೆಗೆ ಥಳುಕು ಹಾಕಿದ ಕಾರಣಕ್ಕೆ ಹಾಳಾಗಬಾರದು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಮತ್ತು ತಂಡದ ವಿಚಾರಣೆಯನ್ನು ಸಿಸಿಬಿ ಪೊಲೀಸರು ನಡೆಸುತ್ತಿದ್ದು ಈ ನಡುವೆ ಚೈತ್ರಾ ಪ್ರಕರಣದಲ್ಲಿ ಕುಂದಾಪುರ ಹೆಸರನ್ನು ಪದೇ ಪದೇ ಬಳಸುತ್ತಿರುವುದರಿಂದ ಅಲ್ಲಿನ ನಿವಾಸಿಗಳ, ಸ್ಥಳೀಯರ ಭಾವನೆಗೆ ಧಕ್ಕೆಯಾಗುತ್ತಿರುವುದರಿಂದ ಮಾದ್ಯಮಗಳಿಗೆ ಕುಂದಾಪುರ ಹೆಸರನ್ನು ಬಳಸದಂತೆ ನಿರ್ಬಂಧ ನೀಡುವಂತೆ ಕೋರ್ಟ್ ಮೊರೆ ಹೋಗಿದ್ದರು. ಅದರಂತೆ ಕೋರ್ಟ್ ತಡೆಯಾಜ್ಞೆ ವಿಧಿಸಿದ್ದು, ಹೆಸರಿನ ಜೊತೆಗೆ ಸ್ಥಳನಾಮ ಬಳಸದಂತೆ ಸಮನ್ಸ್ ನೀಡಿದೆ, ಅಲ್ಲದೆ, ವಿಚಾರಣೆಯನ್ನು ಡಿಸೆಂಬರ್ 5ಕ್ಕೆ ಕಾಯ್ದಿರಿಸಿದೆ. ಈ ಬಗ್ಗೆ ಹೈಕೋರ್ಟ್ ವಕೀಲ ಎಚ್. ಪವನಚಂದ್ರ ಶೆಟ್ಟಿ ವಾದಿಸಿದ್ದರು.
Chaitra Kundapura case, Court issues order not to use the name of the place Kundapura
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
13-02-25 02:45 pm
HK News Desk
Maha Kumbh, Jabalpur Accident: ಪ್ರಯಾಗ್ರಾಜ್ನ...
11-02-25 04:19 pm
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
13-02-25 10:08 am
Mangalore Correspondent
Bomb Threat, School, Mangalore: ಮಂಗಳೂರಿನಲ್ಲಿ...
12-02-25 10:58 pm
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
Puttur Police Women PSI News, Traffic: ಪುತ್ತೂ...
12-02-25 06:05 pm
Ullal News, Dr Kalladka Prabhakar Bhat: ಸಾಕು...
11-02-25 07:44 pm
12-02-25 10:28 pm
Mangalore Correspondent
Honor killing Bangalore, Daughter killed, Cri...
12-02-25 06:23 pm
Bhagappa Harijan deadly Murder, Crime report:...
12-02-25 12:27 pm
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm