ಬ್ರೇಕಿಂಗ್ ನ್ಯೂಸ್
23-09-23 09:37 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.23: ವಿಧಾನಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಂದ ಕೋಟ್ಯಾಂತರ ರೂ. ವಂಚನೆ ನಡೆಸಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಹೆಸರಿನ ಜೊತೆಗೆ ‘ಕುಂದಾಪುರ’ ಎಂಬ ಸ್ಥಳನಾಮ ಬಳಸದಂತೆ ಬೆಂಗಳೂರು ನಗರದ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಆರೋಪಿ ಜೊತೆಗಿನ ಕುಂದಾಪುರ ಹೆಸರು ತೆಗೆದುಹಾಕುವಂತೆ ಕೋರಿ ನ್ಯಾಯಾಲಯಕ್ಕೆ ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಉದ್ಯಮಿ, ಪ್ರಸ್ತುತ ಬೆಂಗಳೂರು ಹನುಮಂತ ನಗರದ ನಿವಾಸಿ ಗಣೇಶ್ ಶೆಟ್ಟಿ ಅರ್ಜಿ ಸಲ್ಲಿಸಿದ್ದರು.
ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಅವರ ಸುದ್ದಿ ಪ್ರಸಾರ ಮಾಡುವಾಗ ಹೆಸರಿನ ಜೊತೆಗೆ ಕುಂದಾಪುರ ಹೆಸರನ್ನು ಬಳಸುವುದರಿಂದ ಕುಂದಾಪುರ ಊರಿನ ಹೆಸರಿಗೆ ಘಾಸಿಯಾಗುತ್ತದೆ. ಈ ಒಂದು ಘಟನೆಯಿಂದ ಭವಿಷ್ಯದ ಪೀಳಿಗೆಯನ್ನು ಕೆಟ್ಟ ದೃಷ್ಟಿಯಿಂದ ನೋಡುವಂತಾಗಬಹುದು. ಕುಂದಾಪುರ ದೇವಾಲಯಗಳಿರುವ ಮತ್ತು ಪ್ರಕೃತಿ ಸೊಬಗಿನ ಊರು. ಈ ಊರಿನ ಹೆಸರು ಆರೋಪಿಯೊಬ್ಬರ ಹೆಸರಿನ ಜೊತೆಗೆ ಥಳುಕು ಹಾಕಿದ ಕಾರಣಕ್ಕೆ ಹಾಳಾಗಬಾರದು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಮತ್ತು ತಂಡದ ವಿಚಾರಣೆಯನ್ನು ಸಿಸಿಬಿ ಪೊಲೀಸರು ನಡೆಸುತ್ತಿದ್ದು ಈ ನಡುವೆ ಚೈತ್ರಾ ಪ್ರಕರಣದಲ್ಲಿ ಕುಂದಾಪುರ ಹೆಸರನ್ನು ಪದೇ ಪದೇ ಬಳಸುತ್ತಿರುವುದರಿಂದ ಅಲ್ಲಿನ ನಿವಾಸಿಗಳ, ಸ್ಥಳೀಯರ ಭಾವನೆಗೆ ಧಕ್ಕೆಯಾಗುತ್ತಿರುವುದರಿಂದ ಮಾದ್ಯಮಗಳಿಗೆ ಕುಂದಾಪುರ ಹೆಸರನ್ನು ಬಳಸದಂತೆ ನಿರ್ಬಂಧ ನೀಡುವಂತೆ ಕೋರ್ಟ್ ಮೊರೆ ಹೋಗಿದ್ದರು. ಅದರಂತೆ ಕೋರ್ಟ್ ತಡೆಯಾಜ್ಞೆ ವಿಧಿಸಿದ್ದು, ಹೆಸರಿನ ಜೊತೆಗೆ ಸ್ಥಳನಾಮ ಬಳಸದಂತೆ ಸಮನ್ಸ್ ನೀಡಿದೆ, ಅಲ್ಲದೆ, ವಿಚಾರಣೆಯನ್ನು ಡಿಸೆಂಬರ್ 5ಕ್ಕೆ ಕಾಯ್ದಿರಿಸಿದೆ. ಈ ಬಗ್ಗೆ ಹೈಕೋರ್ಟ್ ವಕೀಲ ಎಚ್. ಪವನಚಂದ್ರ ಶೆಟ್ಟಿ ವಾದಿಸಿದ್ದರು.
Chaitra Kundapura case, Court issues order not to use the name of the place Kundapura
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm