ಬ್ರೇಕಿಂಗ್ ನ್ಯೂಸ್
23-09-23 09:37 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.23: ವಿಧಾನಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಂದ ಕೋಟ್ಯಾಂತರ ರೂ. ವಂಚನೆ ನಡೆಸಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಹೆಸರಿನ ಜೊತೆಗೆ ‘ಕುಂದಾಪುರ’ ಎಂಬ ಸ್ಥಳನಾಮ ಬಳಸದಂತೆ ಬೆಂಗಳೂರು ನಗರದ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಆರೋಪಿ ಜೊತೆಗಿನ ಕುಂದಾಪುರ ಹೆಸರು ತೆಗೆದುಹಾಕುವಂತೆ ಕೋರಿ ನ್ಯಾಯಾಲಯಕ್ಕೆ ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಉದ್ಯಮಿ, ಪ್ರಸ್ತುತ ಬೆಂಗಳೂರು ಹನುಮಂತ ನಗರದ ನಿವಾಸಿ ಗಣೇಶ್ ಶೆಟ್ಟಿ ಅರ್ಜಿ ಸಲ್ಲಿಸಿದ್ದರು.
ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಅವರ ಸುದ್ದಿ ಪ್ರಸಾರ ಮಾಡುವಾಗ ಹೆಸರಿನ ಜೊತೆಗೆ ಕುಂದಾಪುರ ಹೆಸರನ್ನು ಬಳಸುವುದರಿಂದ ಕುಂದಾಪುರ ಊರಿನ ಹೆಸರಿಗೆ ಘಾಸಿಯಾಗುತ್ತದೆ. ಈ ಒಂದು ಘಟನೆಯಿಂದ ಭವಿಷ್ಯದ ಪೀಳಿಗೆಯನ್ನು ಕೆಟ್ಟ ದೃಷ್ಟಿಯಿಂದ ನೋಡುವಂತಾಗಬಹುದು. ಕುಂದಾಪುರ ದೇವಾಲಯಗಳಿರುವ ಮತ್ತು ಪ್ರಕೃತಿ ಸೊಬಗಿನ ಊರು. ಈ ಊರಿನ ಹೆಸರು ಆರೋಪಿಯೊಬ್ಬರ ಹೆಸರಿನ ಜೊತೆಗೆ ಥಳುಕು ಹಾಕಿದ ಕಾರಣಕ್ಕೆ ಹಾಳಾಗಬಾರದು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಮತ್ತು ತಂಡದ ವಿಚಾರಣೆಯನ್ನು ಸಿಸಿಬಿ ಪೊಲೀಸರು ನಡೆಸುತ್ತಿದ್ದು ಈ ನಡುವೆ ಚೈತ್ರಾ ಪ್ರಕರಣದಲ್ಲಿ ಕುಂದಾಪುರ ಹೆಸರನ್ನು ಪದೇ ಪದೇ ಬಳಸುತ್ತಿರುವುದರಿಂದ ಅಲ್ಲಿನ ನಿವಾಸಿಗಳ, ಸ್ಥಳೀಯರ ಭಾವನೆಗೆ ಧಕ್ಕೆಯಾಗುತ್ತಿರುವುದರಿಂದ ಮಾದ್ಯಮಗಳಿಗೆ ಕುಂದಾಪುರ ಹೆಸರನ್ನು ಬಳಸದಂತೆ ನಿರ್ಬಂಧ ನೀಡುವಂತೆ ಕೋರ್ಟ್ ಮೊರೆ ಹೋಗಿದ್ದರು. ಅದರಂತೆ ಕೋರ್ಟ್ ತಡೆಯಾಜ್ಞೆ ವಿಧಿಸಿದ್ದು, ಹೆಸರಿನ ಜೊತೆಗೆ ಸ್ಥಳನಾಮ ಬಳಸದಂತೆ ಸಮನ್ಸ್ ನೀಡಿದೆ, ಅಲ್ಲದೆ, ವಿಚಾರಣೆಯನ್ನು ಡಿಸೆಂಬರ್ 5ಕ್ಕೆ ಕಾಯ್ದಿರಿಸಿದೆ. ಈ ಬಗ್ಗೆ ಹೈಕೋರ್ಟ್ ವಕೀಲ ಎಚ್. ಪವನಚಂದ್ರ ಶೆಟ್ಟಿ ವಾದಿಸಿದ್ದರು.
Chaitra Kundapura case, Court issues order not to use the name of the place Kundapura
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm