ಬ್ರೇಕಿಂಗ್ ನ್ಯೂಸ್
23-09-23 09:37 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.23: ವಿಧಾನಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಂದ ಕೋಟ್ಯಾಂತರ ರೂ. ವಂಚನೆ ನಡೆಸಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಹೆಸರಿನ ಜೊತೆಗೆ ‘ಕುಂದಾಪುರ’ ಎಂಬ ಸ್ಥಳನಾಮ ಬಳಸದಂತೆ ಬೆಂಗಳೂರು ನಗರದ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಆರೋಪಿ ಜೊತೆಗಿನ ಕುಂದಾಪುರ ಹೆಸರು ತೆಗೆದುಹಾಕುವಂತೆ ಕೋರಿ ನ್ಯಾಯಾಲಯಕ್ಕೆ ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಉದ್ಯಮಿ, ಪ್ರಸ್ತುತ ಬೆಂಗಳೂರು ಹನುಮಂತ ನಗರದ ನಿವಾಸಿ ಗಣೇಶ್ ಶೆಟ್ಟಿ ಅರ್ಜಿ ಸಲ್ಲಿಸಿದ್ದರು.
ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಅವರ ಸುದ್ದಿ ಪ್ರಸಾರ ಮಾಡುವಾಗ ಹೆಸರಿನ ಜೊತೆಗೆ ಕುಂದಾಪುರ ಹೆಸರನ್ನು ಬಳಸುವುದರಿಂದ ಕುಂದಾಪುರ ಊರಿನ ಹೆಸರಿಗೆ ಘಾಸಿಯಾಗುತ್ತದೆ. ಈ ಒಂದು ಘಟನೆಯಿಂದ ಭವಿಷ್ಯದ ಪೀಳಿಗೆಯನ್ನು ಕೆಟ್ಟ ದೃಷ್ಟಿಯಿಂದ ನೋಡುವಂತಾಗಬಹುದು. ಕುಂದಾಪುರ ದೇವಾಲಯಗಳಿರುವ ಮತ್ತು ಪ್ರಕೃತಿ ಸೊಬಗಿನ ಊರು. ಈ ಊರಿನ ಹೆಸರು ಆರೋಪಿಯೊಬ್ಬರ ಹೆಸರಿನ ಜೊತೆಗೆ ಥಳುಕು ಹಾಕಿದ ಕಾರಣಕ್ಕೆ ಹಾಳಾಗಬಾರದು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಮತ್ತು ತಂಡದ ವಿಚಾರಣೆಯನ್ನು ಸಿಸಿಬಿ ಪೊಲೀಸರು ನಡೆಸುತ್ತಿದ್ದು ಈ ನಡುವೆ ಚೈತ್ರಾ ಪ್ರಕರಣದಲ್ಲಿ ಕುಂದಾಪುರ ಹೆಸರನ್ನು ಪದೇ ಪದೇ ಬಳಸುತ್ತಿರುವುದರಿಂದ ಅಲ್ಲಿನ ನಿವಾಸಿಗಳ, ಸ್ಥಳೀಯರ ಭಾವನೆಗೆ ಧಕ್ಕೆಯಾಗುತ್ತಿರುವುದರಿಂದ ಮಾದ್ಯಮಗಳಿಗೆ ಕುಂದಾಪುರ ಹೆಸರನ್ನು ಬಳಸದಂತೆ ನಿರ್ಬಂಧ ನೀಡುವಂತೆ ಕೋರ್ಟ್ ಮೊರೆ ಹೋಗಿದ್ದರು. ಅದರಂತೆ ಕೋರ್ಟ್ ತಡೆಯಾಜ್ಞೆ ವಿಧಿಸಿದ್ದು, ಹೆಸರಿನ ಜೊತೆಗೆ ಸ್ಥಳನಾಮ ಬಳಸದಂತೆ ಸಮನ್ಸ್ ನೀಡಿದೆ, ಅಲ್ಲದೆ, ವಿಚಾರಣೆಯನ್ನು ಡಿಸೆಂಬರ್ 5ಕ್ಕೆ ಕಾಯ್ದಿರಿಸಿದೆ. ಈ ಬಗ್ಗೆ ಹೈಕೋರ್ಟ್ ವಕೀಲ ಎಚ್. ಪವನಚಂದ್ರ ಶೆಟ್ಟಿ ವಾದಿಸಿದ್ದರು.
Chaitra Kundapura case, Court issues order not to use the name of the place Kundapura
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm