ಬ್ರೇಕಿಂಗ್ ನ್ಯೂಸ್
25-09-23 03:22 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.25: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರುಪಾಯಿ ಪಡೆದು ಪಂಗನಾಮ ಹಾಕಿದ್ದ ಚೈತ್ರಾ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿದೆ. ಬಂಧನದ ವೇಳೆ ಹೈಡ್ರಾಮಾ ಮಾಡಿದ್ದ ಚೈತ್ರಾ ಜೈಲಿನಲ್ಲಿ ಕಣ್ಣೀರು ಹಾಕಲು ಶುರು ಮಾಡಿದ್ದಾಳೆ.
ಶನಿವಾರ ಸಂಜೆ ಪರಪ್ಪನ ಅಗ್ರಹಾರ ಜೈಲು ಪ್ರವೇಶಿಸಿದ ಚೈತ್ರಾ ಮತ್ತು ಇತರ ಐದು ಮಂದಿಯನ್ನು ಹೊಸ ಪ್ರತ್ಯೇಕ ಸೆಲ್ ನಲ್ಲಿ ಇರಿಸಲಾಗಿದೆ. ಅವರನ್ನು 10 ದಿನಗಳ ಕಾಲ ಕ್ವಾರಂಟೈನ್ ಸೆಲ್ನಲ್ಲಿ ಇರಿಸಲಿದ್ದಾರೆ ಎನ್ನಲಾಗಿದೆ. ಮೊದಲ ದಿನ ರಾತ್ರಿಯಲ್ಲಿ ಜೈಲು ಸಿಬ್ಬಂದಿ ಕೊಟ್ಟ ಚಪಾತಿ, ಅನ್ನ ಸಾಂಬಾರ್ ಸೇವಿಸಿದ್ದ ಚೈತ್ರಾ ಇಡೀ ರಾತ್ರಿ ನಿದ್ರೆ ಇಲ್ಲದೆ ಕಣ್ಣೀರು ಹಾಕಿದ್ದಳು ಎಂದು ಜೈಲಿನ ಸಿಬಂದಿ ತಿಳಿಸಿದ್ದಾರೆ.

ನಿದ್ದೆ ಇಲ್ಲದೆ ರಾತ್ರಿ ಕಳೆದ ಚೈತ್ರಾ, ಭಾನುವಾರ ಬೆಳಗ್ಗೆ ಜೈಲು ಸಿಬ್ಬಂದಿ ಕೊಟ್ಟ ಪಲಾವ್ ಸೇವಿಸಿದ್ದಾಳೆ. ಆಕೆಗೆ ಜೈಲಿನಲ್ಲಿ ವಿಚಾರಣಾಧೀನ ಕೈದಿ ಸಂಖ್ಯೆಯನ್ನು ನೀಡಿದ್ದು, ಅದರಂತೆ 9,737 ಯುಟಿಪಿ ನಂಬರ್ ನೀಡಲಾಗಿದೆ. ಉಳಿದಂತೆ ಈಕೆ ಜೊತೆ ಜೈಲು ಸೇರಿದ ಮೋಹನ್ಗೆ 9,738, ರಮೇಶ್ಗೆ 9,739, ಚೆನ್ನಾ ನಾಯಕ್ಗೆ 9,740, ಧನರಾಜ್ಗೆ 9,741 ರಂತೆ ಕೈದಿ ಸಂಖ್ಯೆ ನೀಡಲಾಗಿದೆ.
ಒಂದು ರಾತ್ರಿ ಪರಪ್ಪನ ಅಗ್ರಹಾರದ ಸಾಮಾನ್ಯ ಜೈಲಿನಲ್ಲಿ ವಾಸ್ತವ್ಯ ಹೂಡಿದ್ದ ಚೈತ್ರಾ ಅಂಡ್ ಗ್ಯಾಂಗ್ ಭಾನುವಾರ ಹೊಸ ಬಂಧೀಖಾನೆಯ ಕ್ವಾರಂಟೈನ್ ಸೆಲ್ಗೆ ಶಿಫ್ಟ್ ಆಗಿದ್ದಾರೆ. ಒಂಬತ್ತು ದಿನಗಳ ಬಳಿಕ ಹಳೆ ಬಂಧಿಖಾನೆಗೆ ಎಲ್ಲರನ್ನೂ ಶಿಫ್ಟ್ ಮಾಡಲಿದ್ದಾರೆ. ಉಳಿದ ಆರೋಪಿಗಳು ಚೈತ್ರಾಳ ಮೇಲೆಯೇ ಬೊಟ್ಟು ಮಾಡಿದ್ದು ಆಕೆ ಹೇಳಿದಂತೆ ಮಾಡಿದ್ದೇವೆ ಎನ್ನುವುದು ಸಾಕ್ಷ್ಯ ಸಹಿತ ಸಿಕ್ಕಿಬಿದ್ದಂತಾಗಿದೆ.
Chaitra Kundapur in Bangalore Jail, Hindu Fire band busts in tears spending night.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm