ಬ್ರೇಕಿಂಗ್ ನ್ಯೂಸ್
25-09-23 03:22 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.25: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರುಪಾಯಿ ಪಡೆದು ಪಂಗನಾಮ ಹಾಕಿದ್ದ ಚೈತ್ರಾ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿದೆ. ಬಂಧನದ ವೇಳೆ ಹೈಡ್ರಾಮಾ ಮಾಡಿದ್ದ ಚೈತ್ರಾ ಜೈಲಿನಲ್ಲಿ ಕಣ್ಣೀರು ಹಾಕಲು ಶುರು ಮಾಡಿದ್ದಾಳೆ.
ಶನಿವಾರ ಸಂಜೆ ಪರಪ್ಪನ ಅಗ್ರಹಾರ ಜೈಲು ಪ್ರವೇಶಿಸಿದ ಚೈತ್ರಾ ಮತ್ತು ಇತರ ಐದು ಮಂದಿಯನ್ನು ಹೊಸ ಪ್ರತ್ಯೇಕ ಸೆಲ್ ನಲ್ಲಿ ಇರಿಸಲಾಗಿದೆ. ಅವರನ್ನು 10 ದಿನಗಳ ಕಾಲ ಕ್ವಾರಂಟೈನ್ ಸೆಲ್ನಲ್ಲಿ ಇರಿಸಲಿದ್ದಾರೆ ಎನ್ನಲಾಗಿದೆ. ಮೊದಲ ದಿನ ರಾತ್ರಿಯಲ್ಲಿ ಜೈಲು ಸಿಬ್ಬಂದಿ ಕೊಟ್ಟ ಚಪಾತಿ, ಅನ್ನ ಸಾಂಬಾರ್ ಸೇವಿಸಿದ್ದ ಚೈತ್ರಾ ಇಡೀ ರಾತ್ರಿ ನಿದ್ರೆ ಇಲ್ಲದೆ ಕಣ್ಣೀರು ಹಾಕಿದ್ದಳು ಎಂದು ಜೈಲಿನ ಸಿಬಂದಿ ತಿಳಿಸಿದ್ದಾರೆ.

ನಿದ್ದೆ ಇಲ್ಲದೆ ರಾತ್ರಿ ಕಳೆದ ಚೈತ್ರಾ, ಭಾನುವಾರ ಬೆಳಗ್ಗೆ ಜೈಲು ಸಿಬ್ಬಂದಿ ಕೊಟ್ಟ ಪಲಾವ್ ಸೇವಿಸಿದ್ದಾಳೆ. ಆಕೆಗೆ ಜೈಲಿನಲ್ಲಿ ವಿಚಾರಣಾಧೀನ ಕೈದಿ ಸಂಖ್ಯೆಯನ್ನು ನೀಡಿದ್ದು, ಅದರಂತೆ 9,737 ಯುಟಿಪಿ ನಂಬರ್ ನೀಡಲಾಗಿದೆ. ಉಳಿದಂತೆ ಈಕೆ ಜೊತೆ ಜೈಲು ಸೇರಿದ ಮೋಹನ್ಗೆ 9,738, ರಮೇಶ್ಗೆ 9,739, ಚೆನ್ನಾ ನಾಯಕ್ಗೆ 9,740, ಧನರಾಜ್ಗೆ 9,741 ರಂತೆ ಕೈದಿ ಸಂಖ್ಯೆ ನೀಡಲಾಗಿದೆ.
ಒಂದು ರಾತ್ರಿ ಪರಪ್ಪನ ಅಗ್ರಹಾರದ ಸಾಮಾನ್ಯ ಜೈಲಿನಲ್ಲಿ ವಾಸ್ತವ್ಯ ಹೂಡಿದ್ದ ಚೈತ್ರಾ ಅಂಡ್ ಗ್ಯಾಂಗ್ ಭಾನುವಾರ ಹೊಸ ಬಂಧೀಖಾನೆಯ ಕ್ವಾರಂಟೈನ್ ಸೆಲ್ಗೆ ಶಿಫ್ಟ್ ಆಗಿದ್ದಾರೆ. ಒಂಬತ್ತು ದಿನಗಳ ಬಳಿಕ ಹಳೆ ಬಂಧಿಖಾನೆಗೆ ಎಲ್ಲರನ್ನೂ ಶಿಫ್ಟ್ ಮಾಡಲಿದ್ದಾರೆ. ಉಳಿದ ಆರೋಪಿಗಳು ಚೈತ್ರಾಳ ಮೇಲೆಯೇ ಬೊಟ್ಟು ಮಾಡಿದ್ದು ಆಕೆ ಹೇಳಿದಂತೆ ಮಾಡಿದ್ದೇವೆ ಎನ್ನುವುದು ಸಾಕ್ಷ್ಯ ಸಹಿತ ಸಿಕ್ಕಿಬಿದ್ದಂತಾಗಿದೆ.
Chaitra Kundapur in Bangalore Jail, Hindu Fire band busts in tears spending night.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm