ಬ್ರೇಕಿಂಗ್ ನ್ಯೂಸ್
25-09-23 07:09 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.25: ಬೆಂಗಳೂರು ನಗರವನ್ನು ಬಂದ್ ಮಾಡಲು ಅವಕಾಶ ನೀಡೋದಿಲ್ಲ. ಅಲ್ಲದೆ, ಯಾವುದೇ ರೀತಿಯ ಮೆರವಣಿಗೆ, ಸಭೆ ನಡೆಸುವುದಕ್ಕೂ ಅವಕಾಶ ಇರಲ್ಲ. ಇದಕ್ಕಾಗಿ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ ಮಾಡಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ವೋಚ್ಚ ನ್ಯಾಯಾಲಯದ ಆದೇಶ ಪ್ರಕಾರ ಯಾವುದೇ ರೀತಿಯ ಬಂದ್ ಗೆ ಅವಕಾಶ ನೀಡುವಂತಿಲ್ಲ. ಒಂದು ವೇಳೆ ಬಂದ್ ಮಾಡಿದರೆ ಅಥವಾ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾದರೆ ಬಂದ್ ಕರೆ ಕೊಟ್ಟವರೇ ಹೊಣೆಯಾಗುತ್ತಾರೆ ಎಂದು ತಿಳಿಸಿದರು.
ಪ್ರತಿಭಟನೆ ವೇಳೆ ಅಹಿತಕರ ಘಟನೆ ನಡೆಯಬಾರದು ಎನ್ನುವ ನಿಟ್ಟಿನಲ್ಲಿ ಹೆಚ್ಚಿನ ಪ್ರಮಾಣದ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವುದೇ ಒತ್ತಾಯಪೂರ್ವಕ ಬಂದ್ ಮಾಡುವಂತಿಲ್ಲ. ಹಾಗೊಂದ್ವೇಳೆ ಮಾಡಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ರೈತ ಹಾಗೂ ಕನ್ನಡ ಪರ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ನೀಡಿದ್ದು ಬಿಜೆಪಿ, ಆಪ್, ಜೆಡಿಎಸ್ ಸೇರಿದಂತೆ ವಿಪಕ್ಷಗಳು ಬಂದ್ ಗೆ ಬೆಂಬಲ ಘೋಷಿಸಿವೆ. ಬೆಂಗಳೂರು ಮಹಾನಗರವಾಗಿದ್ದು ಒಂದು ದಿನ ಪೂರ್ತಿ ಬಂದ್ ಆದಲ್ಲಿ ದೊಡ್ಡ ಮಟ್ಟದ ನಷ್ಟ ಆಗುತ್ತದೆ. ಈ ಹಿನ್ನೆಲೆ ನಗರ ಪೂರ್ತಿ ಬಂದ್ ಆಗದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಟ್ಟೆಚ್ಚರ ವಹಿಸಿದ್ದೇವೆ. ಒತ್ತಾಯದ ಬಂದ್ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
Bengaluru Police Commissioner B Dayananda on Monday said that the bandh in the city on Tuesday would not be permitted and the same had been communicated to the organisers. Addressing a news conference, he said prohibitory orders would be in place from Tuesday midnight to Wednesday midnight.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm