ಬ್ರೇಕಿಂಗ್ ನ್ಯೂಸ್
26-09-23 12:28 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.26: ಕಾವೇರಿ ನೀರಿಗಾಗಿ ಬೆಂಗಳೂರು ಬಂದ್ಗೆ ಕರೆ ನೀಡಿದ ಹಿನ್ನೆಲೆ ರೈತರು ಹಾಗೂ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭ ಪೊಲೀಸರು ಹಲವು ಕಾರ್ಯಕರ್ತರನ್ನು ಹಾಗೂ ಮುಖಂಡರನ್ನು ವಶಕ್ಕೆ ಪಡೆದಿದ್ದು, ಈ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಬಂದ್ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕಾವೇರಿ ನೀರಿಗಾಗಿ ನಡೆಯುತ್ತಿರುವ ಬೆಂಗಳೂರು ಬಂದ್ಗೆ ನನ್ನ ಸಂಪೂರ್ಣ ಬೆಂಬಲವಿದೆ. ಹೋರಾಟ ಶಾಂತಿಯುತವಾಗಿರಲಿ. ಬಂದ್ ಯಶಸ್ವಿಯಾಗಲಿ. ಜನತಾದಳ ಪಕ್ಷದ ಕಾರ್ಯಕರ್ತರೂ ಕೂಡ ಬಂದ್ನಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಇದೆಂಥಾ ಚೋದ್ಯ? ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು ಕಾಂಗ್ರೆಸ್ ಸರ್ಕಾರದ ಕಿಡಿಗೇಡಿತನದ ಪರಮಾವಧಿ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ?
ಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಬಹುದಾದರೆ, ನಾಡಿನ ಜೀವನಾಡಿ ಕಾವೇರಿಗಾಗಿ ಕನ್ನಡಿಗರು ಪ್ರತಿಭಟನೆ ನಡೆಸಬಾರದೇ? ಶಾಂತವಾಗಿ ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗಾರರನ್ನು ಬಂಧಿಸಿರುವುದು ಖಂಡನೀಯ. ಇದೇನು ಕನ್ನಡಿಗರ ಸರ್ಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರ್ಕಾರವೋ? ಇಷ್ಟಕ್ಕೂ ಕನ್ನಡಿಗರು ಮತ ಹಾಕಿದ್ದು ಯಾರಿಗೆ?
ಹೋರಾಟಗಾರರು, ರೈತರನ್ನು ಕೂಡಲೇ ಬಂಧಮುಕ್ತಗೊಳಿಸಬೇಕು. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಪಕ್ಷವು ಡಿಎಂಕೆ ಪಕ್ಷದ ಬಿ ಟೀಮ್ ಆಗಿ ಪರಿವರ್ತನೆ ಆದ ಪರಿಣಾಮವೇ ಈ ಕಾವೇರಿ ಬಿಕ್ಕಟ್ಟು ಎನ್ನುವುದು ಕನ್ನಡಿಗರಿಗೆ ಈಗ ಸ್ಪಷ್ಟವಾಗಿ ಅರ್ಥವಾಗಿದೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.
Farmers and pro-Kannada activists are protesting against the Bengaluru bandh called for cauvery water. Former Chief Minister HD Kumaraswamy took to Twitter to express his anger over the detention of several activists and leaders by the police.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm