ಬ್ರೇಕಿಂಗ್ ನ್ಯೂಸ್
28-09-23 10:07 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಯಾರಿಗೆ ಆದರೂ ಪ್ರತಿಭಟನೆ ನಡೆಸಲು ಹಕ್ಕಿದೆ. ಹಾಗಂತ, ಬಂದ್ ಮಾಡಲು ಬಲವಂತ ಪಡಿಸಿದರೆ ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕನ್ನಡ ಸಂಘಟನೆಗಳ ಬಂದ್ ಕರೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಸೆ.29ರಂದು ರಾಜ್ಯ ಬಂದ್ ಗೆ ಕರೆ ನೀಡಿದ್ದು, ರಾಜ್ಯದ ಬಹುತೇಕ ಕಡೆ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ. ಈ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಚಿವ ಪರಮೇಶ್ವರ್, ಪ್ರತಿಭಟನೆ, ಧರಣಿ ಯಾರಿಗೆ ಬೇಕಾದರೂ ಮಾಡಬಹುದು. ಹಾಗೆಂದು, ಬಂದ್ ಮಾಡಲು ಬಲವಂತ ಮಾಡುವುದನ್ನು ಸಹಿಸುವುದಿಲ್ಲ. ಬಂದ್ ನಡೆಸುವುದು ಹೈಕೋರ್ಟ್ ಪ್ರಕಾರ ನಿಷಿದ್ಧ. ಹಾಗಾಗಿ ಬಂದ್ ಮಾಡಿಸಲು ಬಲವಂತ ಪಡಿಸಿದರೆ, ರಸ್ತೆ ತಡೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.
ಬಂದ್ ನಡೆಸುವುದರಿಂದ ಎಲ್ಲರಿಗೂ ನಷ್ಟ. ಆರ್ಥಿಕತೆಗೆ ಪೆಟ್ಟು ಬೀಳುತ್ತದೆ. ಮೊನ್ನೆಯ ಒಂದು ದಿನದ ಬೆಂಗಳೂರು ಬಂದ್ ನಿಂದ ಒಂದೂವರೆ ಸಾವಿರ ಕೋಟಿಯಷ್ಟು ನಷ್ಟ ಆಗಿದೆ. ಮತ್ತೊಮ್ಮೆ ಬಂದ್ ಮಾಡಿದರೆ ಮತ್ತಷ್ಟು ನಷ್ಟ ಆಗುತ್ತದೆ. ಇವೆಲ್ಲ ಕನ್ನಡ ಸಂಘಟನೆಗಳವರಿಗೆ ತಿಳಿದಿಲ್ಲ ಎಂದಲ್ಲ. ಪ್ರತಿಭಟನೆ, ಧರಣಿ ನಡೆಸುವುದಕ್ಕೆ ಅವಕಾಶ ಇದೆ. ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದಲ್ಲಿ ಪೊಲೀಸರಿಗೆ ಪ್ರತ್ಯೇಕ ಹೇಳಬೇಕಿಲ್ಲ. ಬೇಕಾದ ಕ್ರಮ ಜರುಗಿಸುತ್ತಾರೆ ಎಂದು ಪರಮೇಶ್ವರ್ ಹೇಳಿದ್ದಾರೆ.
ನೀರಿನ ವಿಚಾರದಲ್ಲಿ ತಮಿಳುನಾಡು ಜೊತೆ ರಾಜಿ ಮಾಡಿಕೊಳ್ಳುವ ವಿಚಾರ ಇಲ್ಲ. ಬಿಜೆಪಿ – ಜೆಡಿಎಸ್ ಒಂದಾಗಿ ಪ್ರತಿಭಟನೆ ನಡೆಸುತ್ತಿದ್ದು ರಾಜ್ಯ ಸರಕಾರವನ್ನು ದೂರಿ ಪ್ರಯೋಜನ ಇಲ್ಲ. ಇದರ ಬದಲು ಸಮಸ್ಯೆ ಬಗೆಹರಿಸಲು ಸರಕಾರದ ಜೊತೆ ಕೈಜೋಡಿಸಬೇಕಾಗಿದೆ ಎಂದರು ಪರಮೇಶ್ವರ್.
Karnataka Bandh, anyone forcing public to close shops will be arrested says Home Minister Parameshwar.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm