ಬ್ರೇಕಿಂಗ್ ನ್ಯೂಸ್
28-09-23 10:07 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಯಾರಿಗೆ ಆದರೂ ಪ್ರತಿಭಟನೆ ನಡೆಸಲು ಹಕ್ಕಿದೆ. ಹಾಗಂತ, ಬಂದ್ ಮಾಡಲು ಬಲವಂತ ಪಡಿಸಿದರೆ ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕನ್ನಡ ಸಂಘಟನೆಗಳ ಬಂದ್ ಕರೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಸೆ.29ರಂದು ರಾಜ್ಯ ಬಂದ್ ಗೆ ಕರೆ ನೀಡಿದ್ದು, ರಾಜ್ಯದ ಬಹುತೇಕ ಕಡೆ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ. ಈ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಚಿವ ಪರಮೇಶ್ವರ್, ಪ್ರತಿಭಟನೆ, ಧರಣಿ ಯಾರಿಗೆ ಬೇಕಾದರೂ ಮಾಡಬಹುದು. ಹಾಗೆಂದು, ಬಂದ್ ಮಾಡಲು ಬಲವಂತ ಮಾಡುವುದನ್ನು ಸಹಿಸುವುದಿಲ್ಲ. ಬಂದ್ ನಡೆಸುವುದು ಹೈಕೋರ್ಟ್ ಪ್ರಕಾರ ನಿಷಿದ್ಧ. ಹಾಗಾಗಿ ಬಂದ್ ಮಾಡಿಸಲು ಬಲವಂತ ಪಡಿಸಿದರೆ, ರಸ್ತೆ ತಡೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.
ಬಂದ್ ನಡೆಸುವುದರಿಂದ ಎಲ್ಲರಿಗೂ ನಷ್ಟ. ಆರ್ಥಿಕತೆಗೆ ಪೆಟ್ಟು ಬೀಳುತ್ತದೆ. ಮೊನ್ನೆಯ ಒಂದು ದಿನದ ಬೆಂಗಳೂರು ಬಂದ್ ನಿಂದ ಒಂದೂವರೆ ಸಾವಿರ ಕೋಟಿಯಷ್ಟು ನಷ್ಟ ಆಗಿದೆ. ಮತ್ತೊಮ್ಮೆ ಬಂದ್ ಮಾಡಿದರೆ ಮತ್ತಷ್ಟು ನಷ್ಟ ಆಗುತ್ತದೆ. ಇವೆಲ್ಲ ಕನ್ನಡ ಸಂಘಟನೆಗಳವರಿಗೆ ತಿಳಿದಿಲ್ಲ ಎಂದಲ್ಲ. ಪ್ರತಿಭಟನೆ, ಧರಣಿ ನಡೆಸುವುದಕ್ಕೆ ಅವಕಾಶ ಇದೆ. ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದಲ್ಲಿ ಪೊಲೀಸರಿಗೆ ಪ್ರತ್ಯೇಕ ಹೇಳಬೇಕಿಲ್ಲ. ಬೇಕಾದ ಕ್ರಮ ಜರುಗಿಸುತ್ತಾರೆ ಎಂದು ಪರಮೇಶ್ವರ್ ಹೇಳಿದ್ದಾರೆ.
ನೀರಿನ ವಿಚಾರದಲ್ಲಿ ತಮಿಳುನಾಡು ಜೊತೆ ರಾಜಿ ಮಾಡಿಕೊಳ್ಳುವ ವಿಚಾರ ಇಲ್ಲ. ಬಿಜೆಪಿ – ಜೆಡಿಎಸ್ ಒಂದಾಗಿ ಪ್ರತಿಭಟನೆ ನಡೆಸುತ್ತಿದ್ದು ರಾಜ್ಯ ಸರಕಾರವನ್ನು ದೂರಿ ಪ್ರಯೋಜನ ಇಲ್ಲ. ಇದರ ಬದಲು ಸಮಸ್ಯೆ ಬಗೆಹರಿಸಲು ಸರಕಾರದ ಜೊತೆ ಕೈಜೋಡಿಸಬೇಕಾಗಿದೆ ಎಂದರು ಪರಮೇಶ್ವರ್.
Karnataka Bandh, anyone forcing public to close shops will be arrested says Home Minister Parameshwar.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am