ಬ್ರೇಕಿಂಗ್ ನ್ಯೂಸ್
28-09-23 10:07 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಯಾರಿಗೆ ಆದರೂ ಪ್ರತಿಭಟನೆ ನಡೆಸಲು ಹಕ್ಕಿದೆ. ಹಾಗಂತ, ಬಂದ್ ಮಾಡಲು ಬಲವಂತ ಪಡಿಸಿದರೆ ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕನ್ನಡ ಸಂಘಟನೆಗಳ ಬಂದ್ ಕರೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಸೆ.29ರಂದು ರಾಜ್ಯ ಬಂದ್ ಗೆ ಕರೆ ನೀಡಿದ್ದು, ರಾಜ್ಯದ ಬಹುತೇಕ ಕಡೆ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ. ಈ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಚಿವ ಪರಮೇಶ್ವರ್, ಪ್ರತಿಭಟನೆ, ಧರಣಿ ಯಾರಿಗೆ ಬೇಕಾದರೂ ಮಾಡಬಹುದು. ಹಾಗೆಂದು, ಬಂದ್ ಮಾಡಲು ಬಲವಂತ ಮಾಡುವುದನ್ನು ಸಹಿಸುವುದಿಲ್ಲ. ಬಂದ್ ನಡೆಸುವುದು ಹೈಕೋರ್ಟ್ ಪ್ರಕಾರ ನಿಷಿದ್ಧ. ಹಾಗಾಗಿ ಬಂದ್ ಮಾಡಿಸಲು ಬಲವಂತ ಪಡಿಸಿದರೆ, ರಸ್ತೆ ತಡೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.
ಬಂದ್ ನಡೆಸುವುದರಿಂದ ಎಲ್ಲರಿಗೂ ನಷ್ಟ. ಆರ್ಥಿಕತೆಗೆ ಪೆಟ್ಟು ಬೀಳುತ್ತದೆ. ಮೊನ್ನೆಯ ಒಂದು ದಿನದ ಬೆಂಗಳೂರು ಬಂದ್ ನಿಂದ ಒಂದೂವರೆ ಸಾವಿರ ಕೋಟಿಯಷ್ಟು ನಷ್ಟ ಆಗಿದೆ. ಮತ್ತೊಮ್ಮೆ ಬಂದ್ ಮಾಡಿದರೆ ಮತ್ತಷ್ಟು ನಷ್ಟ ಆಗುತ್ತದೆ. ಇವೆಲ್ಲ ಕನ್ನಡ ಸಂಘಟನೆಗಳವರಿಗೆ ತಿಳಿದಿಲ್ಲ ಎಂದಲ್ಲ. ಪ್ರತಿಭಟನೆ, ಧರಣಿ ನಡೆಸುವುದಕ್ಕೆ ಅವಕಾಶ ಇದೆ. ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದಲ್ಲಿ ಪೊಲೀಸರಿಗೆ ಪ್ರತ್ಯೇಕ ಹೇಳಬೇಕಿಲ್ಲ. ಬೇಕಾದ ಕ್ರಮ ಜರುಗಿಸುತ್ತಾರೆ ಎಂದು ಪರಮೇಶ್ವರ್ ಹೇಳಿದ್ದಾರೆ.
ನೀರಿನ ವಿಚಾರದಲ್ಲಿ ತಮಿಳುನಾಡು ಜೊತೆ ರಾಜಿ ಮಾಡಿಕೊಳ್ಳುವ ವಿಚಾರ ಇಲ್ಲ. ಬಿಜೆಪಿ – ಜೆಡಿಎಸ್ ಒಂದಾಗಿ ಪ್ರತಿಭಟನೆ ನಡೆಸುತ್ತಿದ್ದು ರಾಜ್ಯ ಸರಕಾರವನ್ನು ದೂರಿ ಪ್ರಯೋಜನ ಇಲ್ಲ. ಇದರ ಬದಲು ಸಮಸ್ಯೆ ಬಗೆಹರಿಸಲು ಸರಕಾರದ ಜೊತೆ ಕೈಜೋಡಿಸಬೇಕಾಗಿದೆ ಎಂದರು ಪರಮೇಶ್ವರ್.
Karnataka Bandh, anyone forcing public to close shops will be arrested says Home Minister Parameshwar.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm