ಬ್ರೇಕಿಂಗ್ ನ್ಯೂಸ್
28-09-23 10:07 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಯಾರಿಗೆ ಆದರೂ ಪ್ರತಿಭಟನೆ ನಡೆಸಲು ಹಕ್ಕಿದೆ. ಹಾಗಂತ, ಬಂದ್ ಮಾಡಲು ಬಲವಂತ ಪಡಿಸಿದರೆ ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕನ್ನಡ ಸಂಘಟನೆಗಳ ಬಂದ್ ಕರೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಸೆ.29ರಂದು ರಾಜ್ಯ ಬಂದ್ ಗೆ ಕರೆ ನೀಡಿದ್ದು, ರಾಜ್ಯದ ಬಹುತೇಕ ಕಡೆ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ. ಈ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಚಿವ ಪರಮೇಶ್ವರ್, ಪ್ರತಿಭಟನೆ, ಧರಣಿ ಯಾರಿಗೆ ಬೇಕಾದರೂ ಮಾಡಬಹುದು. ಹಾಗೆಂದು, ಬಂದ್ ಮಾಡಲು ಬಲವಂತ ಮಾಡುವುದನ್ನು ಸಹಿಸುವುದಿಲ್ಲ. ಬಂದ್ ನಡೆಸುವುದು ಹೈಕೋರ್ಟ್ ಪ್ರಕಾರ ನಿಷಿದ್ಧ. ಹಾಗಾಗಿ ಬಂದ್ ಮಾಡಿಸಲು ಬಲವಂತ ಪಡಿಸಿದರೆ, ರಸ್ತೆ ತಡೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.
ಬಂದ್ ನಡೆಸುವುದರಿಂದ ಎಲ್ಲರಿಗೂ ನಷ್ಟ. ಆರ್ಥಿಕತೆಗೆ ಪೆಟ್ಟು ಬೀಳುತ್ತದೆ. ಮೊನ್ನೆಯ ಒಂದು ದಿನದ ಬೆಂಗಳೂರು ಬಂದ್ ನಿಂದ ಒಂದೂವರೆ ಸಾವಿರ ಕೋಟಿಯಷ್ಟು ನಷ್ಟ ಆಗಿದೆ. ಮತ್ತೊಮ್ಮೆ ಬಂದ್ ಮಾಡಿದರೆ ಮತ್ತಷ್ಟು ನಷ್ಟ ಆಗುತ್ತದೆ. ಇವೆಲ್ಲ ಕನ್ನಡ ಸಂಘಟನೆಗಳವರಿಗೆ ತಿಳಿದಿಲ್ಲ ಎಂದಲ್ಲ. ಪ್ರತಿಭಟನೆ, ಧರಣಿ ನಡೆಸುವುದಕ್ಕೆ ಅವಕಾಶ ಇದೆ. ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದಲ್ಲಿ ಪೊಲೀಸರಿಗೆ ಪ್ರತ್ಯೇಕ ಹೇಳಬೇಕಿಲ್ಲ. ಬೇಕಾದ ಕ್ರಮ ಜರುಗಿಸುತ್ತಾರೆ ಎಂದು ಪರಮೇಶ್ವರ್ ಹೇಳಿದ್ದಾರೆ.
ನೀರಿನ ವಿಚಾರದಲ್ಲಿ ತಮಿಳುನಾಡು ಜೊತೆ ರಾಜಿ ಮಾಡಿಕೊಳ್ಳುವ ವಿಚಾರ ಇಲ್ಲ. ಬಿಜೆಪಿ – ಜೆಡಿಎಸ್ ಒಂದಾಗಿ ಪ್ರತಿಭಟನೆ ನಡೆಸುತ್ತಿದ್ದು ರಾಜ್ಯ ಸರಕಾರವನ್ನು ದೂರಿ ಪ್ರಯೋಜನ ಇಲ್ಲ. ಇದರ ಬದಲು ಸಮಸ್ಯೆ ಬಗೆಹರಿಸಲು ಸರಕಾರದ ಜೊತೆ ಕೈಜೋಡಿಸಬೇಕಾಗಿದೆ ಎಂದರು ಪರಮೇಶ್ವರ್.
Karnataka Bandh, anyone forcing public to close shops will be arrested says Home Minister Parameshwar.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 07:33 pm
HK News Desk
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm