ಬ್ರೇಕಿಂಗ್ ನ್ಯೂಸ್
28-09-23 10:07 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಯಾರಿಗೆ ಆದರೂ ಪ್ರತಿಭಟನೆ ನಡೆಸಲು ಹಕ್ಕಿದೆ. ಹಾಗಂತ, ಬಂದ್ ಮಾಡಲು ಬಲವಂತ ಪಡಿಸಿದರೆ ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕನ್ನಡ ಸಂಘಟನೆಗಳ ಬಂದ್ ಕರೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಸೆ.29ರಂದು ರಾಜ್ಯ ಬಂದ್ ಗೆ ಕರೆ ನೀಡಿದ್ದು, ರಾಜ್ಯದ ಬಹುತೇಕ ಕಡೆ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ. ಈ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಚಿವ ಪರಮೇಶ್ವರ್, ಪ್ರತಿಭಟನೆ, ಧರಣಿ ಯಾರಿಗೆ ಬೇಕಾದರೂ ಮಾಡಬಹುದು. ಹಾಗೆಂದು, ಬಂದ್ ಮಾಡಲು ಬಲವಂತ ಮಾಡುವುದನ್ನು ಸಹಿಸುವುದಿಲ್ಲ. ಬಂದ್ ನಡೆಸುವುದು ಹೈಕೋರ್ಟ್ ಪ್ರಕಾರ ನಿಷಿದ್ಧ. ಹಾಗಾಗಿ ಬಂದ್ ಮಾಡಿಸಲು ಬಲವಂತ ಪಡಿಸಿದರೆ, ರಸ್ತೆ ತಡೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.
ಬಂದ್ ನಡೆಸುವುದರಿಂದ ಎಲ್ಲರಿಗೂ ನಷ್ಟ. ಆರ್ಥಿಕತೆಗೆ ಪೆಟ್ಟು ಬೀಳುತ್ತದೆ. ಮೊನ್ನೆಯ ಒಂದು ದಿನದ ಬೆಂಗಳೂರು ಬಂದ್ ನಿಂದ ಒಂದೂವರೆ ಸಾವಿರ ಕೋಟಿಯಷ್ಟು ನಷ್ಟ ಆಗಿದೆ. ಮತ್ತೊಮ್ಮೆ ಬಂದ್ ಮಾಡಿದರೆ ಮತ್ತಷ್ಟು ನಷ್ಟ ಆಗುತ್ತದೆ. ಇವೆಲ್ಲ ಕನ್ನಡ ಸಂಘಟನೆಗಳವರಿಗೆ ತಿಳಿದಿಲ್ಲ ಎಂದಲ್ಲ. ಪ್ರತಿಭಟನೆ, ಧರಣಿ ನಡೆಸುವುದಕ್ಕೆ ಅವಕಾಶ ಇದೆ. ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದಲ್ಲಿ ಪೊಲೀಸರಿಗೆ ಪ್ರತ್ಯೇಕ ಹೇಳಬೇಕಿಲ್ಲ. ಬೇಕಾದ ಕ್ರಮ ಜರುಗಿಸುತ್ತಾರೆ ಎಂದು ಪರಮೇಶ್ವರ್ ಹೇಳಿದ್ದಾರೆ.
ನೀರಿನ ವಿಚಾರದಲ್ಲಿ ತಮಿಳುನಾಡು ಜೊತೆ ರಾಜಿ ಮಾಡಿಕೊಳ್ಳುವ ವಿಚಾರ ಇಲ್ಲ. ಬಿಜೆಪಿ – ಜೆಡಿಎಸ್ ಒಂದಾಗಿ ಪ್ರತಿಭಟನೆ ನಡೆಸುತ್ತಿದ್ದು ರಾಜ್ಯ ಸರಕಾರವನ್ನು ದೂರಿ ಪ್ರಯೋಜನ ಇಲ್ಲ. ಇದರ ಬದಲು ಸಮಸ್ಯೆ ಬಗೆಹರಿಸಲು ಸರಕಾರದ ಜೊತೆ ಕೈಜೋಡಿಸಬೇಕಾಗಿದೆ ಎಂದರು ಪರಮೇಶ್ವರ್.
Karnataka Bandh, anyone forcing public to close shops will be arrested says Home Minister Parameshwar.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm