ಬ್ರೇಕಿಂಗ್ ನ್ಯೂಸ್
28-09-23 10:07 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಯಾರಿಗೆ ಆದರೂ ಪ್ರತಿಭಟನೆ ನಡೆಸಲು ಹಕ್ಕಿದೆ. ಹಾಗಂತ, ಬಂದ್ ಮಾಡಲು ಬಲವಂತ ಪಡಿಸಿದರೆ ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕನ್ನಡ ಸಂಘಟನೆಗಳ ಬಂದ್ ಕರೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಸೆ.29ರಂದು ರಾಜ್ಯ ಬಂದ್ ಗೆ ಕರೆ ನೀಡಿದ್ದು, ರಾಜ್ಯದ ಬಹುತೇಕ ಕಡೆ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ. ಈ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಚಿವ ಪರಮೇಶ್ವರ್, ಪ್ರತಿಭಟನೆ, ಧರಣಿ ಯಾರಿಗೆ ಬೇಕಾದರೂ ಮಾಡಬಹುದು. ಹಾಗೆಂದು, ಬಂದ್ ಮಾಡಲು ಬಲವಂತ ಮಾಡುವುದನ್ನು ಸಹಿಸುವುದಿಲ್ಲ. ಬಂದ್ ನಡೆಸುವುದು ಹೈಕೋರ್ಟ್ ಪ್ರಕಾರ ನಿಷಿದ್ಧ. ಹಾಗಾಗಿ ಬಂದ್ ಮಾಡಿಸಲು ಬಲವಂತ ಪಡಿಸಿದರೆ, ರಸ್ತೆ ತಡೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.
ಬಂದ್ ನಡೆಸುವುದರಿಂದ ಎಲ್ಲರಿಗೂ ನಷ್ಟ. ಆರ್ಥಿಕತೆಗೆ ಪೆಟ್ಟು ಬೀಳುತ್ತದೆ. ಮೊನ್ನೆಯ ಒಂದು ದಿನದ ಬೆಂಗಳೂರು ಬಂದ್ ನಿಂದ ಒಂದೂವರೆ ಸಾವಿರ ಕೋಟಿಯಷ್ಟು ನಷ್ಟ ಆಗಿದೆ. ಮತ್ತೊಮ್ಮೆ ಬಂದ್ ಮಾಡಿದರೆ ಮತ್ತಷ್ಟು ನಷ್ಟ ಆಗುತ್ತದೆ. ಇವೆಲ್ಲ ಕನ್ನಡ ಸಂಘಟನೆಗಳವರಿಗೆ ತಿಳಿದಿಲ್ಲ ಎಂದಲ್ಲ. ಪ್ರತಿಭಟನೆ, ಧರಣಿ ನಡೆಸುವುದಕ್ಕೆ ಅವಕಾಶ ಇದೆ. ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದಲ್ಲಿ ಪೊಲೀಸರಿಗೆ ಪ್ರತ್ಯೇಕ ಹೇಳಬೇಕಿಲ್ಲ. ಬೇಕಾದ ಕ್ರಮ ಜರುಗಿಸುತ್ತಾರೆ ಎಂದು ಪರಮೇಶ್ವರ್ ಹೇಳಿದ್ದಾರೆ.
ನೀರಿನ ವಿಚಾರದಲ್ಲಿ ತಮಿಳುನಾಡು ಜೊತೆ ರಾಜಿ ಮಾಡಿಕೊಳ್ಳುವ ವಿಚಾರ ಇಲ್ಲ. ಬಿಜೆಪಿ – ಜೆಡಿಎಸ್ ಒಂದಾಗಿ ಪ್ರತಿಭಟನೆ ನಡೆಸುತ್ತಿದ್ದು ರಾಜ್ಯ ಸರಕಾರವನ್ನು ದೂರಿ ಪ್ರಯೋಜನ ಇಲ್ಲ. ಇದರ ಬದಲು ಸಮಸ್ಯೆ ಬಗೆಹರಿಸಲು ಸರಕಾರದ ಜೊತೆ ಕೈಜೋಡಿಸಬೇಕಾಗಿದೆ ಎಂದರು ಪರಮೇಶ್ವರ್.
Karnataka Bandh, anyone forcing public to close shops will be arrested says Home Minister Parameshwar.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm