ಬ್ರೇಕಿಂಗ್ ನ್ಯೂಸ್
30-09-23 03:50 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.30: ತಮಿಳುನಾಡಿಗೆ ನೀರು ಬಿಡಬಾರದು ಎಂಬ ರೈತರ ಒತ್ತಾಯವನ್ನು ರಾಜ್ಯ ಸರ್ಕಾರವೂ ಒಪ್ಪುತ್ತದೆ. ಆದರೆ ಹಾಗೆ ಮಾಡೋದು ನ್ಯಾಯಾಂಗ ನಿಂದನೆಯಾಗುತ್ತದೆ. ಅದರ ಪರಿಣಾಮ ರಾಜ್ಯ ಸರ್ಕಾರವನ್ನು ವಜಾಗೊಳಿಸುವುದಕ್ಕೆ ಕಾರಣವಾಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ಜಲಸಂರಕ್ಷಣಾ ಸಮಿತಿ, ರೈತ ಸಂಘಗಳು ಸೇರಿದಂತೆ ಸಂಘಟನೆಗಳ ಸದಸ್ಯರಿಗೆ ಸರ್ಕಾರದ ಸ್ಥಿತಿಯ ಬಗ್ಗೆ ವಿವರಿಸಿದ ಸಿಎಂ ಸಿದ್ದರಾಮಯ್ಯ, ತಮಿಳುನಾಡಿಗೆ ನೀರು ಬಿಡದಿದ್ದರೆ ರಾಜ್ಯದ ಜಲಾಶಯಗಳ ಮೇಲೆ ಕೇಂದ್ರವು ನಿಯಂತ್ರಣ ಸಾಧಿಸಬಹುದು ಎಂದರು. ಆಗಸ್ಟ್ನಲ್ಲಿ ಮಳೆ ಕೊರತೆಯಾಗಿ ಸಮಸ್ಯೆಯಾಗಿದೆ. ಈ ತಿಂಗಳಲ್ಲಿಯೂ ರಾಜ್ಯದಲ್ಲಿ ಕಡಿಮೆ ಮಳೆಯಾಗಿದೆ. ನಾವು ಈ ವಿಷಯವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯೂಎಂಎ) ಸಭೆಗಳಲ್ಲಿ ಪ್ರಸ್ತಾಪಿಸಿದ್ದೇವೆ. ಕಾವೇರಿ ಜಲಾನಯನ ಪ್ರದೇಶದ ನಮ್ಮ ಅಣೆಕಟ್ಟುಗಳಲ್ಲಿ ಸಾಕಷ್ಟು ನೀರಿಲ್ಲ. ಸುಪ್ರೀಂ ಕೋರ್ಟ್ಗೂ ಅರ್ಜಿ ಸಲ್ಲಿಸಿದ್ದೇವೆ ಎಂದು ಸಿಎಂ ಹೇಳಿದರು.
ರಾಜ್ಯಕ್ಕೆ ನೀರಾವರಿಗೆ 70 ಟಿಎಂಸಿ, ಕುಡಿಯುವ ಉದ್ದೇಶಕ್ಕೆ 30 ಟಿಎಂಸಿ ಮತ್ತು ಕೈಗಾರಿಕೆಗಳಿಗೆ 3 ಟಿಎಂಸಿ ಅಡಿ ನೀರು ಬೇಕು. ಒಟ್ಟಾರೆಯಾಗಿ, ರಾಜ್ಯಕ್ಕೆ 106 ಟಿಎಂಸಿ ನೀರು ಅಗತ್ಯವಿದೆ. ಆದರೆ ನಮ್ಮಲ್ಲಿ 50 ಟಿಎಂಸಿ ನೀರು ಮಾತ್ರ ಇದೆ. ಜನರ ಕುಡಿಯುವ ನೀರಿನ ಅಗತ್ಯವನ್ನು ಪೂರೈಸುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದರು.
ಅಕ್ಟೋಬರ್ 15ರ ವರೆಗೆ ತಮಿಳುನಾಡಿಗೆ ಪ್ರತಿದಿನ 3,000 ಕ್ಯೂಸೆಕ್ ನೀರು ಬಿಡುವಂತೆ ರಾಜ್ಯಕ್ಕೆ ಸಿಡಬ್ಲ್ಯೂಎಂಎ ನಿರ್ದೇಶನದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿರ್ಧರಿಸಲು ರೈತರ ನಿಯೋಗವು ಕಾನೂನು ತಜ್ಞರೊಂದಿಗಿನ ಸಭೆಯ ಮೊದಲು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು. ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ನಿಲ್ಲಿಸಬೇಕು ಎಂದು ಸಮಿತಿ ಸದಸ್ಯರು ಸರ್ಕಾರವನ್ನು ಒತ್ತಾಯಿಸಿದರು.
ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಬೇಕು ಮತ್ತು ಸಂಕಷ್ಟ ಸೂತ್ರದ ಕುರಿತು ಎಲ್ಲಾ ಪಾಲುದಾರರು ಒಮ್ಮತಕ್ಕೆ ಬರುವವರೆಗೆ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಕೇಂದ್ರಕ್ಕೆ ಕಳುಹಿಸಬೇಕು ಎಂದು ರೈತರು ಸರ್ಕಾರಕ್ಕೆ ಮನವಿ ಮಾಡಿದರು.
Chief Minister Siddaramaiah on Friday said the State Government agrees with farmers’ view not to release water to TN, but that can amount to contempt of court and lead to dismissal of the government. Explaining the government’s predicament to members of the Karnataka Jalasamrakshana Samithi — a group of organisations, including farmers’ associations, the CM said if water is not released to TN, the Centre can take control of the State’s reservoirs.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 04:45 pm
HK News Desk
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
14-05-25 06:33 pm
Mangalore Correspondent
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm