ಬ್ರೇಕಿಂಗ್ ನ್ಯೂಸ್
01-10-23 04:55 pm HK News Desk ಕರ್ನಾಟಕ
ಚಿಕ್ಕಮಗಳೂರು, ಅ.1: ಕೆಜೆ ಹಳ್ಳಿ- ಡಿಜೆಹಳ್ಳಿ ಕೇಸಲ್ಲಿ ಅವರದ್ದೇ ಶಾಸಕರಿಗೆ ಕಾಂಗ್ರೆಸ್ ಬೆಂಬಲ ಕೊಡ್ಲಿಲ್ಲ. ಕಾಂಗ್ರೆಸ್ ಶಾಸಕರ ಮನೆ ಸುಟ್ಟರೂ ಯಾರೂ ಹೋಗಲಿಲ್ಲ, ನಾವೇ ಅವರ ರಕ್ಷಣೆಗೆ ಹೋಗಿದ್ದು. ಎಷ್ಟಂದ್ರೆ ಕಾಂಗ್ರೆಸ್ ತನ್ನ ಶಾಸಕರಿಗೆ ನೈತಿಕ ಬೆಂಬಲವನ್ನೂ ಕೊಡಲಿಲ್ಲ ಎಂದು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ಕೆಜೆ ಹಳ್ಳಿ- ಡಿಜೆಹಳ್ಳಿ ಮತ್ತು ಹುಬ್ಬಳ್ಳಿ ಪ್ರಕರಣ ಆದ ಸಂದರ್ಭದಲ್ಲಿ ಕಾಂಗ್ರೆಸ್ ದೇಶದ್ರೋಹಿಗಳ ಪರ ನಿಂತಿತ್ತು. ಅಲ್ಲಿ ತಾವು ತಪ್ಪು ಮಾಡಿದ್ದೇವೆ ಎಂದು ಕಾಂಗ್ರೆಸ್ಸಿಗೆ ಇಂದು ಅರಿವಾಗ್ತಿದೆ. ಪೊಲೀಸ್ ಸ್ಟೇಷನ್, ಮನೆ, ವಾಹನ ಎಲ್ಲವನ್ನೂ ಸುಟ್ಟರು. ಕೆಜೆ ಹಳ್ಳಿ-ಡಿಜೆಹಳ್ಳಿ ಒಂದು ರೀತಿ ಸ್ಮಶಾನವಾಗಿತ್ತು, ಅದಕ್ಕೆ ಕಾಂಗ್ರೆಸ್ ಕುಮ್ಮಕ್ಕಿತ್ತು.
ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರೋದ್ರ ಜೊತೆಗೆ ಒಂದು ಸಮುದಾಯದ ಓಲೈಕೆಗೆ ಕಾಂಗ್ರೆಸ್ ಮುಂದಾಗಿತ್ತು. ಇವತ್ತು ನ್ಯಾಯುತವಾದ ತನಿಖೆ ಮಾಡಿದರೆ ತಪ್ಪು ಮಾಡಿದ್ದು ಯಾರೆಂದು ಗೊತ್ತಾಗುತ್ತೆ ಎಂದು ಶೋಭಾ ಹೇಳಿದರು. ಬಿಜೆಪಿ ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆ ಆಗುತ್ತಿರುವ ವಿಚಾರದ ಪ್ರಶ್ನೆಗೆ, ನಮ್ಮ ಮುಖಂಡರು, ಮಾಜಿ ಶಾಸಕರನ್ನ ಕಾಂಗ್ರೆಸಿಗರು ಆಮಿಷ ಒಡ್ಡಿ ಸೆಳೆಯುತ್ತಿದ್ದಾರೆ. ಆಂತರಿಕವಾಗಿ ಕಾಂಗ್ರೆಸ್ ಸೇಫ್ ಇಲ್ಲ, ಬಹಳ ಗಲಿಬಿಲಿಯಲ್ಲಿದ್ದಾರೆ. ಅವರಿಗೆ ಅಸುರಕ್ಷತೆ ಕಾಡ್ತಿದೆ, ಅದಕ್ಕೆ ಬಿಜೆಪಿಯಿಂದ ಕರೆದುಕೊಳ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಮೋದಿಯವರು, ಪ್ರಪಂಚದಲ್ಲಿ ಭಾರತವನ್ನ ಅಗ್ರಸ್ಥಾನದಲ್ಲಿ ನಿಲ್ಲಿಸುವ ಕೆಲಸ ಮಾಡ್ತಿದ್ದಾರೆ. ಮೋದಿ ಜೊತೆ ಜನರು ಕೈಜೋಡಿಸಬೇಕು, 2024ಕ್ಕೆ ಅತ್ಯಧಿಕ ಮತಗಳ ಅಂತರದಲ್ಲಿ ಮೋದಿಯನ್ನು ಮತ್ತೆ ಗೆಲ್ಲಿಸೋಣ. ಶಾಸಕರು, ಎಂ.ಪಿ. ಅಧಿಕಾರ ಇರಬಹುದು, ಇಲ್ಲದಿರಬಹುದು. ಆದರೆ, ದೇಶ ಉಳಿಯೋದು ಮುಖ್ಯ. ಹಾಗಾಗಿ, ಎಲ್ಲರಿಗೂ ಪ್ರಾರ್ಥನೆ ಮಾಡ್ತೀನಿ, ಮೋದಿ, ದೇಶಕ್ಕಾಗಿ ಕೆಲಸ ಮಾಡಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
The KJ Halli-DJ Halli case, the Congress did not support their own MLAs. Congress MLAs houses were burnt down but no one went, we went to their rescue. Udupi MP Shobha Karandlaje said that the Congress did not even give moral support to its MLAs.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm