ಬ್ರೇಕಿಂಗ್ ನ್ಯೂಸ್
02-10-23 12:31 pm HK News Desk ಕರ್ನಾಟಕ
ಶಿವಮೊಗ್ಗ, ಅ.2: ಭಾನುವಾರ ಸಂಜೆ ಈದ್ ಮಿಲಾದ್ ಮೆರವಣಿಗೆ ನಡೆಯುತ್ತಿದ್ದಾಗ ಶಿವಮೊಗ್ಗ ನಗರದ ರಾಗಿಗುಡ್ಡ ರಸ್ತೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಿದ ಘಟನೆ ನಡೆದಿದ್ದು ಇದರ ಬೆನ್ನಲ್ಲೇ ಪೊಲೀಸರು ಲಾಠಿಚಾರ್ಜ್ ನಡೆಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಸದ್ಯ ಸ್ಥಳದಲ್ಲಿ ಪೊಲೀಸರು ಬೀಡು ಬಿಟ್ಟಿದ್ದಾರೆ. ಸ್ಥಳಕ್ಕೆ ಪೂರ್ವ ವಲಯ ಐಜಿಪಿ ತ್ಯಾಗರಾಜನ್ ಭೇಟಿ ನೀಡಿದ್ದಾರೆ. ಅಲ್ಲದೇ ಆರ್ಎಎಫ್ ತಂಡ ಸ್ಥಳದಲ್ಲಿ ಮೊಕ್ಕಾಂ ಹೂಡಿದೆ.
ಕಲ್ಲು ತೂರಾಟ ಘಟನೆಯಲ್ಲಿ ಐದಾರು ಮಂದಿಗೆ ಗಾಯಗಳಾಗಿವೆ. ಎಸ್ಪಿ ಮಿಥುನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದಾಗಲೇ ಕಲ್ಲು ತೂರಾಟ ನಡೆದಿತ್ತು. ಉದ್ರಿಕ್ತರನ್ನು ಚದುರಿಸಿ ರಾಗಿಗುಡ್ಡಕ್ಕೆ ಸೀಮಿತವಾಗಿ 144 ಸೆಕ್ಷನ್ ಜಾರಿಗೊಳಿಸಿ, ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಪೊಲೀಸರ ಮೇಲೆಯೂ ಕಲ್ಲು ತೂರಿದ್ದು ಎಷ್ಟು ಮಂದಿ ಗಾಯಗೊಂಡಿದ್ದಾರೆಂಬ ಮಾಹಿತಿ ನೀಡಿಲ್ಲ.




ಘರ್ಷಣೆ ನಡೆದ ಸ್ಥಳಗಳಿಗೆ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಿದ್ದರು. ಈ ವೇಳೆ, ಪೊಲೀಸರು ಹೋಗುತ್ತಿದ್ದಂತಯೇ ಅವರ ಮೇಲೆ ಕಲ್ಲು ಬೀಸಿದ್ದರು. ಸ್ಥಳದಲ್ಲಿ ಸೀಮಿತ ಸಂಖ್ಯೆಯಲ್ಲಿದ್ದ ಪೊಲೀಸರು ಅಲ್ಲಿಂದ ವಾಪಸ್ ಆಗಿದ್ದರು. ಕೆಲವೇ ಹೊತ್ತಿನಲ್ಲಿ ಹೆಚ್ಚುವರಿ ಪೊಲೀಸ್ ಸಿಬಂದಿ ಆಗಮಿಸಿದ್ದು ಗುಂಪನ್ನು ಚದುರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಲ್ಲು ತೂರಾಟ ಘಟನೆಗೆ ಕಾರಣರಾದವರನ್ನು ಪೊಲೀಸರು ಗುರುತಿಸಿದ್ದು ಹಲವರನ್ನು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ, 7 ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಮನೆ ಮುಂದೆ ನಿಲ್ಲಿಸಿದ್ದ ಆಟೋ, ಕಾರು, ಬೈಕ್ಗಳಿಗೂ ಹಾನಿಯಾಗಿವೆ.
ಎಸ್ಪಿ ಮಿಥುನ್ ಕುಮಾರ್ ಪ್ರತಿಕ್ರಿಯಿಸಿದ್ದು ಎರಡು ಗುಂಪುಗಳ ಜೊತೆ ಮಾತನಾಡಿದ್ದೇನೆ. ಮೆರವಣಿಗೆ ವೇಳೆ ಯುವಕರ ಗುಂಪು ದಾಂಧಲೆ ನಡೆಸಿದೆ. ಘಟನೆಯಿಂದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮನೆ ಹಾಗೂ ವಾಹನಗಳಿಗೆ ಹಾನಿಯಾಗಿರುವ ಕುರಿತು ದೂರ ನೀಡಲು ತಿಳಸಲಾಗಿದೆ. ಘಟನೆಯಲ್ಲಿ ನಮ್ಮ ಕೆಲ ಸಿಬ್ಬಂದಿಗೂ ಗಾಯಗಳಾಗಿವೆ. ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಡಿಯೋ ಪರಿಶೀಲನೆ ನಡೆಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
Communal violence erupted in Shivamogga, IGP visits spot, stone pelted on 7 houses, RAP on spot, many taken to custody.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm