ಬ್ರೇಕಿಂಗ್ ನ್ಯೂಸ್
02-10-23 12:31 pm HK News Desk ಕರ್ನಾಟಕ
ಶಿವಮೊಗ್ಗ, ಅ.2: ಭಾನುವಾರ ಸಂಜೆ ಈದ್ ಮಿಲಾದ್ ಮೆರವಣಿಗೆ ನಡೆಯುತ್ತಿದ್ದಾಗ ಶಿವಮೊಗ್ಗ ನಗರದ ರಾಗಿಗುಡ್ಡ ರಸ್ತೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಿದ ಘಟನೆ ನಡೆದಿದ್ದು ಇದರ ಬೆನ್ನಲ್ಲೇ ಪೊಲೀಸರು ಲಾಠಿಚಾರ್ಜ್ ನಡೆಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಸದ್ಯ ಸ್ಥಳದಲ್ಲಿ ಪೊಲೀಸರು ಬೀಡು ಬಿಟ್ಟಿದ್ದಾರೆ. ಸ್ಥಳಕ್ಕೆ ಪೂರ್ವ ವಲಯ ಐಜಿಪಿ ತ್ಯಾಗರಾಜನ್ ಭೇಟಿ ನೀಡಿದ್ದಾರೆ. ಅಲ್ಲದೇ ಆರ್ಎಎಫ್ ತಂಡ ಸ್ಥಳದಲ್ಲಿ ಮೊಕ್ಕಾಂ ಹೂಡಿದೆ.
ಕಲ್ಲು ತೂರಾಟ ಘಟನೆಯಲ್ಲಿ ಐದಾರು ಮಂದಿಗೆ ಗಾಯಗಳಾಗಿವೆ. ಎಸ್ಪಿ ಮಿಥುನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದಾಗಲೇ ಕಲ್ಲು ತೂರಾಟ ನಡೆದಿತ್ತು. ಉದ್ರಿಕ್ತರನ್ನು ಚದುರಿಸಿ ರಾಗಿಗುಡ್ಡಕ್ಕೆ ಸೀಮಿತವಾಗಿ 144 ಸೆಕ್ಷನ್ ಜಾರಿಗೊಳಿಸಿ, ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಪೊಲೀಸರ ಮೇಲೆಯೂ ಕಲ್ಲು ತೂರಿದ್ದು ಎಷ್ಟು ಮಂದಿ ಗಾಯಗೊಂಡಿದ್ದಾರೆಂಬ ಮಾಹಿತಿ ನೀಡಿಲ್ಲ.
ಘರ್ಷಣೆ ನಡೆದ ಸ್ಥಳಗಳಿಗೆ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಿದ್ದರು. ಈ ವೇಳೆ, ಪೊಲೀಸರು ಹೋಗುತ್ತಿದ್ದಂತಯೇ ಅವರ ಮೇಲೆ ಕಲ್ಲು ಬೀಸಿದ್ದರು. ಸ್ಥಳದಲ್ಲಿ ಸೀಮಿತ ಸಂಖ್ಯೆಯಲ್ಲಿದ್ದ ಪೊಲೀಸರು ಅಲ್ಲಿಂದ ವಾಪಸ್ ಆಗಿದ್ದರು. ಕೆಲವೇ ಹೊತ್ತಿನಲ್ಲಿ ಹೆಚ್ಚುವರಿ ಪೊಲೀಸ್ ಸಿಬಂದಿ ಆಗಮಿಸಿದ್ದು ಗುಂಪನ್ನು ಚದುರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಲ್ಲು ತೂರಾಟ ಘಟನೆಗೆ ಕಾರಣರಾದವರನ್ನು ಪೊಲೀಸರು ಗುರುತಿಸಿದ್ದು ಹಲವರನ್ನು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ, 7 ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಮನೆ ಮುಂದೆ ನಿಲ್ಲಿಸಿದ್ದ ಆಟೋ, ಕಾರು, ಬೈಕ್ಗಳಿಗೂ ಹಾನಿಯಾಗಿವೆ.
ಎಸ್ಪಿ ಮಿಥುನ್ ಕುಮಾರ್ ಪ್ರತಿಕ್ರಿಯಿಸಿದ್ದು ಎರಡು ಗುಂಪುಗಳ ಜೊತೆ ಮಾತನಾಡಿದ್ದೇನೆ. ಮೆರವಣಿಗೆ ವೇಳೆ ಯುವಕರ ಗುಂಪು ದಾಂಧಲೆ ನಡೆಸಿದೆ. ಘಟನೆಯಿಂದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮನೆ ಹಾಗೂ ವಾಹನಗಳಿಗೆ ಹಾನಿಯಾಗಿರುವ ಕುರಿತು ದೂರ ನೀಡಲು ತಿಳಸಲಾಗಿದೆ. ಘಟನೆಯಲ್ಲಿ ನಮ್ಮ ಕೆಲ ಸಿಬ್ಬಂದಿಗೂ ಗಾಯಗಳಾಗಿವೆ. ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಡಿಯೋ ಪರಿಶೀಲನೆ ನಡೆಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
Communal violence erupted in Shivamogga, IGP visits spot, stone pelted on 7 houses, RAP on spot, many taken to custody.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
22-08-25 05:07 pm
Mangalore Correspondent
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
22-08-25 09:57 pm
HK News Desk
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm