ಬ್ರೇಕಿಂಗ್ ನ್ಯೂಸ್
02-10-23 12:31 pm HK News Desk ಕರ್ನಾಟಕ
ಶಿವಮೊಗ್ಗ, ಅ.2: ಭಾನುವಾರ ಸಂಜೆ ಈದ್ ಮಿಲಾದ್ ಮೆರವಣಿಗೆ ನಡೆಯುತ್ತಿದ್ದಾಗ ಶಿವಮೊಗ್ಗ ನಗರದ ರಾಗಿಗುಡ್ಡ ರಸ್ತೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಿದ ಘಟನೆ ನಡೆದಿದ್ದು ಇದರ ಬೆನ್ನಲ್ಲೇ ಪೊಲೀಸರು ಲಾಠಿಚಾರ್ಜ್ ನಡೆಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಸದ್ಯ ಸ್ಥಳದಲ್ಲಿ ಪೊಲೀಸರು ಬೀಡು ಬಿಟ್ಟಿದ್ದಾರೆ. ಸ್ಥಳಕ್ಕೆ ಪೂರ್ವ ವಲಯ ಐಜಿಪಿ ತ್ಯಾಗರಾಜನ್ ಭೇಟಿ ನೀಡಿದ್ದಾರೆ. ಅಲ್ಲದೇ ಆರ್ಎಎಫ್ ತಂಡ ಸ್ಥಳದಲ್ಲಿ ಮೊಕ್ಕಾಂ ಹೂಡಿದೆ.
ಕಲ್ಲು ತೂರಾಟ ಘಟನೆಯಲ್ಲಿ ಐದಾರು ಮಂದಿಗೆ ಗಾಯಗಳಾಗಿವೆ. ಎಸ್ಪಿ ಮಿಥುನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದಾಗಲೇ ಕಲ್ಲು ತೂರಾಟ ನಡೆದಿತ್ತು. ಉದ್ರಿಕ್ತರನ್ನು ಚದುರಿಸಿ ರಾಗಿಗುಡ್ಡಕ್ಕೆ ಸೀಮಿತವಾಗಿ 144 ಸೆಕ್ಷನ್ ಜಾರಿಗೊಳಿಸಿ, ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಪೊಲೀಸರ ಮೇಲೆಯೂ ಕಲ್ಲು ತೂರಿದ್ದು ಎಷ್ಟು ಮಂದಿ ಗಾಯಗೊಂಡಿದ್ದಾರೆಂಬ ಮಾಹಿತಿ ನೀಡಿಲ್ಲ.




ಘರ್ಷಣೆ ನಡೆದ ಸ್ಥಳಗಳಿಗೆ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಿದ್ದರು. ಈ ವೇಳೆ, ಪೊಲೀಸರು ಹೋಗುತ್ತಿದ್ದಂತಯೇ ಅವರ ಮೇಲೆ ಕಲ್ಲು ಬೀಸಿದ್ದರು. ಸ್ಥಳದಲ್ಲಿ ಸೀಮಿತ ಸಂಖ್ಯೆಯಲ್ಲಿದ್ದ ಪೊಲೀಸರು ಅಲ್ಲಿಂದ ವಾಪಸ್ ಆಗಿದ್ದರು. ಕೆಲವೇ ಹೊತ್ತಿನಲ್ಲಿ ಹೆಚ್ಚುವರಿ ಪೊಲೀಸ್ ಸಿಬಂದಿ ಆಗಮಿಸಿದ್ದು ಗುಂಪನ್ನು ಚದುರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಲ್ಲು ತೂರಾಟ ಘಟನೆಗೆ ಕಾರಣರಾದವರನ್ನು ಪೊಲೀಸರು ಗುರುತಿಸಿದ್ದು ಹಲವರನ್ನು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ, 7 ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಮನೆ ಮುಂದೆ ನಿಲ್ಲಿಸಿದ್ದ ಆಟೋ, ಕಾರು, ಬೈಕ್ಗಳಿಗೂ ಹಾನಿಯಾಗಿವೆ.
ಎಸ್ಪಿ ಮಿಥುನ್ ಕುಮಾರ್ ಪ್ರತಿಕ್ರಿಯಿಸಿದ್ದು ಎರಡು ಗುಂಪುಗಳ ಜೊತೆ ಮಾತನಾಡಿದ್ದೇನೆ. ಮೆರವಣಿಗೆ ವೇಳೆ ಯುವಕರ ಗುಂಪು ದಾಂಧಲೆ ನಡೆಸಿದೆ. ಘಟನೆಯಿಂದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮನೆ ಹಾಗೂ ವಾಹನಗಳಿಗೆ ಹಾನಿಯಾಗಿರುವ ಕುರಿತು ದೂರ ನೀಡಲು ತಿಳಸಲಾಗಿದೆ. ಘಟನೆಯಲ್ಲಿ ನಮ್ಮ ಕೆಲ ಸಿಬ್ಬಂದಿಗೂ ಗಾಯಗಳಾಗಿವೆ. ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಡಿಯೋ ಪರಿಶೀಲನೆ ನಡೆಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
Communal violence erupted in Shivamogga, IGP visits spot, stone pelted on 7 houses, RAP on spot, many taken to custody.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm