ಬ್ರೇಕಿಂಗ್ ನ್ಯೂಸ್
03-10-23 03:17 pm HK News Desk ಕರ್ನಾಟಕ
ಶಿವಮೊಗ್ಗ, ಅ.3: ಶಿವಮೊಗ್ಗ ನಗರದ ರಾಗಿಗುಡ್ಡ ಗಲಭೆ ಪೀಡಿತ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಶಿವಮೊಗ್ಗದಲ್ಲಿ ಗಣೇಶ ವಿಸರ್ಜನೆ ಅದ್ಧೂರಿಯಾಗಿ ನಡೆದಿದೆ. ಆದರೆ, ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಗಲಭೆ ನಡೆದಿದೆ. ಘಟನೆ ಸಂಬಂಧಿಸಿ ಈಗಾಗಲೇ 60 ಜನರನ್ನು ಬಂಧಿಸಲಾಗಿದೆ. 24 ಕೇಸುಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಈ ಘಟನೆ ನಡೆಯಬಾರದಿತ್ತು. ಘಟನೆ ನಡೆದಿರುವುದಕ್ಕೆ ನನಗೆ ವಿಷಾದವಿದೆ. ಶಿವಮೊಗ್ಗದ ಹಿನ್ನೆಲೆ ಗಮನಿಸಿ ಗಲಭೆ ನಡೆದ ಪ್ರದೇಶದಲ್ಲಿ 144 ಸೆಕ್ಷನ್ ವಿಧಿಸಲಾಗಿದೆ. ಆದರೆ, ರಾಗಿಗುಡ್ಡ ಹೊರತುಪಡಿಸಿ ಬಾಕಿ ಕಡೆ ಸಡಿಲಗೊಳಿಸಲಾಗಿದೆ. ಮತ್ತೆ ಯಾವುದೇ ಘಟನೆ ನಡೆಯಬಾರದು ಎಂದು ಸೆಕ್ಷನ್ ಬಿಗಿ ಮಾಡಲಾಗಿದೆ ಎಂದ ಅವರು, ಹೊರಗಿನಿಂದ ಬಂದವರು ಕಲ್ಲು ತೂರಾಟ ನಡೆಸಿದ್ದಾರೆಂಬುದರ ಬಗ್ಗೆ ನಾನು ಮಾತನಾಡಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಶಿವಮೊಗ್ಗ ಜನತೆಗೆ ನಾನು ಮನವಿ ಮಾಡುತ್ತೇನೆ. ನಗರದಲ್ಲಿ ಶಾಂತಿ ಕಾಪಾಡಬೇಕು. ಕಾನೂನು ಬದ್ಧವಾಗಿರುವ ಬಂಟಿಂಗ್ಸ್, ಬ್ಯಾನರ್ ಅಳವಡಿಸಲು ಅವಕಾಶವಿದೆ. ಸಂಪ್ರದಾಯ ಪ್ರದರ್ಶನ ಮಾಡುವ ಬಗ್ಗೆ ಯಾವುದೇ ವಿರೋಧವಿಲ್ಲ. ರಾಗಿಗುಡ್ಡದಲ್ಲಿ ನಾನು ಕೆಲವಾರು ಮನೆಗಳಿಗೆ ಭೇಟಿ ನೀಡಿದ್ದು ಒಡೆದು ಹಾಕಿದ್ದನ್ನು ನೋಡಿದೆ. ಇದನ್ನು ನೋಡಿದಾಗ ಬೇಸರವಾಗುತ್ತೆ. ನಮ್ಮ, ನಿಮ್ಮ ಮನೆಗಳನ್ನು ಒಡೆದಾಗ ಬೇಸರವಾಗುವುದಿಲ್ಲವೇ.. ಪಾಪ ಕಷ್ಟಪಟ್ಟು ಮನೆಗಳನ್ನು ಕಟ್ಟಿಕೊಂಡಿರುತ್ತಾರೆ.
ಯಾರಿಂದಲೂ ಯಾರಿಗೂ ತೊಂದರೆಯಾಗಬಾರದು. ಕೆಲವು ಕಿಡಿಗೇಡಿಗಳು ಈ ಕೃತ್ಯ ಮಾಡಿದ್ದಾರೆ. ಯಾರು ತಪ್ಪಿತಸ್ಥರಿದ್ದಾರೆ ಅವರ ಮೇಲೆ ಕ್ರಮ ಆಗುತ್ತೆ. ಕಾನೂನಿನಲ್ಲಿ ಅವಕಾಶವಿದ್ರೆ ನಷ್ಟವಾದವರಿಗೆ ಪರಿಹಾರ ಕೊಡುತ್ತೇವೆ. ಇಲ್ಲವಾದರೆ ನಾವು ಸೇರಿ ಕೊಡ್ತೆವೆ. ಶಿವಮೊಗ್ಗ ಶಾಂತಿಯಿಂದ ಇರಬೇಕು. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದಿದ್ದಾರೆ.
Speaking to presspersons at the hospital, the minister said that he visited the violence-hit areas as a representative of the government, not as a politician. “Everybody is equal before the government and the law. The police have arrested 60 people and registered 24 cases. They have taken steps necessary to ensure peace in the city,” he said.
04-02-25 11:32 pm
HK News Desk
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
Two-wheeler rider fined, Bangalore Traffic: ಎ...
04-02-25 03:09 pm
Cow theft, Mankal Vaidya: ಇನ್ಮುಂದೆ ಗೋಹತ್ಯೆ ನಡ...
04-02-25 12:59 pm
Mandya Car Canal Accident, Hassan Drowning: ಮ...
03-02-25 10:38 pm
04-02-25 10:49 pm
HK News Desk
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
NHAI fined toll tax: ಅಂಗವಿಕಲ ಮಹಿಳೆಗೆ 40 ರೂ. ಟ...
01-02-25 09:51 pm
04-02-25 07:47 pm
Mangalore Correspondent
U T Khader, Mangalore: ವಿಧಾನಸೌಧಕ್ಕೆ ನಾಯಿ ಕಾಟ...
03-02-25 07:38 pm
Mangalore coast Gaurd, NMPT: ತಿಳಿನೀಲ ಸಮುದ್ರದಲ...
02-02-25 09:49 pm
Kotekar Bank Robbery, Shashi Tevar, update: ಬ...
02-02-25 05:02 pm
Air India Express, Mangalore Delhi flight: ಮಂ...
01-02-25 07:47 pm
03-02-25 05:46 pm
Mangalore Correspondent
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm
Attack on Bus, Hassan, Crime: ಬೆಂಗಳೂರಿನಿಂದ ಮಂ...
31-01-25 10:22 am
Mangalore court, Rape, Crime: 15 ವರ್ಷದ ಬಾಲಕಿ...
30-01-25 11:37 am