ಬ್ರೇಕಿಂಗ್ ನ್ಯೂಸ್
03-10-23 03:17 pm HK News Desk ಕರ್ನಾಟಕ
ಶಿವಮೊಗ್ಗ, ಅ.3: ಶಿವಮೊಗ್ಗ ನಗರದ ರಾಗಿಗುಡ್ಡ ಗಲಭೆ ಪೀಡಿತ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಶಿವಮೊಗ್ಗದಲ್ಲಿ ಗಣೇಶ ವಿಸರ್ಜನೆ ಅದ್ಧೂರಿಯಾಗಿ ನಡೆದಿದೆ. ಆದರೆ, ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಗಲಭೆ ನಡೆದಿದೆ. ಘಟನೆ ಸಂಬಂಧಿಸಿ ಈಗಾಗಲೇ 60 ಜನರನ್ನು ಬಂಧಿಸಲಾಗಿದೆ. 24 ಕೇಸುಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಈ ಘಟನೆ ನಡೆಯಬಾರದಿತ್ತು. ಘಟನೆ ನಡೆದಿರುವುದಕ್ಕೆ ನನಗೆ ವಿಷಾದವಿದೆ. ಶಿವಮೊಗ್ಗದ ಹಿನ್ನೆಲೆ ಗಮನಿಸಿ ಗಲಭೆ ನಡೆದ ಪ್ರದೇಶದಲ್ಲಿ 144 ಸೆಕ್ಷನ್ ವಿಧಿಸಲಾಗಿದೆ. ಆದರೆ, ರಾಗಿಗುಡ್ಡ ಹೊರತುಪಡಿಸಿ ಬಾಕಿ ಕಡೆ ಸಡಿಲಗೊಳಿಸಲಾಗಿದೆ. ಮತ್ತೆ ಯಾವುದೇ ಘಟನೆ ನಡೆಯಬಾರದು ಎಂದು ಸೆಕ್ಷನ್ ಬಿಗಿ ಮಾಡಲಾಗಿದೆ ಎಂದ ಅವರು, ಹೊರಗಿನಿಂದ ಬಂದವರು ಕಲ್ಲು ತೂರಾಟ ನಡೆಸಿದ್ದಾರೆಂಬುದರ ಬಗ್ಗೆ ನಾನು ಮಾತನಾಡಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಶಿವಮೊಗ್ಗ ಜನತೆಗೆ ನಾನು ಮನವಿ ಮಾಡುತ್ತೇನೆ. ನಗರದಲ್ಲಿ ಶಾಂತಿ ಕಾಪಾಡಬೇಕು. ಕಾನೂನು ಬದ್ಧವಾಗಿರುವ ಬಂಟಿಂಗ್ಸ್, ಬ್ಯಾನರ್ ಅಳವಡಿಸಲು ಅವಕಾಶವಿದೆ. ಸಂಪ್ರದಾಯ ಪ್ರದರ್ಶನ ಮಾಡುವ ಬಗ್ಗೆ ಯಾವುದೇ ವಿರೋಧವಿಲ್ಲ. ರಾಗಿಗುಡ್ಡದಲ್ಲಿ ನಾನು ಕೆಲವಾರು ಮನೆಗಳಿಗೆ ಭೇಟಿ ನೀಡಿದ್ದು ಒಡೆದು ಹಾಕಿದ್ದನ್ನು ನೋಡಿದೆ. ಇದನ್ನು ನೋಡಿದಾಗ ಬೇಸರವಾಗುತ್ತೆ. ನಮ್ಮ, ನಿಮ್ಮ ಮನೆಗಳನ್ನು ಒಡೆದಾಗ ಬೇಸರವಾಗುವುದಿಲ್ಲವೇ.. ಪಾಪ ಕಷ್ಟಪಟ್ಟು ಮನೆಗಳನ್ನು ಕಟ್ಟಿಕೊಂಡಿರುತ್ತಾರೆ.
ಯಾರಿಂದಲೂ ಯಾರಿಗೂ ತೊಂದರೆಯಾಗಬಾರದು. ಕೆಲವು ಕಿಡಿಗೇಡಿಗಳು ಈ ಕೃತ್ಯ ಮಾಡಿದ್ದಾರೆ. ಯಾರು ತಪ್ಪಿತಸ್ಥರಿದ್ದಾರೆ ಅವರ ಮೇಲೆ ಕ್ರಮ ಆಗುತ್ತೆ. ಕಾನೂನಿನಲ್ಲಿ ಅವಕಾಶವಿದ್ರೆ ನಷ್ಟವಾದವರಿಗೆ ಪರಿಹಾರ ಕೊಡುತ್ತೇವೆ. ಇಲ್ಲವಾದರೆ ನಾವು ಸೇರಿ ಕೊಡ್ತೆವೆ. ಶಿವಮೊಗ್ಗ ಶಾಂತಿಯಿಂದ ಇರಬೇಕು. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದಿದ್ದಾರೆ.
Speaking to presspersons at the hospital, the minister said that he visited the violence-hit areas as a representative of the government, not as a politician. “Everybody is equal before the government and the law. The police have arrested 60 people and registered 24 cases. They have taken steps necessary to ensure peace in the city,” he said.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm