ಬ್ರೇಕಿಂಗ್ ನ್ಯೂಸ್
03-10-23 05:25 pm HK News Desk ಕರ್ನಾಟಕ
ಕೋಲಾರ, ಅ.3: ಶಿವಮೊಗ್ಗದಲ್ಲಿ ನಡೆದ ಕೋಮುಗಲಭೆ ಪೂರ್ವ ನಿಯೋಜಿತ ಕೃತ್ಯ. ಇದು ಎಲ್ಲಾ ರೀತಿಯ ಅನುಮಾನಗಳನ್ನ ಹುಟ್ಟುಹಾಕಿವೆ. ಸಿಮಿ ಬ್ಯಾನ್ ಆಗಿ ಕಚೇರಿ ಮೇಲೆ ದಾಳಿ ಮಾಡಿದಾಗ ಅಲ್ಲಿ ಅವರ ಅಜೆಂಡಾ ತೋರಿಸುವ ಭೂಪಟ ಸಿಕ್ಕಿತ್ತು. ಅದರಲ್ಲಿ ಘಜವಾಹಿಂದ್ ಉಲ್ಲೇಖ ಮಾಡಿದ್ದರು. ದೇಶದಲ್ಲಿ ಇಸ್ಲಾಮಿ ಧರ್ಮ ಸ್ಥಾಪಿಸುವುದೇ ಉದ್ದೇಶವಾಗಿದೆ. ಅದನ್ನೀಗ ಜಾರಿಗೊಳಿಸಲು ಮತಾಂಧ ಶಕ್ತಿಗಳು ಮುಂದಾಗಿವೆ ಬಿಜೆಪಿ ಮುಖಂಡ ಸಿಟಿ ರವಿ ಹೇಳಿದ್ದಾರೆ.
ಘಜವಾ ಹಿಂದ್ ಟಾಸ್ಕ್ ಪೂರ್ಣಗೊಳಿಸಬೇಕೆಂಬ ಅಜೆಂಡಾ ಇಟ್ಟುಕೊಂಡು ಕೆಲಸ ಮಾಡಿದ್ದಾರೆ. ಮೊಘಲರು ಭಾರತದ ಯಾವ್ಯಾವ ಸ್ಥಳವನ್ನ ಆಳ್ವಿಕೆ ನಡೆಸುತ್ತಿದ್ದರು ಅದನ್ನ ಅದರಲ್ಲಿ ಉಲ್ಲೇಖ ಮಾಡಿದ್ದಾರೆ. ಘಜವಾ ಹಿಂದ್ ಉದ್ದೇಶ ಇಟ್ಟುಕೊಂಡು ಕೆಲಸ ಮಾಡುವವವರು ನಮ್ಮ ನಡುವೆ ಇದ್ದಾರೆ ಅನ್ನೋದಕ್ಕೆ ಶಿವಮೊಗ್ಗದ ಘಟನೆಯೆ ಸಾಕ್ಷಿ. ಇವರ ಉದ್ದೇಶ ಬರ್ಬರ ಆಳ್ವಿಕೆ ತರುವುದು.
ಔರಂಗಜೇಬ್ ಮತಾಂತರದ ಉದ್ದೇಶ ಇಟ್ಟುಕೊಂಡಿದ್ದವನು. ಸನಾತನ ಧರ್ಮ, ಭಾರತೀಯತೆ ನಾಶ ಮಾಡುವುದು ಔರಂಗಜೇಬ್ ಉದ್ದೇಶವಾಗಿತ್ತು. ಇಂತಹ ಉದ್ದೇಶಕ್ಕೆ ಶಿವಮೊಗ್ಗದಲ್ಲಿ ಜಿಲ್ಲಾಡಳಿತ ಹಾಗೂ ಕಾಂಗ್ರೆಸ್ ಸರ್ಕಾರ ಅವಕಾಶ ಕೊಟ್ಟಿದೆ. ಟಿಪ್ಪು, ಔರಂಗಜೇಬ್ ಉದ್ದೇಶ ಘಜವಾಹಿಂದ್ ಸ್ಥಾಪನೆ ಮಾಡುವುದಾಗಿತ್ತು. ಟಿಪ್ಪು ಆಡಳಿತ ಮುಂದುವರೆದಿದ್ದರೆ ಈ ರಾಜ್ಯದಲ್ಲಿ ಕನ್ನಡ ಎಂಬುದನ್ನ ಉಳಿಸಿಕೊಳ್ಳುವುದಕ್ಕೆ ಕಷ್ಟವಾಗುತ್ತಿತ್ತು. ಅಂತಹ ನಂಬಿಕೆ ದ್ರೋಹಿ, ಕನ್ನಡ ದ್ರೋಹಿಯನ್ನ ವಿಜೃಂಭಿಸಲು ಸರ್ಕಾರ ಸಹಾಯ ಮಾಡಿದೆ.
ಇವರೆಲ್ಲರ ಉದ್ದೇಶ ಮೊಘಲ್ ಸಾಮ್ರಾಜ್ಯ ಸ್ಥಾಪನೆ ಮಾಡುವುದೇ ಆಗಿದೆ. ಇದಕ್ಕೆ ಜಿಲ್ಲಾಡಳಿತ ಕುಮ್ಮಕ್ಕು ಕೊಟ್ಟಿದೆ, ರಾಜಕೀಯ ಲಾಭಕ್ಕೆ ಕಾಂಗ್ರೆಸ್ ಪಕ್ಷ ಸಹಕಾರ ಮಾಡಿದೆ. ರಾಷ್ಟ್ರ ಮುಖ್ಯ ಎಂಬುದು ಕಾಂಗ್ರೇಸ್ ನ ಭಾವನೆಗಳಲ್ಲಿ ಕೊರತೆ ಆಗಿ ರಾಜಕೀಯ ಲಾಭಕ್ಕಾಗಿ ಮಾಡಿದ್ದಾರೆ. ನಾಳೆ ಇವರು ಬಿನ್ ಲಾಡೆನ್ ರೀತಿಯ ಭಯೋತ್ಪಾದಕರನ್ನೂ ಓಲೈಸುವಲ್ಲಿ ಅನುಮಾನವಿಲ್ಲ. ಆ ಕಾಲದಲ್ಲಿ ಬಿನ್ ಲಾಡೆನ್, ಟಿಪ್ಪು ಔರಂಗಜೇಬ್ ಆಗಿದ್ದರು. ಈಗಲೂ ಇವರ ಪರವಾಗಿ ತುಘಲಕ್ ದರ್ಬಾರು ಮಾಡುತ್ತಿದ್ದಾರೆ.
ಶಿವಮೊಗ್ಗ ಗಲಭೆಯ ನೇರ ಹೊಣೆ ರಾಜ್ಯ ಸರ್ಕಾರ. ಈ ಬಗ್ಗೆ ನ್ಯಾಯಾಂಗ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ. ಅಸಮರ್ಥ ಗೃಹ ಸಚಿವರು ಖಡ್ಗ ಪ್ರದರ್ಶನ ಮಾಡಿಲ್ಲ ಎಂದು ಹೇಳ್ತಾರೆ. ಇದು ಅವರ ಸರ್ಕಾರದ ಅಸಾಮರ್ಥ್ಯವನ್ನು ಕಾಣಿಸುತ್ತಿದೆ ಎಂದು ಸಿಟಿ ರವಿ ಹೇಳಿದರು.
Stone pelting at Shivamogga CT Ravi Slams incident.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm