ಬ್ರೇಕಿಂಗ್ ನ್ಯೂಸ್
03-10-23 05:35 pm HK News Desk ಕರ್ನಾಟಕ
ಶಿವಮೊಗ್ಗ, ಅ.3: ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆಂಬ ಸುಳ್ಳು ಸುದ್ಧಿ ಹರಡುತ್ತಿದೆ. ಈ ಸುದ್ಧಿ ಫಾರ್ವರ್ಡ್ ಮಾಡಿರುವ ಅಜ್ಗರ್ ಎಂಬಾತನ ವಿರುದ್ಧ ಎಫ್.ಐ.ಆರ್. ದಾಖಲಿಸಲಾಗಿದೆ. ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆಂದು ಫಾರ್ವರ್ಡ್ ಮಾಡಿರುವವರ ವಿರುದ್ಧವೂ ಎಫ್.ಐ.ಆರ್. ದಾಖಲಿಸಲಾಗುವುದು ಎಂದು ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ರಾಗುಗುಡ್ಡ ಘರ್ಷಣೆ ಹಿನ್ನೆಲೆಯಲ್ಲಿ ಬಿಗು ಬಂದೋಬಸ್ತ್ ಕೈಗೊಂಡಿರುವ ಎಸ್ಪಿ ಜಾಲತಾಣಗಳ ಮೇಲೆ ನಿಗಾ ಇಟ್ಟಿರುವುದನ್ನು ತಿಳಿಸಿದ್ದಾರೆ. ಪೊಲೀಸ್ ಎನ್ಕೌಂಟರ್ ಮಾಡಿದ್ದಾರೆಂದು ಫಾರ್ವರ್ಡ್ ಆಗಿದ್ದ ವಿಡಿಯೋ ಡಿಲಿಟ್ ಮಾಡಿಸಲಾಗಿದೆ. ಸುಳ್ಳು ಸುದ್ಧಿ ಹರಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಬೇರೆ ರಾಜ್ಯದ, ಬೇರೆ ಜಿಲ್ಲೆಗಳ ವಿಡಿಯೋಗಳನ್ನು ಹರಡಲಾಗುತ್ತಿದೆ. ಅಂತಹವರ ವಿರುದ್ಧ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗುವುದು.
ರಾಗಿಗುಡ್ಡದಲ್ಲಿ ಎರಡು ಮಾರುತಿ ವ್ಯಾನ್ ಬಂದಿರುವ ಬಗ್ಗೆ ಸುಳ್ಳು ಸುದ್ದಿ ಹರಡಲಾಗುತ್ತಿದೆ. ಅವರು ನ್ಯಾಮತಿಯಿಂದ ಮೆರವಣಿಗೆ ನೋಡಲು ಬಂದಿದ್ದವರಾಗಿದ್ದರು. ಅವರ ಬಗ್ಗೆ ಮಾಹಿತಿ ಪಡೆಯಲಾಗಿದೆ. ಈ ವಿಚಾರದಲ್ಲಿ ಸುಳ್ಳು ಸುದ್ಧಿ ಹರಡಿದರೆ ಕಾನೂನು ಕ್ರಮ ಜರುಗಿಸಲಾಗತ್ತೆ. ಅನೇಕರು ಸುಳ್ಳು ವಿಡಿಯೋಗಳನ್ನು ಹರಡುತ್ತಿದ್ದಾರೆ. ಮೆರವಣಿಗೆಯಲ್ಲಿ ಕತ್ತಿಗಳನ್ನು ಝಳಪಿಸಿರುವುದಕ್ಕೆ ಆಕ್ಷೇಪ ಮಾಡಲಾಗಿದೆ. ಆದರೆ, ಕೆಲವು ಕಡೆ ಆಟಿಕೆ ಕತ್ತಿಗಳನ್ನು ತರಲಾಗಿದೆ. ಇದು ಒರಿಜಿನಲ್ ಕತ್ತಿ ಅಲ್ಲ ಎಂಬುದು ತಿಳಿದುಬಂದಿದೆ. ಅಕಸ್ಮಾತ್ ಒರಿಜಿನಲ್ ಕತ್ತಿ ಎಂದು ಕಂಡು ಬಂದರೆ, ಅಂತಹ ವಿಡಿಯೋ ನನಗೆ ಕಳಿಸಿ. ನಾನು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇನೆ. ಯಾವುದೇ ಸುಳ್ಳು ಸುದ್ಧಿ, ವಿಡಿಯೋಗಳನ್ನು ನಂಬಬೇಡಿ ಎಂದು ಜನರಿಗೆ ಮನವಿ ಮಾಡಿದ್ದಾರೆ.
ರಾಗಿಗುಡ್ಡ ಘಟನೆಗೆ ಸಂಬಂಧಿಸಿದಂತೆ, 24 ಕೇಸುಗಳನ್ನು ದಾಖಲಿಸಿಕೊಳ್ಳಲಾಗಿದೆ. ಒಟ್ಟು 60 ಜನರನ್ನು ಬಂಧಿಸಲಾಗಿದೆ. ಸಾರ್ವಜನಿಕರು ಸುಳ್ಳು ಸುದ್ಧಿಗಳನ್ನು ನಂಬಬೇಡಿ. ಇನ್ನೂ ಹಲವರನ್ನು ಬಂಧಿಸಲಿದ್ದೆವೆ. ಘಟನೆಗೆ ಕಾರಣರಾದ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ಹೊರಗಿನಿಂದ ಬಂದವರು ಯಾರಿದ್ದಾರೆಂದು ತನಿಖೆ ಮಾಡುತ್ತಿದ್ದೇವೆ. ಎಲ್ಲಾ ಆಯಾಮಗಳಲ್ಲಿ ಸಾಕ್ಷಿಗಳು ನಮಗೆ ಸಿಕ್ಕಿದೆ. ಯಾರು ಕಾರಣಕರ್ತರಿದ್ದಾರೆ, ಅವರ ಬಗ್ಗೆ ಸಿಸಿಟಿವಿಯಲ್ಲಿ ದಾಖಲಾಗಿದೆ. ಮೆರವಣಿಗೆಯಲ್ಲಿ ಮಚ್ಚು, ಲಾಂಗು ತೋರಿಸಿದವರ ಬಗ್ಗೆ ತನಿಖೆ ನಡೆಯುತ್ತಿದೆ ಎಂದಿದ್ದಾರೆ.
Stone pelting, Miscreants share false news as encounter in Shivamogga, SP clarifies.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm