ಬ್ರೇಕಿಂಗ್ ನ್ಯೂಸ್
03-10-23 05:35 pm HK News Desk ಕರ್ನಾಟಕ
ಶಿವಮೊಗ್ಗ, ಅ.3: ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆಂಬ ಸುಳ್ಳು ಸುದ್ಧಿ ಹರಡುತ್ತಿದೆ. ಈ ಸುದ್ಧಿ ಫಾರ್ವರ್ಡ್ ಮಾಡಿರುವ ಅಜ್ಗರ್ ಎಂಬಾತನ ವಿರುದ್ಧ ಎಫ್.ಐ.ಆರ್. ದಾಖಲಿಸಲಾಗಿದೆ. ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆಂದು ಫಾರ್ವರ್ಡ್ ಮಾಡಿರುವವರ ವಿರುದ್ಧವೂ ಎಫ್.ಐ.ಆರ್. ದಾಖಲಿಸಲಾಗುವುದು ಎಂದು ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ರಾಗುಗುಡ್ಡ ಘರ್ಷಣೆ ಹಿನ್ನೆಲೆಯಲ್ಲಿ ಬಿಗು ಬಂದೋಬಸ್ತ್ ಕೈಗೊಂಡಿರುವ ಎಸ್ಪಿ ಜಾಲತಾಣಗಳ ಮೇಲೆ ನಿಗಾ ಇಟ್ಟಿರುವುದನ್ನು ತಿಳಿಸಿದ್ದಾರೆ. ಪೊಲೀಸ್ ಎನ್ಕೌಂಟರ್ ಮಾಡಿದ್ದಾರೆಂದು ಫಾರ್ವರ್ಡ್ ಆಗಿದ್ದ ವಿಡಿಯೋ ಡಿಲಿಟ್ ಮಾಡಿಸಲಾಗಿದೆ. ಸುಳ್ಳು ಸುದ್ಧಿ ಹರಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಬೇರೆ ರಾಜ್ಯದ, ಬೇರೆ ಜಿಲ್ಲೆಗಳ ವಿಡಿಯೋಗಳನ್ನು ಹರಡಲಾಗುತ್ತಿದೆ. ಅಂತಹವರ ವಿರುದ್ಧ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗುವುದು.
ರಾಗಿಗುಡ್ಡದಲ್ಲಿ ಎರಡು ಮಾರುತಿ ವ್ಯಾನ್ ಬಂದಿರುವ ಬಗ್ಗೆ ಸುಳ್ಳು ಸುದ್ದಿ ಹರಡಲಾಗುತ್ತಿದೆ. ಅವರು ನ್ಯಾಮತಿಯಿಂದ ಮೆರವಣಿಗೆ ನೋಡಲು ಬಂದಿದ್ದವರಾಗಿದ್ದರು. ಅವರ ಬಗ್ಗೆ ಮಾಹಿತಿ ಪಡೆಯಲಾಗಿದೆ. ಈ ವಿಚಾರದಲ್ಲಿ ಸುಳ್ಳು ಸುದ್ಧಿ ಹರಡಿದರೆ ಕಾನೂನು ಕ್ರಮ ಜರುಗಿಸಲಾಗತ್ತೆ. ಅನೇಕರು ಸುಳ್ಳು ವಿಡಿಯೋಗಳನ್ನು ಹರಡುತ್ತಿದ್ದಾರೆ. ಮೆರವಣಿಗೆಯಲ್ಲಿ ಕತ್ತಿಗಳನ್ನು ಝಳಪಿಸಿರುವುದಕ್ಕೆ ಆಕ್ಷೇಪ ಮಾಡಲಾಗಿದೆ. ಆದರೆ, ಕೆಲವು ಕಡೆ ಆಟಿಕೆ ಕತ್ತಿಗಳನ್ನು ತರಲಾಗಿದೆ. ಇದು ಒರಿಜಿನಲ್ ಕತ್ತಿ ಅಲ್ಲ ಎಂಬುದು ತಿಳಿದುಬಂದಿದೆ. ಅಕಸ್ಮಾತ್ ಒರಿಜಿನಲ್ ಕತ್ತಿ ಎಂದು ಕಂಡು ಬಂದರೆ, ಅಂತಹ ವಿಡಿಯೋ ನನಗೆ ಕಳಿಸಿ. ನಾನು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇನೆ. ಯಾವುದೇ ಸುಳ್ಳು ಸುದ್ಧಿ, ವಿಡಿಯೋಗಳನ್ನು ನಂಬಬೇಡಿ ಎಂದು ಜನರಿಗೆ ಮನವಿ ಮಾಡಿದ್ದಾರೆ.
ರಾಗಿಗುಡ್ಡ ಘಟನೆಗೆ ಸಂಬಂಧಿಸಿದಂತೆ, 24 ಕೇಸುಗಳನ್ನು ದಾಖಲಿಸಿಕೊಳ್ಳಲಾಗಿದೆ. ಒಟ್ಟು 60 ಜನರನ್ನು ಬಂಧಿಸಲಾಗಿದೆ. ಸಾರ್ವಜನಿಕರು ಸುಳ್ಳು ಸುದ್ಧಿಗಳನ್ನು ನಂಬಬೇಡಿ. ಇನ್ನೂ ಹಲವರನ್ನು ಬಂಧಿಸಲಿದ್ದೆವೆ. ಘಟನೆಗೆ ಕಾರಣರಾದ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ಹೊರಗಿನಿಂದ ಬಂದವರು ಯಾರಿದ್ದಾರೆಂದು ತನಿಖೆ ಮಾಡುತ್ತಿದ್ದೇವೆ. ಎಲ್ಲಾ ಆಯಾಮಗಳಲ್ಲಿ ಸಾಕ್ಷಿಗಳು ನಮಗೆ ಸಿಕ್ಕಿದೆ. ಯಾರು ಕಾರಣಕರ್ತರಿದ್ದಾರೆ, ಅವರ ಬಗ್ಗೆ ಸಿಸಿಟಿವಿಯಲ್ಲಿ ದಾಖಲಾಗಿದೆ. ಮೆರವಣಿಗೆಯಲ್ಲಿ ಮಚ್ಚು, ಲಾಂಗು ತೋರಿಸಿದವರ ಬಗ್ಗೆ ತನಿಖೆ ನಡೆಯುತ್ತಿದೆ ಎಂದಿದ್ದಾರೆ.
Stone pelting, Miscreants share false news as encounter in Shivamogga, SP clarifies.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm