ಬ್ರೇಕಿಂಗ್ ನ್ಯೂಸ್
04-10-23 01:48 pm HK News Desk ಕರ್ನಾಟಕ
ಶಿವಮೊಗ್ಗ, ಅ.4: ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಅನೇಕ ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಇದು ಶಿವಮೊಗ್ಗದಲ್ಲಿ ಕಳೆದ ಹತ್ತು ವರ್ಷದಲ್ಲಿ ಆಗಿರುವ ಇಸ್ಲಾಮಿಕ್ ಬೆಳವಣಿಗೆಯನ್ನು ತೋರಿಸುತ್ತಿದೆ. ಶಿವಮೊಗ್ಗ ಇಸ್ಲಾಮೀಕರಣದ ಪ್ರಯೋಗ ಶಾಲೆಯಾಗಿದೆ. ಇಂಥ ಮಾನಸಿಕತೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಶರಣಾಗತಿಯಾಗಿದ್ದಾರೆ ಎಂದು ಹಿಂದು ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಸಂಘಟಕ ಜಗದೀಶ್ ಕಾರಂತ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಹಾಗೂ ಗೃಹ ಸಚಿವರ ಹೇಳಿಕೆಗಳನ್ನು ಗಮನಿಸಿದರೆ ಇವರೆಲ್ಲ ಮೂಲಭೂತವಾದಿಗಳಿಗೆ ಶರಣಾಗತಿಯಾಗಿರುವುದು ಸ್ಪಷ್ಟವಾಗುತ್ತದೆ. ಇಸ್ಲಾಮಿಕರಣದ ಕಾಲ ಕೆಳಗೆ ಈ ಮೂವರು ಇದ್ದಾರೆಂದು ನನಗನಿಸುತ್ತಿದೆ. ಆಡಳಿತ ನಡೆಸುತ್ತಿರುವ ಈ ಮೂವರ ಹೇಳಿಕೆಗಳು, ನಡೆದುಕೊಳ್ಳುತ್ತಿರುವ ರೀತಿಯನ್ನು ಅವರ ದೌರ್ಬಲ್ಯ ಎಂದು ನಾನು ಹೇಳುವುದಿಲ್ಲ. ಇದರ ಹಿಂದೆ ಶರಣಾಗತಿ ಇದೆ. ಸಿದ್ಧರಾಮಯ್ಯ ತೀರ್ಮಾನ ಮಾಡಿದ್ದಾರೆ. ಹಿಂದು ಸಮಾಜವನ್ನ ಒಡೆದು ಹಾಕಿ ಮುಗಿಸಬೇಕೆಂದು ತೀರ್ಮಾನಿಸಿದ್ದಾರೆ.
ಸಿದ್ದರಾಮಯ್ಯ ಹೇಳಿಕೆಗಳು, ಹಿಂದುಗಳ ಬಗೆಗಿರುವ ತಾತ್ಸಾರ ಮತ್ತು ಅವರ ದುರ್ವರ್ತನೆಯನ್ನು ತೋರಿಸುತ್ತಿದೆ. ಮುಸ್ಲಿಮರಿಗೆ ನೋವಾಗಬಾರದೆಂದು ಹೇಳಿಕೆ ನೀಡುತ್ತಿದ್ದಾರೆ. ಇಂತಹ ಸಿದ್ಧರಾಮಯ್ಯಗಳು ಬಹಳಷ್ಟು ಹುಟ್ಟಿದ್ದವೆ, ಬಹಳ ಸತ್ತಿದ್ದೂ ಆಗಿವೆ. ಇದರಿಂದ ಏನೂ ಆಗಲ್ಲ, ಆದರೆ ಆ ಜಾಗದಲ್ಲಿ ಕೂತಾಗ ಪ್ರಾಮಾಣಿಕತೆ ಬೇಕಲ್ಲ. ಮಾನಸಿಕ ವೈಚಾರಿಕತೆ ಬೇರೆ ಇದ್ದರೂ, ಆಡಳಿತ ವಹಿಸ್ಕೊಂಡ ಮೇಲೆ ತೀರ್ಮಾನ ಸರಿ ಇರಬೇಕಲ್ಲ. ಬೇಲಿಯೇ ಎದ್ದು ಹೊಲ ಮೇಯುತ್ತದೆ ಎಂದರೆ ಹಿಂದೂ ಸಮಾಜ ತನ್ನ ರಕ್ಷಣೆಯನ್ನು ತಾನೇ ಮಾಡಿಕೊಳ್ಳಬೇಕಾಗುತ್ತದೆ. ಇದಕ್ಕೆಲ್ಲ ರಾಜ್ಯದ ಕಾಂಗ್ರೆಸ್ ಸರ್ಕಾರವೇ ಕಾರಣವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
Jagdish Karnth slams Shivamogga stone pelting incident, says its a clear example of making city into Islamic state.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm