ಬ್ರೇಕಿಂಗ್ ನ್ಯೂಸ್
11-11-20 11:38 am Headline Karnataka News Network ಕರ್ನಾಟಕ
ಬೆಂಗಳೂರು, ನ.11: ರಾಜ್ಯದಲ್ಲಿ ನಿತ್ಯ ಲಕ್ಷದ ಮೇಲೆ ಕೊರೋನಾ ಪರೀಕ್ಷೆಗಳು ನಡೆಯುತ್ತಿದ್ದರೂ ಎರಡು ಸಾವಿರದ ಅಸುಪಾಸಿನಲ್ಲಿ ಪ್ರಕರಣಗಳು ವರದಿಯಾಗುವ ಪ್ರವೃತ್ತಿ ಮುಂದುವರಿದಿದೆ. ಮಂಗಳವಾರ 2,362 ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, 4,215 ಮಂದಿ ಗುಣಮುಖರಾಗಿದ್ದಾರೆ. ಇದೇ ವೇಳೆ 20 ಮಂದಿ ಮೃತರಾಗಿದ್ದಾರೆ.
ಗುಣಮುಖರ ಸಂಖ್ಯೆ ನಿತ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 31,063ಕ್ಕೆ ಇಳಿದಿದೆ. ಸದ್ಯ 869 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾದಗಿರಿ ಮತ್ತು ರಾಮನಗರ ಜಿಲ್ಲೆಗಳಲ್ಲಿ ತೀವ್ರ ನಿಗಾ ವಿಭಾಗದಲ್ಲಿ ಕೊರೋನಾ ಸೋಂಕಿತರು ದಾಖಲಾಗಿಲ್ಲ. ಈವರೆಗೆ ಒಟ್ಟು 8.51 ಲಕ್ಷ ಜನರಿಗೆ ಸೋಂಕು ತಗುಲಿದ್ದು, ಈ ಪೈಕಿ 8.08 ಲಕ್ಷ ಜನರು ಗುಣಮುಖರಾಗಿದ್ದಾರೆ. ಈವರೆಗೆ 19 ಮಂದಿ ಕೊರೋನಾ ಸೋಂಕಿತರು ಅನ್ಯ ಕಾರಣದಿಂದ ಹಾಗೂ ಸೋಂಕಿನ ಕಾರಣದಿಂದ ಈವರೆಗೆ 11,430 ಮಂದಿ ಮರಣವನ್ನಪ್ಪಿದ್ದಾರೆ.
ಮಂಗಳವಾರ 1.09 ಲಕ್ಷ ಕೊರೋನಾ ಪರೀಕ್ಷೆ ನಡೆಸಲಾಗಿದ್ದು ಈವೆಗೆ ಒಟ್ಟು 89.32 ಲಕ್ಷ ಜನರಿಗೆ ಪರೀಕ್ಷೆ ಮಾಡಲಾಗಿದೆ.
ಬೆಂಗಳೂರಲ್ಲಿ 3.5 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ..!


ಬೆಂಗಳೂರಲ್ಲೇ ಹೆಚ್ಚು:
ಬೆಂಗಳೂರು ನಗರ ಜಿಲ್ಲೆಯಲ್ಲಿ 8, ಬೆಂಗಳೂರು ಗ್ರಾಮಾಂತರ 3, ಬಳ್ಳಾರಿ 2, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಹಾಸನ, ತುಮಕೂರು ಮತ್ತು ಕಲಬುರಗಿ ಜಿಲ್ಲೆಯಲ್ಲಿ ತಲಾ ಒಬ್ಬರು ಸೋಂಕಿನಿಂದ ಮೃತರಾಗಿದ್ದಾರೆ. ಉಳಿದ ಇಪ್ಪತ್ತು ಜಿಲ್ಲೆಗಳಲ್ಲಿ ಯಾರೂ ಮೃತರಾಗಿಲ್ಲ
ಬೆಂಗಳೂರು ನಗರ ಜಿಲ್ಲೆಯಲ್ಲಿ 1,176 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಉಳಿದಂತೆ ಬಾಗಲಕೋಟೆ 11, ಬಳ್ಳಾರಿ 34, ಬೆಳಗಾವಿ 30, ಬೆಂಗಳೂರು ಗ್ರಾಮಾಂತರ 55, ಬೀದರ್ 10, ಚಾಮರಾಜ ನಗರ 13, ಚಿಕ್ಕಬಳ್ಳಾಪುರ 57, ಚಿಕ್ಕಮಗಳೂರು 42, ಚಿತ್ರದುರ್ಗ 31, ದಕ್ಷಿಣ ಕನ್ನಡ 87, ದಾವಣಗೆರೆ 29, ಧಾರವಾಡ 18, ಗದಗ 6, ಹಾಸನ 110, ಹಾವೇರಿ 13, ಕಲಬುರಗಿ 9, ಕೊಡಗು 7, ಕೋಲಾರ 25, ಕೊಪ್ಪಳ 16, ಮಂಡ್ಯ 86, ಮೈಸೂರು 135, ರಾಯಚೂರು 24, ರಾಮನಗರ 27, ಶಿವಮೊಗ್ಗ 25, ತುಮಕೂರು 136, ಉಡುಪಿ 27, ಉತ್ತರ ಕನ್ನಡ 20, ವಿಜಯಪುರ 78 ಹಾಗೂ ಯಾದಗಿರಿ ಜಿಲ್ಲೆಯಲ್ಲಿ 25 ಹೊಸ ಪ್ರಕರಣಗಳು ಧೃಢ ಪಟ್ಟಿವೆ.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm