ಬ್ರೇಕಿಂಗ್ ನ್ಯೂಸ್
07-10-23 09:28 pm Bangalore Correspondent ಕರ್ನಾಟಕ
ಬೆಂಗಳೂರು, ಅ.7: ತಮಿಳುನಾಡಿನಿಂದ ಲಾರಿಯಲ್ಲಿ ತಂದಿದ್ದ ಪಟಾಕಿಯನ್ನು ಇಳಿಸುತ್ತಿದ್ದಾಗ ಸ್ಫೋಟಗೊಂಡು ಬೆಂಕಿ ಹತ್ತಿಕೊಂಡ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದ್ದು, 12 ಮಂದಿ ಸಜೀವ ದಹನವಾಗಿದ್ದಾರೆ ಎನ್ನಲಾಗುತ್ತಿದೆ. ಘಟನೆ ಸಂದರ್ಭದಲ್ಲಿ ಸ್ಥಳದಲ್ಲಿ 25ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು.
ಮಧ್ಯಾಹ್ನ 3.30ರ ಸುಮಾರಿಗೆ ಘಟನೆ ನಡೆದಿದ್ದು, ನಾಲ್ಕೈದು ಗಂಟೆ ಕಳೆದರೂ ರಾತ್ರಿ ವರೆಗೂ ಸ್ಥಳದಲ್ಲಿ ಉರಿಯುತ್ತಲೇ ಇತ್ತು. ಬೆಂಕಿ ನಂದಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅಲ್ಲಿದ್ದ ಮೃತದೇಹಗಳು ಪೂರ್ತಿ ಸುಟ್ಟು ಹೋಗಿದ್ದು ಗುರುತು ಸಿಗದಂತಾಗಿದೆ. ಪಟಾಕಿ ಮಳಿಗೆಯಲ್ಲಿ 5 ಕೋಟಿಗೂ ಹೆಚ್ಚು ಮೌಲ್ಯದ ಪಟಾಕಿ ದಾಸ್ತಾನಿತ್ತು ಎನ್ನಲಾಗಿದೆ. ದಾಸ್ತಾನು ಮಳಿಗೆ, ಪಟಾಕಿಯಿದ್ದ ಒಂದು ಲಾರಿ, ಮತ್ತೊಂದು ಸರಕು ಸಾಗಣೆಯ ಲಾರಿ, ನಾಲ್ಕು ದ್ವಿಚಕ್ರ ವಾಹನಗಳು ಸುಟ್ಟು ಹೋಗಿವೆ. ಸ್ಥಳದಲ್ಲಿ ಎಷ್ಟು ಮಂದಿ ಇದ್ದರು ಅನ್ನುವ ನಿಖರ ಮಾಹಿತಿಯಿಲ್ಲ. ಹಲವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಸಂಜೆ ಹೊತ್ತಿಗೆ ಭಾರೀ ಪ್ರಮಾಣದಲ್ಲಿ ಬೆಂಕಿ ಮತ್ತು ಹೊಗೆ ಕಾಣಿಸಿಕೊಂಡಿದ್ದರಿಂದ ಅತ್ತಿಬೆಲೆ ಪರಿಸರದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು. ಅಲ್ಲಿಂದ ತಮಿಳುನಾಡಿನ ಹೊಸೂರು ಭಾಗಕ್ಕೆ ಹೆದ್ದಾರಿಯೇ ನಾಲ್ಕು ಗಂಟೆ ಕಾಲ ಬಂದ್ ಆಗಿತ್ತು. ಎರಡು ಕಿಮೀ ಉದ್ದಕ್ಕೆ ವಾಹನಗಳು ಸಾಲುಗಟ್ಟಿದ್ದರೆ, ಏನೋ ಸ್ಫೋಟ ಆಗಿದೆಯೆಂದು ಜನರು ಗಾಬರಿಯಿಂದ ನಿಂತು ನೋಡುತ್ತಿದ್ದರು. ಜನರನ್ನು ಸಂಭಾಳಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
A major fire broke out at a firecracker shop at Attibele in Anekal taluk while unloading the firecrackers from a goods vehicle on Saturday. As a result of the fire, 4-5 adjacent shops and some vehicles, including a truck, were burnt.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm