ಬ್ರೇಕಿಂಗ್ ನ್ಯೂಸ್
11-10-23 06:31 pm HK News Desk ಕರ್ನಾಟಕ
ತುಮಕೂರು, ಅ.11: ಹಿರಿಯೂರು ಕ್ಷೇತ್ರದ ಮಾಜಿ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಡಿ.ಟಿ.ಶ್ರೀನಿವಾಸ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು ಅಧಿಕೃತವಾಗಿ ಕಾಂಗ್ರೆಸ್ ಸೇರುವುದನ್ನು ತಿಳಿಸಿದ್ದಾರೆ. ಅಲ್ಲದೆ, ಶಿಕ್ಷಕರ ಕ್ಷೇತ್ರದಿಂದ ಪತಿ ಡಿ.ಟಿ.ಶ್ರೀನಿವಾಸ್ ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂದು ಹೇಳಿದ್ದಾರೆ.
ನಿನ್ನೆ ಹಿರಿಯೂರಲ್ಲಿ ಒಂದು ಸಭೆ ಮಾಡಿದ್ದೆವು. ಅದೇ ರೀತಿ ಇವತ್ತು ತುಮಕೂರಲ್ಲಿ ಸಭೆ ಮಾಡಿದ್ದೇವೆ. ಪತಿ ಶ್ರೀನಿವಾಸ್ ಕಾಂಗ್ರೆಸ್ ಪಾರ್ಟಿಯಿಂದ ಸ್ಪರ್ಧೆ ಮಾಡ್ತಾರೆ. ಅ.20ರಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಾರ್ಟಿ ಸೇರ್ಪಡೆ ಆಗ್ತೇವೆ ಎಂದು ಪೂರ್ಣಿಮಾ ಶ್ರೀನಿವಾಸ್ ಹೇಳಿದ್ದಾರೆ. ನಮ್ಮಿಬ್ಬರ ಜೊತೆಯಲ್ಲಿ 8 ಜನ ನಗರಸಭಾ ಸದಸ್ಯರು, ಮಾಜಿ ಜಿಪಂ, ತಾಪಂ ಸದಸ್ಯರು, ಪ್ರವರ್ಗ 1 ಒಕ್ಕೂಟದ ಎಲ್ಲಾ ಜಿಲ್ಲಾ ಘಟಕದ ಅಧ್ಯಕ್ಷರುಗಳು ಹೀಗೆ ಒಟ್ಟು 200ಕ್ಕೂ ಹೆಚ್ಚು ಜನ ಕಾಂಗ್ರೆಸ್ ಸೇರ್ಪಡೆ ಆಗುತ್ತೇವೆ ಎಂದಿದ್ದಾರೆ.
ಡಿಕೆಶಿ ಗಾಳಕ್ಕೆ ಬಿದ್ದ ಮಾಜಿ ಶಾಸಕಿ
ಒಂದು ದಿನದ ಹಿಂದಷ್ಟೇ ಡಿಕೆಶಿ ಅವರು, ಪೂರ್ಣಿಮಾ ಶ್ರೀನಿವಾಸ್ ದಂಪತಿ ಕಾಂಗ್ರೆಸ್ ಸೇರುತ್ತಾರೆ ಎಂದಿದ್ದರು. ವಾರದ ಹಿಂದೆ ಡಿಕೆಶಿ, ಪೂರ್ಣಿಮಾ ಶ್ರೀನಿವಾಸ್ ಮನೆಗೆ ತೆರಳಿದ್ದು ಕಾಂಗ್ರೆಸ್ ಸೇರುವ ವದಂತಿ ಹರಡಿತ್ತು. ಈ ಬಗ್ಗೆ ಕೇಳಿದ ಪ್ರಶ್ನೆಗೆ, ಚುನಾವಣೆಗೂ ಮುನ್ನವೇ ಡಿಕೆ ಶಿವಕುಮಾರ್ ಮಾತನಾಡಿದ್ದರು. ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಸ್ಥಾನ ಕೊಡ್ತೀವಿ ಅಂದಿದ್ದರು. ಸೋತ ಬಳಿಕವೂ ಪಕ್ಷಕ್ಕೆ ಕರೆದಿದ್ದರು ಎಂದು ಹೇಳಿದರು.
ಬಿಜೆಪಿಯಲ್ಲಿ ನಮ್ಮ ಸಮುದಾಯಕ್ಕೆ ಮಹತ್ವ ನೀಡಲಿಲ್ಲ. ನಾವು 25 ಲಕ್ಷ ಜನ ಇದ್ದೇವೆ. ಸಮುದಾಯದ ಬೇಡಿಕೆಗಳಿಗೆ ಮನ್ನಣೆ ಕೊಡಲಿಲ್ಲ. ಹಾಗಾಗಿ ಪಕ್ಷಕ್ಕೆ ತೊರೆಯಬೇಕಾಯ್ತು ಎಂದು ಪೂರ್ಣಿಮಾ ಶ್ರೀನಿವಾಸ್ ಹೇಳಿದರು.
Former BJP MLA Poornima Srinivas, who is set to join the Congress, claimed on Wednesday that the J P Nadda-led party failed to fulfil the promises made to the Golla cowherd community to which she belongs, prompting her to opt for a change.She also claimed that the Congress has decided to give the MLC ticket to her husband D T Srinivas from Teachers Constituency.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm