ಬ್ರೇಕಿಂಗ್ ನ್ಯೂಸ್
11-10-23 10:54 pm Bangalore Correspondent ಕರ್ನಾಟಕ
ಬೆಂಗಳೂರು, ಅ.11: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ತಡೆಹಿಡಿದಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಶಾಸಕ ಮುನಿರತ್ನ ಡಿಸಿಎಂ ಡಿಕೆಶಿ ಕಾಲಿಗೆ ಬಿದ್ದು ಮನವಿ ಸಲ್ಲಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಕಾಂಗ್ರೆಸಿಗರು ತನ್ನ ಕ್ಷೇತ್ರಕ್ಕೆ ಬಿಡುಗಡೆಯಾದ 126 ಕೋಟಿ ಅನುದಾನ ತಡೆಹಿಡಿದಿದ್ದಾರೆ ಎಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಮುನಿರತ್ನ ಬುಧವಾರ ಧರಣಿ ನಡೆಸಿದ್ದರು. ಈ ವೇಳೆ ಅವರ ಜೊತೆಗಿದ್ದ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮನವಿಯಂತೆ ಪ್ರತಿಭಟನೆ ನಿಲ್ಲಿಸಿದ ಮುನಿರತ್ನ ನೇರವಾಗಿ ಅರಮನೆ ಮೈದಾನಕ್ಕೆ ತೆರಳಿದರು.

ಬುಧವಾರ ಬೆಂಗಳೂರು ಕಂಬಳ ವಿಚಾರವಾಗಿ ಅರಮನೆ ಮೈದಾನದಲ್ಲಿ ಸಿದ್ದತಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಆಗಮಿಸಿದ್ದರು. ಇದೇ ವೇಳೆ, ಅರಮನೆ ಮೈದಾನಕ್ಕೆ ಆಗಮಿಸಿದ ಮುನಿರತ್ನ ವೇದಿಕೆಯ ಕೆಳಗೆ ಕುಳಿತುಕೊಂಡಿದ್ದರು. ಸ್ಥಳಕ್ಕೆ ಮುನಿರತ್ನ ಆಗಮಿಸಿದ್ದರಿಂದ ಮತ್ತೊಂದು ಹೈಡ್ರಾಮಾ ಮಾಡುತ್ತಾರೆಂದು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವೇದಿಕೆಯಲ್ಲಿ ತಮ್ಮ ಭಾಷಣದ ನಡುವೆ ಮುನಿರತ್ನ ಅವರನ್ನು ಕೆಣಕಿದ ಡಿಕೆಶಿ, ಯಾರೋ ಡ್ರಾಮಾ ಮಾಡಲು ಬಂದಿದ್ದಾರೆ. ಡ್ರಾಮಾ ನೋಡೋಣ, ಅಶ್ವತ್ಥ ನಾರಾಯಣ ಅವರೇ ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ. ಕಾರ್ಯಕ್ರಮಕ್ಕೆ ತೊಂದರೆ ಆಗೋದು ಬೇಡ ಎಂದು ತಿರುಗೇಟು ನೀಡಿದರು.
ಬಿಎಸ್ವೈ ಸೂಚನೆಯಂತೆ ಮುನಿರತ್ನ ಉಪವಾಸ ಸತ್ಯಾಗ್ರಹ ಕೈಬಿಟ್ಟು ಅರಮನೆ ಮೈದಾನಕ್ಕೆ ತೆರಳಿ ಅನುದಾನ ಬಿಡುಗಡೆ ಮಾಡುವಂತೆ ಡಿಕೆಶಿಗೆ ಮನವಿ ಪತ್ರ ಸಲ್ಲಿಸಿದರು.
BJP MLA Munirathna Naidu on Wednesday ended a hunger strike launched against Karnataka Deputy Chief Minister D. K. Shivakumar and his brother Congress MP D. K. Suresh for pursuing "hate politics" and "withdrawing" funds allotted to his constituency.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm