ಬ್ರೇಕಿಂಗ್ ನ್ಯೂಸ್
11-10-23 10:54 pm Bangalore Correspondent ಕರ್ನಾಟಕ
ಬೆಂಗಳೂರು, ಅ.11: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ತಡೆಹಿಡಿದಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಶಾಸಕ ಮುನಿರತ್ನ ಡಿಸಿಎಂ ಡಿಕೆಶಿ ಕಾಲಿಗೆ ಬಿದ್ದು ಮನವಿ ಸಲ್ಲಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಕಾಂಗ್ರೆಸಿಗರು ತನ್ನ ಕ್ಷೇತ್ರಕ್ಕೆ ಬಿಡುಗಡೆಯಾದ 126 ಕೋಟಿ ಅನುದಾನ ತಡೆಹಿಡಿದಿದ್ದಾರೆ ಎಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಮುನಿರತ್ನ ಬುಧವಾರ ಧರಣಿ ನಡೆಸಿದ್ದರು. ಈ ವೇಳೆ ಅವರ ಜೊತೆಗಿದ್ದ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮನವಿಯಂತೆ ಪ್ರತಿಭಟನೆ ನಿಲ್ಲಿಸಿದ ಮುನಿರತ್ನ ನೇರವಾಗಿ ಅರಮನೆ ಮೈದಾನಕ್ಕೆ ತೆರಳಿದರು.

ಬುಧವಾರ ಬೆಂಗಳೂರು ಕಂಬಳ ವಿಚಾರವಾಗಿ ಅರಮನೆ ಮೈದಾನದಲ್ಲಿ ಸಿದ್ದತಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಆಗಮಿಸಿದ್ದರು. ಇದೇ ವೇಳೆ, ಅರಮನೆ ಮೈದಾನಕ್ಕೆ ಆಗಮಿಸಿದ ಮುನಿರತ್ನ ವೇದಿಕೆಯ ಕೆಳಗೆ ಕುಳಿತುಕೊಂಡಿದ್ದರು. ಸ್ಥಳಕ್ಕೆ ಮುನಿರತ್ನ ಆಗಮಿಸಿದ್ದರಿಂದ ಮತ್ತೊಂದು ಹೈಡ್ರಾಮಾ ಮಾಡುತ್ತಾರೆಂದು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವೇದಿಕೆಯಲ್ಲಿ ತಮ್ಮ ಭಾಷಣದ ನಡುವೆ ಮುನಿರತ್ನ ಅವರನ್ನು ಕೆಣಕಿದ ಡಿಕೆಶಿ, ಯಾರೋ ಡ್ರಾಮಾ ಮಾಡಲು ಬಂದಿದ್ದಾರೆ. ಡ್ರಾಮಾ ನೋಡೋಣ, ಅಶ್ವತ್ಥ ನಾರಾಯಣ ಅವರೇ ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ. ಕಾರ್ಯಕ್ರಮಕ್ಕೆ ತೊಂದರೆ ಆಗೋದು ಬೇಡ ಎಂದು ತಿರುಗೇಟು ನೀಡಿದರು.
ಬಿಎಸ್ವೈ ಸೂಚನೆಯಂತೆ ಮುನಿರತ್ನ ಉಪವಾಸ ಸತ್ಯಾಗ್ರಹ ಕೈಬಿಟ್ಟು ಅರಮನೆ ಮೈದಾನಕ್ಕೆ ತೆರಳಿ ಅನುದಾನ ಬಿಡುಗಡೆ ಮಾಡುವಂತೆ ಡಿಕೆಶಿಗೆ ಮನವಿ ಪತ್ರ ಸಲ್ಲಿಸಿದರು.
BJP MLA Munirathna Naidu on Wednesday ended a hunger strike launched against Karnataka Deputy Chief Minister D. K. Shivakumar and his brother Congress MP D. K. Suresh for pursuing "hate politics" and "withdrawing" funds allotted to his constituency.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm