ಬ್ರೇಕಿಂಗ್ ನ್ಯೂಸ್
11-10-23 10:54 pm Bangalore Correspondent ಕರ್ನಾಟಕ
ಬೆಂಗಳೂರು, ಅ.11: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ತಡೆಹಿಡಿದಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಶಾಸಕ ಮುನಿರತ್ನ ಡಿಸಿಎಂ ಡಿಕೆಶಿ ಕಾಲಿಗೆ ಬಿದ್ದು ಮನವಿ ಸಲ್ಲಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಕಾಂಗ್ರೆಸಿಗರು ತನ್ನ ಕ್ಷೇತ್ರಕ್ಕೆ ಬಿಡುಗಡೆಯಾದ 126 ಕೋಟಿ ಅನುದಾನ ತಡೆಹಿಡಿದಿದ್ದಾರೆ ಎಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಮುನಿರತ್ನ ಬುಧವಾರ ಧರಣಿ ನಡೆಸಿದ್ದರು. ಈ ವೇಳೆ ಅವರ ಜೊತೆಗಿದ್ದ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮನವಿಯಂತೆ ಪ್ರತಿಭಟನೆ ನಿಲ್ಲಿಸಿದ ಮುನಿರತ್ನ ನೇರವಾಗಿ ಅರಮನೆ ಮೈದಾನಕ್ಕೆ ತೆರಳಿದರು.

ಬುಧವಾರ ಬೆಂಗಳೂರು ಕಂಬಳ ವಿಚಾರವಾಗಿ ಅರಮನೆ ಮೈದಾನದಲ್ಲಿ ಸಿದ್ದತಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಆಗಮಿಸಿದ್ದರು. ಇದೇ ವೇಳೆ, ಅರಮನೆ ಮೈದಾನಕ್ಕೆ ಆಗಮಿಸಿದ ಮುನಿರತ್ನ ವೇದಿಕೆಯ ಕೆಳಗೆ ಕುಳಿತುಕೊಂಡಿದ್ದರು. ಸ್ಥಳಕ್ಕೆ ಮುನಿರತ್ನ ಆಗಮಿಸಿದ್ದರಿಂದ ಮತ್ತೊಂದು ಹೈಡ್ರಾಮಾ ಮಾಡುತ್ತಾರೆಂದು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವೇದಿಕೆಯಲ್ಲಿ ತಮ್ಮ ಭಾಷಣದ ನಡುವೆ ಮುನಿರತ್ನ ಅವರನ್ನು ಕೆಣಕಿದ ಡಿಕೆಶಿ, ಯಾರೋ ಡ್ರಾಮಾ ಮಾಡಲು ಬಂದಿದ್ದಾರೆ. ಡ್ರಾಮಾ ನೋಡೋಣ, ಅಶ್ವತ್ಥ ನಾರಾಯಣ ಅವರೇ ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ. ಕಾರ್ಯಕ್ರಮಕ್ಕೆ ತೊಂದರೆ ಆಗೋದು ಬೇಡ ಎಂದು ತಿರುಗೇಟು ನೀಡಿದರು.
ಬಿಎಸ್ವೈ ಸೂಚನೆಯಂತೆ ಮುನಿರತ್ನ ಉಪವಾಸ ಸತ್ಯಾಗ್ರಹ ಕೈಬಿಟ್ಟು ಅರಮನೆ ಮೈದಾನಕ್ಕೆ ತೆರಳಿ ಅನುದಾನ ಬಿಡುಗಡೆ ಮಾಡುವಂತೆ ಡಿಕೆಶಿಗೆ ಮನವಿ ಪತ್ರ ಸಲ್ಲಿಸಿದರು.
BJP MLA Munirathna Naidu on Wednesday ended a hunger strike launched against Karnataka Deputy Chief Minister D. K. Shivakumar and his brother Congress MP D. K. Suresh for pursuing "hate politics" and "withdrawing" funds allotted to his constituency.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm