ಬ್ರೇಕಿಂಗ್ ನ್ಯೂಸ್
13-10-23 04:13 pm Bangalore Correspondent ಕರ್ನಾಟಕ
ಬೆಂಗಳೂರು, ಅ.13: ನಗರದಲ್ಲಿ ಗುತ್ತಿಗೆದಾರರು, ಜ್ಯುವೆಲ್ಲರಿ ಶಾಪ್ ಮಾಲೀಕರು ಹಾಗೂ ಮಾಜಿ ಕಾರ್ಪೊರೇಟರ್ಗಳ ಮನೆಗಳ ಮೇಲೆ ತಡರಾತ್ರಿ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ, ಮಾಜಿ ಕಾರ್ಪೊರೇಟರ್ ಅವರ ಸಂಬಂಧಿಯ ಫ್ಲ್ಯಾಟ್ನಲ್ಲಿ 42 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ ಎಂದು ಐಟಿ ಮೂಲಗಳು ತಿಳಿಸಿವೆ. ಆರ್ಟಿ ನಗರದ ಆತ್ಮಾನಂದ ಕಾಲೋನಿಯಲ್ಲಿರುವ ಫ್ಲ್ಯಾಟ್ನಲ್ಲಿ ಈ ದಾಳಿ ನಡೆದಿದೆ.
ಮಾಜಿ ಶಾಸಕರೊಬ್ಬರ ಸಂಬಂಧಿ ಎಂದು ಹೇಳಲಾಗುತ್ತಿರುವ ಮಾಜಿ ಮಹಿಳಾ ಕಾರ್ಪೊರೇಟರ್ ಅವರ ಸಂಬಂಧಿಕರ ಮನೆಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಇನ್ನು ಮಾಜಿ ಮಹಿಳಾ ಕಾರ್ಪೋರೇಟರ್ ಪತಿ ಅವರ ಸಹೋದರನಿಗೆ ಸೇರಿದ ಫ್ಲ್ಯಾಟ್ನಲ್ಲಿ ಸದ್ಯ ಹಣ ಸಿಕ್ಕಿದೆ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ.
ಫ್ಲ್ಯಾಟ್ನಲ್ಲಿ ದೊರೆತ 42 ಕೋಟಿ ರೂ ಕುರಿತು ಆದಾಯ ತೆರಿಗೆ ಅಧಿಕಾರಿಗಳು ಮಾಜಿ ಕಾರ್ಪೊರೇಟರ್ ಸಂಬಂಧಿಯನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಮಾಜಿ ಕಾರ್ಪೊರೇಟರ್ಗೆ ಸಂಬಂಧಿಸಿದ ವ್ಯವಹಾರ, ಬ್ಯಾಂಕ್ ಖಾತೆಗಳ ಮಾಹಿತಿಯನ್ನ ಸಂಗ್ರಹಿಸಲಾಗುತ್ತಿದೆ. ಮಾಜಿ ಕಾರ್ಪೋರೇಟರ್ ಅವರ ಸಂಬಂಧ ಗುತ್ತಿಗೆದಾರರಾಗಿದ್ದು, ಅವರಿಗೆ ಸಂಬಂಧಿಸಿದ ಕಚೇರಿ ಹಾಗೂ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಐದಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ 42 ಕೋಟಿ ರೂಪಾಯಿ ಹಣವನ್ನ ಐಟಿ ಅಧಿಕಾರಿಗಳ ತಂಡ ಜಪ್ತಿ ಮಾಡಿದೆ.
ಚುನಾವಣೆಗೆ ವ್ಯಯಿಸಲು ಹಣ ಸಂಗ್ರಹಿಸಲಾಗಿತ್ತು ಎಂಬ ಮಾಹಿತಿ ಮೇರೆಗೆ ನಿನ್ನೆಯಿಂದ ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಬೆಂಗಳೂರಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ನಿನ್ನೆ ಉದ್ಯಮಿಗಳು, ಜ್ಯುವೆಲರಿ ಶಾಪ್ ಮಾಲೀಕರ ಮನೆ ಮತ್ತು ಕಚೇರಿಗಳಲ್ಲಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು. ಸರ್ಜಾಪುರ ಬಳಿಯ ಮುಳ್ಳೂರು, ಆರ್.ಎಂ.ವಿ ಎಕ್ಸ್ಟೆನ್ಷನ್, ಬಿಇಎಲ್ ಸರ್ಕಲ್, ಮಲ್ಲೇಶ್ವರಂ, ಡಾಲರ್ಸ್ ಕಾಲೋನಿ, ಸದಾಶಿವನಗರ, ಮತ್ತಿಕೇರಿ ಸೇರಿದಂತೆ ಹತ್ತಕ್ಕೂ ಹೆಚ್ಚು ಕಡೆಗಳಲ್ಲಿ ನಿನ್ನೆ ಪರಿಶೀಲನೆ ನಡೆಸಿದ್ದರು.
ಆದಾಯ ತೆರಿಗೆ ವಂಚನೆ ಆರೋಪ ಕಂಡು ಬಂದ ಹಿನ್ನೆಲೆ ಚಿನ್ನ ಗಿರವಿ ಮತ್ತು ಖರೀದಿ ಮಾಡುವ ಕಂಪನಿಗಳ ಮೇಲೆ ದಾಳಿ ನಡೆಸಲಾಗಿತ್ತು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಕಳೆದ ವಾರ ಕೂಡ ತೆರಿಗೆ ವಂಚನೆ ಆರೋಪದ ಮೇಲೆ ಜ್ಯುವೆಲರಿ ಉದ್ಯಮಿಗಳ ಮೇಲೆ ಐಟಿ ದಾಳಿ ಮಾಡಿ ಪರಿಶೀಲನೆ ನಡೆಸಿತ್ತು. ಕಳೆದ ಬಾರಿ ಸಿಕ್ಕ ದಾಖಲಾತಿಗಳ ಆಧರಿಸಿ ನಿನ್ನೆ ದಾಳಿ ಮಾಡಲಾಗಿತ್ತು.
Officials of the Income Tax (I-T) department on Friday continued their raids in several parts of the city and found approximately Rs 42 crore in cash.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm