ಬ್ರೇಕಿಂಗ್ ನ್ಯೂಸ್
13-10-23 04:13 pm Bangalore Correspondent ಕರ್ನಾಟಕ
ಬೆಂಗಳೂರು, ಅ.13: ನಗರದಲ್ಲಿ ಗುತ್ತಿಗೆದಾರರು, ಜ್ಯುವೆಲ್ಲರಿ ಶಾಪ್ ಮಾಲೀಕರು ಹಾಗೂ ಮಾಜಿ ಕಾರ್ಪೊರೇಟರ್ಗಳ ಮನೆಗಳ ಮೇಲೆ ತಡರಾತ್ರಿ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ, ಮಾಜಿ ಕಾರ್ಪೊರೇಟರ್ ಅವರ ಸಂಬಂಧಿಯ ಫ್ಲ್ಯಾಟ್ನಲ್ಲಿ 42 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ ಎಂದು ಐಟಿ ಮೂಲಗಳು ತಿಳಿಸಿವೆ. ಆರ್ಟಿ ನಗರದ ಆತ್ಮಾನಂದ ಕಾಲೋನಿಯಲ್ಲಿರುವ ಫ್ಲ್ಯಾಟ್ನಲ್ಲಿ ಈ ದಾಳಿ ನಡೆದಿದೆ.
ಮಾಜಿ ಶಾಸಕರೊಬ್ಬರ ಸಂಬಂಧಿ ಎಂದು ಹೇಳಲಾಗುತ್ತಿರುವ ಮಾಜಿ ಮಹಿಳಾ ಕಾರ್ಪೊರೇಟರ್ ಅವರ ಸಂಬಂಧಿಕರ ಮನೆಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಇನ್ನು ಮಾಜಿ ಮಹಿಳಾ ಕಾರ್ಪೋರೇಟರ್ ಪತಿ ಅವರ ಸಹೋದರನಿಗೆ ಸೇರಿದ ಫ್ಲ್ಯಾಟ್ನಲ್ಲಿ ಸದ್ಯ ಹಣ ಸಿಕ್ಕಿದೆ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ.
ಫ್ಲ್ಯಾಟ್ನಲ್ಲಿ ದೊರೆತ 42 ಕೋಟಿ ರೂ ಕುರಿತು ಆದಾಯ ತೆರಿಗೆ ಅಧಿಕಾರಿಗಳು ಮಾಜಿ ಕಾರ್ಪೊರೇಟರ್ ಸಂಬಂಧಿಯನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಮಾಜಿ ಕಾರ್ಪೊರೇಟರ್ಗೆ ಸಂಬಂಧಿಸಿದ ವ್ಯವಹಾರ, ಬ್ಯಾಂಕ್ ಖಾತೆಗಳ ಮಾಹಿತಿಯನ್ನ ಸಂಗ್ರಹಿಸಲಾಗುತ್ತಿದೆ. ಮಾಜಿ ಕಾರ್ಪೋರೇಟರ್ ಅವರ ಸಂಬಂಧ ಗುತ್ತಿಗೆದಾರರಾಗಿದ್ದು, ಅವರಿಗೆ ಸಂಬಂಧಿಸಿದ ಕಚೇರಿ ಹಾಗೂ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಐದಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ 42 ಕೋಟಿ ರೂಪಾಯಿ ಹಣವನ್ನ ಐಟಿ ಅಧಿಕಾರಿಗಳ ತಂಡ ಜಪ್ತಿ ಮಾಡಿದೆ.
ಚುನಾವಣೆಗೆ ವ್ಯಯಿಸಲು ಹಣ ಸಂಗ್ರಹಿಸಲಾಗಿತ್ತು ಎಂಬ ಮಾಹಿತಿ ಮೇರೆಗೆ ನಿನ್ನೆಯಿಂದ ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಬೆಂಗಳೂರಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ನಿನ್ನೆ ಉದ್ಯಮಿಗಳು, ಜ್ಯುವೆಲರಿ ಶಾಪ್ ಮಾಲೀಕರ ಮನೆ ಮತ್ತು ಕಚೇರಿಗಳಲ್ಲಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು. ಸರ್ಜಾಪುರ ಬಳಿಯ ಮುಳ್ಳೂರು, ಆರ್.ಎಂ.ವಿ ಎಕ್ಸ್ಟೆನ್ಷನ್, ಬಿಇಎಲ್ ಸರ್ಕಲ್, ಮಲ್ಲೇಶ್ವರಂ, ಡಾಲರ್ಸ್ ಕಾಲೋನಿ, ಸದಾಶಿವನಗರ, ಮತ್ತಿಕೇರಿ ಸೇರಿದಂತೆ ಹತ್ತಕ್ಕೂ ಹೆಚ್ಚು ಕಡೆಗಳಲ್ಲಿ ನಿನ್ನೆ ಪರಿಶೀಲನೆ ನಡೆಸಿದ್ದರು.
ಆದಾಯ ತೆರಿಗೆ ವಂಚನೆ ಆರೋಪ ಕಂಡು ಬಂದ ಹಿನ್ನೆಲೆ ಚಿನ್ನ ಗಿರವಿ ಮತ್ತು ಖರೀದಿ ಮಾಡುವ ಕಂಪನಿಗಳ ಮೇಲೆ ದಾಳಿ ನಡೆಸಲಾಗಿತ್ತು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಕಳೆದ ವಾರ ಕೂಡ ತೆರಿಗೆ ವಂಚನೆ ಆರೋಪದ ಮೇಲೆ ಜ್ಯುವೆಲರಿ ಉದ್ಯಮಿಗಳ ಮೇಲೆ ಐಟಿ ದಾಳಿ ಮಾಡಿ ಪರಿಶೀಲನೆ ನಡೆಸಿತ್ತು. ಕಳೆದ ಬಾರಿ ಸಿಕ್ಕ ದಾಖಲಾತಿಗಳ ಆಧರಿಸಿ ನಿನ್ನೆ ದಾಳಿ ಮಾಡಲಾಗಿತ್ತು.
Officials of the Income Tax (I-T) department on Friday continued their raids in several parts of the city and found approximately Rs 42 crore in cash.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm