ಪದ್ಮಶ್ರೀ ಪಂಡಿತ್ ರಾಜೀವ್ ತಾರಾನಾಥ್ ಗೆ ಕಮೀಷನ್ ಕಾಟ ; ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪರ್ಸೆಂಟೇಜ್ ವ್ಯವಹಾರ, ಸಂಭಾವನೆಯಲ್ಲಿ ಮೂರು ಲಕ್ಷ ರೂ.ಕೇಳಿದ ಅಧಿಕಾರಿಗಳು, ಆಫರ್ ರಿಜೆಕ್ಟ್ ಮಾಡಿದ್ದಕ್ಕೆ ಕಾರ್ಯಕ್ರಮಕ್ಕೆ ಕತ್ತರಿ !

14-10-23 01:36 pm       HK News Desk   ಕರ್ನಾಟಕ

ಅಂತಾರಾಷ್ಟ್ರೀಯ ಖ್ಯಾತಿಯ ಸರೋದ್ ವಾದಕ, ಮೈಸೂರಿನ ನಿವಾಸಿ, ಪದ್ಮಶ್ರೀ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ಅರಮನೆ ಆವರಣದಲ್ಲಿ ನಡೆಯುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ನೀಡಲು ಅಧಿಕಾರಿಗಳು ಅವರಿಂದ ಕಮೀಷನ್ ಕೇಳಿರುವ ಆರೋಪ ಕೇಳಿ ಬಂದಿದೆ.

ಮೈಸೂರು, ಅ.14: ಅಂತಾರಾಷ್ಟ್ರೀಯ ಖ್ಯಾತಿಯ ಸರೋದ್ ವಾದಕ, ಮೈಸೂರಿನ ನಿವಾಸಿ, ಪದ್ಮಶ್ರೀ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ಅರಮನೆ ಆವರಣದಲ್ಲಿ ನಡೆಯುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ನೀಡಲು ಅಧಿಕಾರಿಗಳು ಅವರಿಂದ ಕಮೀಷನ್ ಕೇಳಿರುವ ಆರೋಪ ಕೇಳಿ ಬಂದಿದೆ.

91 ವರ್ಷ ವಯಸ್ಸಿನ ಸರೋದ್ ಮಾಂತ್ರಿಕ ಪಂಡಿತ್ ರಾಜೀವ್ ತಾರಾನಾಥ್ ಅವರೇ ಈ ಆರೋಪ ಮಾಡಿದ್ದಾರೆ.

ದಸರಾ ಉತ್ಸವದಲ್ಲಿ ತಮಗೆ ನೀಡುವ ಸಂಭಾವನೆಯಲ್ಲಿ ಮೂರು ಲಕ್ಷ ರೂಪಾಯಿ ಕಮೀಷನ್ ಕೇಳಲಾಯಿತು. ಹೀಗೆ ಕಮೀಷನ್ ಕೇಳಿದವರಿಗೆ ಛೀಮಾರಿ ಹಾಕಿದ್ದೇನೆ. ಕಾರ್ಯಕ್ರಮ ನೀಡದಿದ್ದರೂ ಪರವಾಗಿಲ್ಲ. ಇಂತಹ ಕಮೀಷನ್ ವ್ಯವಹಾರವನ್ನು ಪ್ರೋತ್ಸಾಹಿಸುವುದಿಲ್ಲ ಎಂದು ಪಂಡಿತ್ ರಾಜೀವ್ ತಾರಾನಾಥ್ ಅವರು ಹೇಳಿದ್ದಾರೆ.

ಈ ಘಟನೆ ನಂತರ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ಈ ಬಾರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವಕಾಶ ಕಲ್ಪಿಸಿಲ್ಲ.

Minister for Social Welfare H.C, Mahadevappa, who is also the Minister in charge of Mysuru district, said a probe will be conducted into the alleged demand for commission from the honorarium to be paid to sarod maestro Rajiv Taranath for his recital at Dasara programme.