ಬ್ರೇಕಿಂಗ್ ನ್ಯೂಸ್
16-10-23 04:55 pm Bangalore Correspondent ಕರ್ನಾಟಕ
ಬೆಂಗಳೂರು, ಅ.16: ಲೋಕಸಭೆ ಚುನಾವಣೆಯಲ್ಲಿ ನಾವು ಬಿಜೆಪಿಯನ್ನು ಬೆಂಬಲಿಸಲ್ಲ. ಕಾಂಗ್ರೆಸ್ ಗೆ ಬೆಂಬಲ ನೀಡುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪಕ್ಷದ ನಾಯಕತ್ವದ ನಿರ್ಧಾರದಿಂದ ಅಸಮಾಧಾನಗೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಒಂದಷ್ಟು ಶಾಸಕರು ಮತ್ತು ನಾಯಕರೊಂದಿಗೆ ಸಭೆ ನಡೆಸಿದ ಬಳಿಕ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.
ಜೆಡಿಎಸ್ ಒರಿಜಿನಲ್ ನಮ್ಮದೇ , ನಾವು ಬಿಜೆಪಿಗೆ ಸಪೋರ್ಟ್ ಮಾಡಲ್ಲ. ನಾವು ಕಾಂಗ್ರೆಸ್ ಗೆ ಬೆಂಬಲ ನೀಡುತ್ತೇವೆ ಎಂದು ಸಿಎಂ ಇಬ್ರಾಹಿಂ ಹೇಳಿಕೆ ನೀಡಿದ್ದು ರಾಜಕೀಯದಲ್ಲಿ ಮತ್ತೆ ಸಂಚಲನ ಎಬ್ಬಿಸಿದೆ. ಹಲವಾರು ಎಂಎಲ್ ಗಳು ನನ್ನ ಜೊತೆ ಇದ್ದಾರೆ, ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕಿದೆ, ಇದಕ್ಕಾಗಿ ನಾನು ಪ್ರತ್ಯೇಕವಾಗಿ ಕೋರ್ ಕಮಿಟಿ ರಚನೆ ಮಾಡುತ್ತೇನೆ ಎಂದು ಹೇಳಿದ್ದು ಜೆಡಿಎಸ್ ಒಡೆಯುವ ಸೂಚನೆ ನೀಡಿದ್ದಾರೆ. ಈ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿಗೆ ನೇರವಾಗಿ ಸೆಡ್ಡು ಹೊಡೆದಿದ್ದಾರೆ.
2024ರ ಲೋಕಸಭೆ ಚುನಾವಣೆಗೆ ಎನ್ ಡಿಎ ಮೈತ್ರಿಕೂಟ ಸೇರುವುದಾಗಿ ಇತ್ತೀಚೆಗೆ ಎಚ್.ಡಿ ಕುಮಾರಸ್ವಾಮಿ ಮತ್ತು ದೇವೇಗೌಡರು ಹೇಳಿದ್ದರು. ತನ್ನನ್ನು ದೂರ ಇಟ್ಟು ಮೈತ್ರಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆ ನೀಡಿದ್ದರು. ಅಲ್ಲದೆ, ನನಗೆ ಕಾಂಗ್ರೆಸ್ ಹೈಕಮಾಂಡ್, ಎಎಪಿ, ಎನ್ ಸಿ ಪಿ ಪಕ್ಷಗಳಿಂದ ಕರೆಗಳು ಬಂದಿವೆ ಎಂದು ಇಬ್ರಾಹಿಂ ಹೇಳಿಕೊಂಡಿದ್ದರು. ಇದೀಗ ಕಾಂಗ್ರೆಸ್ ಪರವಾಗಿ ಇಬ್ರಾಹಿಂ ಹೇಳಿಕೆ ನೀಡಿದ್ದು, ತನ್ನ ಬೆಂಬಲಿಗರ ಜೊತೆಗೆ ಕಾಂಗ್ರೆಸ್ ಸೇರುತ್ತಾರೆಯೇ ಜೆಡಿಎಸ್ ಪಕ್ಷವನ್ನೇ ಒಡೆಯುತ್ತಾರೆಯೇ ಎಂಬ ಕುತೂಹಲ ಮೂಡಿಸಿದೆ.
"We will not support the BJP in the Lok Sabha elections. JD(S) state president C M Ibrahim has said that he will support the Congress. The JD(S) state president, who is unhappy with the party leadership's decision to ally with the BJP ahead of the Lok Sabha elections, made the remarks after holding a meeting with some MLAs and leaders.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm