ಬ್ರೇಕಿಂಗ್ ನ್ಯೂಸ್
16-10-23 04:55 pm Bangalore Correspondent ಕರ್ನಾಟಕ
ಬೆಂಗಳೂರು, ಅ.16: ಲೋಕಸಭೆ ಚುನಾವಣೆಯಲ್ಲಿ ನಾವು ಬಿಜೆಪಿಯನ್ನು ಬೆಂಬಲಿಸಲ್ಲ. ಕಾಂಗ್ರೆಸ್ ಗೆ ಬೆಂಬಲ ನೀಡುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪಕ್ಷದ ನಾಯಕತ್ವದ ನಿರ್ಧಾರದಿಂದ ಅಸಮಾಧಾನಗೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಒಂದಷ್ಟು ಶಾಸಕರು ಮತ್ತು ನಾಯಕರೊಂದಿಗೆ ಸಭೆ ನಡೆಸಿದ ಬಳಿಕ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.
ಜೆಡಿಎಸ್ ಒರಿಜಿನಲ್ ನಮ್ಮದೇ , ನಾವು ಬಿಜೆಪಿಗೆ ಸಪೋರ್ಟ್ ಮಾಡಲ್ಲ. ನಾವು ಕಾಂಗ್ರೆಸ್ ಗೆ ಬೆಂಬಲ ನೀಡುತ್ತೇವೆ ಎಂದು ಸಿಎಂ ಇಬ್ರಾಹಿಂ ಹೇಳಿಕೆ ನೀಡಿದ್ದು ರಾಜಕೀಯದಲ್ಲಿ ಮತ್ತೆ ಸಂಚಲನ ಎಬ್ಬಿಸಿದೆ. ಹಲವಾರು ಎಂಎಲ್ ಗಳು ನನ್ನ ಜೊತೆ ಇದ್ದಾರೆ, ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕಿದೆ, ಇದಕ್ಕಾಗಿ ನಾನು ಪ್ರತ್ಯೇಕವಾಗಿ ಕೋರ್ ಕಮಿಟಿ ರಚನೆ ಮಾಡುತ್ತೇನೆ ಎಂದು ಹೇಳಿದ್ದು ಜೆಡಿಎಸ್ ಒಡೆಯುವ ಸೂಚನೆ ನೀಡಿದ್ದಾರೆ. ಈ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿಗೆ ನೇರವಾಗಿ ಸೆಡ್ಡು ಹೊಡೆದಿದ್ದಾರೆ.
2024ರ ಲೋಕಸಭೆ ಚುನಾವಣೆಗೆ ಎನ್ ಡಿಎ ಮೈತ್ರಿಕೂಟ ಸೇರುವುದಾಗಿ ಇತ್ತೀಚೆಗೆ ಎಚ್.ಡಿ ಕುಮಾರಸ್ವಾಮಿ ಮತ್ತು ದೇವೇಗೌಡರು ಹೇಳಿದ್ದರು. ತನ್ನನ್ನು ದೂರ ಇಟ್ಟು ಮೈತ್ರಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆ ನೀಡಿದ್ದರು. ಅಲ್ಲದೆ, ನನಗೆ ಕಾಂಗ್ರೆಸ್ ಹೈಕಮಾಂಡ್, ಎಎಪಿ, ಎನ್ ಸಿ ಪಿ ಪಕ್ಷಗಳಿಂದ ಕರೆಗಳು ಬಂದಿವೆ ಎಂದು ಇಬ್ರಾಹಿಂ ಹೇಳಿಕೊಂಡಿದ್ದರು. ಇದೀಗ ಕಾಂಗ್ರೆಸ್ ಪರವಾಗಿ ಇಬ್ರಾಹಿಂ ಹೇಳಿಕೆ ನೀಡಿದ್ದು, ತನ್ನ ಬೆಂಬಲಿಗರ ಜೊತೆಗೆ ಕಾಂಗ್ರೆಸ್ ಸೇರುತ್ತಾರೆಯೇ ಜೆಡಿಎಸ್ ಪಕ್ಷವನ್ನೇ ಒಡೆಯುತ್ತಾರೆಯೇ ಎಂಬ ಕುತೂಹಲ ಮೂಡಿಸಿದೆ.
"We will not support the BJP in the Lok Sabha elections. JD(S) state president C M Ibrahim has said that he will support the Congress. The JD(S) state president, who is unhappy with the party leadership's decision to ally with the BJP ahead of the Lok Sabha elections, made the remarks after holding a meeting with some MLAs and leaders.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Builder Jithendra Kottary, FIR: ಗನ್ ಹಿಡಿದು ಜೀ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am