ಬ್ರೇಕಿಂಗ್ ನ್ಯೂಸ್
16-10-23 04:55 pm Bangalore Correspondent ಕರ್ನಾಟಕ
ಬೆಂಗಳೂರು, ಅ.16: ಲೋಕಸಭೆ ಚುನಾವಣೆಯಲ್ಲಿ ನಾವು ಬಿಜೆಪಿಯನ್ನು ಬೆಂಬಲಿಸಲ್ಲ. ಕಾಂಗ್ರೆಸ್ ಗೆ ಬೆಂಬಲ ನೀಡುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪಕ್ಷದ ನಾಯಕತ್ವದ ನಿರ್ಧಾರದಿಂದ ಅಸಮಾಧಾನಗೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಒಂದಷ್ಟು ಶಾಸಕರು ಮತ್ತು ನಾಯಕರೊಂದಿಗೆ ಸಭೆ ನಡೆಸಿದ ಬಳಿಕ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.
ಜೆಡಿಎಸ್ ಒರಿಜಿನಲ್ ನಮ್ಮದೇ , ನಾವು ಬಿಜೆಪಿಗೆ ಸಪೋರ್ಟ್ ಮಾಡಲ್ಲ. ನಾವು ಕಾಂಗ್ರೆಸ್ ಗೆ ಬೆಂಬಲ ನೀಡುತ್ತೇವೆ ಎಂದು ಸಿಎಂ ಇಬ್ರಾಹಿಂ ಹೇಳಿಕೆ ನೀಡಿದ್ದು ರಾಜಕೀಯದಲ್ಲಿ ಮತ್ತೆ ಸಂಚಲನ ಎಬ್ಬಿಸಿದೆ. ಹಲವಾರು ಎಂಎಲ್ ಗಳು ನನ್ನ ಜೊತೆ ಇದ್ದಾರೆ, ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕಿದೆ, ಇದಕ್ಕಾಗಿ ನಾನು ಪ್ರತ್ಯೇಕವಾಗಿ ಕೋರ್ ಕಮಿಟಿ ರಚನೆ ಮಾಡುತ್ತೇನೆ ಎಂದು ಹೇಳಿದ್ದು ಜೆಡಿಎಸ್ ಒಡೆಯುವ ಸೂಚನೆ ನೀಡಿದ್ದಾರೆ. ಈ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿಗೆ ನೇರವಾಗಿ ಸೆಡ್ಡು ಹೊಡೆದಿದ್ದಾರೆ.
2024ರ ಲೋಕಸಭೆ ಚುನಾವಣೆಗೆ ಎನ್ ಡಿಎ ಮೈತ್ರಿಕೂಟ ಸೇರುವುದಾಗಿ ಇತ್ತೀಚೆಗೆ ಎಚ್.ಡಿ ಕುಮಾರಸ್ವಾಮಿ ಮತ್ತು ದೇವೇಗೌಡರು ಹೇಳಿದ್ದರು. ತನ್ನನ್ನು ದೂರ ಇಟ್ಟು ಮೈತ್ರಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆ ನೀಡಿದ್ದರು. ಅಲ್ಲದೆ, ನನಗೆ ಕಾಂಗ್ರೆಸ್ ಹೈಕಮಾಂಡ್, ಎಎಪಿ, ಎನ್ ಸಿ ಪಿ ಪಕ್ಷಗಳಿಂದ ಕರೆಗಳು ಬಂದಿವೆ ಎಂದು ಇಬ್ರಾಹಿಂ ಹೇಳಿಕೊಂಡಿದ್ದರು. ಇದೀಗ ಕಾಂಗ್ರೆಸ್ ಪರವಾಗಿ ಇಬ್ರಾಹಿಂ ಹೇಳಿಕೆ ನೀಡಿದ್ದು, ತನ್ನ ಬೆಂಬಲಿಗರ ಜೊತೆಗೆ ಕಾಂಗ್ರೆಸ್ ಸೇರುತ್ತಾರೆಯೇ ಜೆಡಿಎಸ್ ಪಕ್ಷವನ್ನೇ ಒಡೆಯುತ್ತಾರೆಯೇ ಎಂಬ ಕುತೂಹಲ ಮೂಡಿಸಿದೆ.
"We will not support the BJP in the Lok Sabha elections. JD(S) state president C M Ibrahim has said that he will support the Congress. The JD(S) state president, who is unhappy with the party leadership's decision to ally with the BJP ahead of the Lok Sabha elections, made the remarks after holding a meeting with some MLAs and leaders.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm