ಲಷ್ಕರ್‌ ಎ ತೊಯ್ಬಾ ನಂಟು ; ಶಿರಸಿಯಲ್ಲಿ ಶಂಕಿತ ಉಗ್ರ ಸೆರೆ

12-11-20 10:15 am       Headline Karnataka News Network   ಕರ್ನಾಟಕ

ಲಷ್ಕರ್‌ ಎ ತೊಯ್ಬಾ ಉಗ್ರಗಾಮಿ ಸಂಘಟನೆಯ ಪಾಕಿಸ್ತಾನ ಮೂಲದ ನಿಯಂತ್ರಕರು ವಿವಿಧ ಸಾಮಾಜಿಕ ಜಾಲತಾಣದಲ್ಲಿ ಭಾಗಿಯಾಗಿದ್ದ ಓರ್ವನನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ.

ನವದೆಹಲಿ, ನ.12: ಭಾರತದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸುವ ಸಲುವಾಗಿ ಯುವಕರನ್ನು ನೇಮಕಾತಿ ಮಾಡಿಕೊಳ್ಳಲು ನಿಷೇಧಿತ ಲಷ್ಕರ್‌ ಎ ತೊಯ್ಬಾ ಸಂಘಟನೆಯ ಪಾಕಿಸ್ತಾನ ಮೂಲದ ನಿಯಂತ್ರಕರು ನಡೆಸುತ್ತಿದ್ದ ವಿವಿಧ ಸಾಮಾಜಿಕ ಜಾಲತಾಣಗಳ ಭಾಗವಾಗಿದ್ದ ಆರೋಪದ ಮೇರೆಗೆ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಯುವಕನೊಬ್ಬನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ.

ಶಿರಸಿ ತಾಲೂಕಿನ ಆರೆಕೊಪ್ಪದ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರ ಪುತ್ರ ಸಯ್ಯದ್‌ ಇದ್ರಿಸ್‌ ಸಾಬ್‌ ಮುನ್ನಾ (28) ಎಂಬಾತನೇ ಬಂಧಿತ ಯುವಕ. ಈತನನ್ನು ಬುಧವಾರ ನಸುಕಿನ ಜಾವ ಎನ್‌ಐಎ ತಂಡ ಬಂಧಿಸಿದೆ. ಈ ಕುರಿತು ಎನ್‌ಐಎ ವಕ್ತಾರರು ದೆಹಲಿಯಲ್ಲಿ ಹೇಳಿಕೆಯೊಂದನ್ನು ಬುಧವಾರ ಬಿಡುಗಡೆ ಮಾಡಿದ್ದಾರೆ.

ಲಷ್ಕರ್‌ ಎ ತೊಯ್ಬಾ ಉಗ್ರಗಾಮಿ ಸಂಘಟನೆಯ ಪಾಕಿಸ್ತಾನ ಮೂಲದ ನಿಯಂತ್ರಕರು ವಿವಿಧ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುತ್ತಿದ್ದಾರೆ.

Youth from Sirsi, Karnataka was arrested by NIA in connection of having terror link with Lashkar-e-Taiba. The arrested has been identified as Sab Munna (28).