ಬ್ರೇಕಿಂಗ್ ನ್ಯೂಸ್
18-10-23 01:03 pm HK News Desk ಕರ್ನಾಟಕ
ವಿಜಯಪುರ, ಅ.18: ಸರ್ವಿಸ್ ರಸ್ತೆಯ ಡಿವೈಡರ್ ಮೇಲೆ ಕುಳಿತು ಮಾತನಾಡುತ್ತಿದ್ದವರ ಮೇಲೆ ವೇಗವಾಗಿ ಬಂದ ಟ್ರಕ್ ಯುವಕರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವಿಗೀಡಾಗಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ಟೋಲ್ ಗೇಟ್ ಬಳಿ ನಡೆದಿದೆ.
ಮೃತ ಯುವಕರನ್ನು ವಿಜಯಪುರ ವಜ್ರಹನುಮಾನ ನಗರದ ನಿವಾಸಿಗಳಾದ ಶಿವಾನಂದ ಚೌಧರಿ (25), ಸುನೀಲ ಖಾನಾಪೂರ (26), ಈರಣ್ಣ ಕೋಲಾರ (26) ಮತ್ತು ಪ್ರವೀಣ ಪಾಟೀಲ್ (30) ಎಂದು ಗುರುತಿಸಲಾಗಿದೆ.
ಮಂಗಳವಾರ ರಾತ್ರಿ 10 ಗಂಟೆಯ ಸುಮಾರಿಗೆ ನಾಲ್ವರು ಸ್ನೇಹಿತರು ಸೇರಿ ಊಟಕ್ಕೆ ಹೊರಗಡೆ ಹೋಗಿದ್ದಾರೆ. ಊಟ ಮುಗಿಸಿಕೊಂಡು ರಾಷ್ಟ್ರೀಯ ಹೆದ್ದಾರಿ 50ರಲ್ಲಿನ ಟೋಲ್ಗೇಟ್ ಹತ್ತಿರದ ಟ್ರಕ್ ಬೇ ಬಳಿ ಇರುವ ಡಿವೈಡರ್ ಮೇಲೆ ಯುವಕರು ಕುಳಿತಿದ್ದರು. ಈ ವೇಳೆ ಜವರಾಯನ ರೂಪದಲ್ಲಿ ಬಂದ ಲಾರಿ ಯುವಕರ ಮೇಲೆ ಹರಿದಿದೆ. ತಕ್ಷಣವೇ ಸ್ಥಳೀಯರು ಅಂಬ್ಯುಲೆನ್ಸ್ ಕರೆ ಮಾಡಿ ತೀವ್ರವಾಗಿ ಗಾಯಗೊಂಡ ಯುವಕರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲು ಮುಂದಾಗಿದ್ದರು. ಆದ್ರೆ ಯುವಕರು ಗಂಭೀರವಾಗಿ ಗಾಯಗೊಂಡ ಹಿನ್ನೆಲೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಚಾಲಕ ಲಾರಿಯೊಂದಿಗೆ ಪರಾರಿಯಾಗಿದ್ದಾನೆ. ಇನ್ನು, ಈ ಘಟನೆಯಲ್ಲಿ ಯುವಕರಿಗೆ ಸೇರಿದ ಬೈಕ್ಗಳು ಸಂಪೂರ್ಣ ನುಜ್ಜುಗುಜ್ಜಾಗಿವೆ.
ಸುದ್ದಿ ತಿಳಿದಾಕ್ಷಣ ಘಟನಾ ಸ್ಥಳಕ್ಕೆ ಡಿವೈಎಸ್ಪಿ ಗಿರಿಮಲ್ಲ ತಳಕಟ್ಟಿ ಸೇರಿದಂತೆ ಮೊದಲಾದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ವಶಕ್ಕೆ ಪಡೆದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪ್ರೆಗೆ ರವಾನಿಸಿದರು. ಬದುಕಿ ಬಾಳಿ ಸುಂದರ ಭವಿಷ್ಯದ ಕನಸು ಕಟ್ಟಿಕೊಂಡಿದ್ದ ನಾಲ್ವರು ಸ್ನೇಹಿತರು ದಾರುಣ ಅಂತ್ಯ ಕಂಡಿರುವುದರಿಂದ ಕುಟುಂಬಸ್ಥರು ಮತ್ತು ಸಂಬಂಧಿಕರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ.
In a tragic incident, four persons were killed on the spot when a speeding truck ran over them near a toll gate in Vijayapura district.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 10:59 pm
Mangalore Correspondent
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am