ಬ್ರೇಕಿಂಗ್ ನ್ಯೂಸ್
18-10-23 01:03 pm HK News Desk ಕರ್ನಾಟಕ
ವಿಜಯಪುರ, ಅ.18: ಸರ್ವಿಸ್ ರಸ್ತೆಯ ಡಿವೈಡರ್ ಮೇಲೆ ಕುಳಿತು ಮಾತನಾಡುತ್ತಿದ್ದವರ ಮೇಲೆ ವೇಗವಾಗಿ ಬಂದ ಟ್ರಕ್ ಯುವಕರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವಿಗೀಡಾಗಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ಟೋಲ್ ಗೇಟ್ ಬಳಿ ನಡೆದಿದೆ.
ಮೃತ ಯುವಕರನ್ನು ವಿಜಯಪುರ ವಜ್ರಹನುಮಾನ ನಗರದ ನಿವಾಸಿಗಳಾದ ಶಿವಾನಂದ ಚೌಧರಿ (25), ಸುನೀಲ ಖಾನಾಪೂರ (26), ಈರಣ್ಣ ಕೋಲಾರ (26) ಮತ್ತು ಪ್ರವೀಣ ಪಾಟೀಲ್ (30) ಎಂದು ಗುರುತಿಸಲಾಗಿದೆ.
ಮಂಗಳವಾರ ರಾತ್ರಿ 10 ಗಂಟೆಯ ಸುಮಾರಿಗೆ ನಾಲ್ವರು ಸ್ನೇಹಿತರು ಸೇರಿ ಊಟಕ್ಕೆ ಹೊರಗಡೆ ಹೋಗಿದ್ದಾರೆ. ಊಟ ಮುಗಿಸಿಕೊಂಡು ರಾಷ್ಟ್ರೀಯ ಹೆದ್ದಾರಿ 50ರಲ್ಲಿನ ಟೋಲ್ಗೇಟ್ ಹತ್ತಿರದ ಟ್ರಕ್ ಬೇ ಬಳಿ ಇರುವ ಡಿವೈಡರ್ ಮೇಲೆ ಯುವಕರು ಕುಳಿತಿದ್ದರು. ಈ ವೇಳೆ ಜವರಾಯನ ರೂಪದಲ್ಲಿ ಬಂದ ಲಾರಿ ಯುವಕರ ಮೇಲೆ ಹರಿದಿದೆ. ತಕ್ಷಣವೇ ಸ್ಥಳೀಯರು ಅಂಬ್ಯುಲೆನ್ಸ್ ಕರೆ ಮಾಡಿ ತೀವ್ರವಾಗಿ ಗಾಯಗೊಂಡ ಯುವಕರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲು ಮುಂದಾಗಿದ್ದರು. ಆದ್ರೆ ಯುವಕರು ಗಂಭೀರವಾಗಿ ಗಾಯಗೊಂಡ ಹಿನ್ನೆಲೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಚಾಲಕ ಲಾರಿಯೊಂದಿಗೆ ಪರಾರಿಯಾಗಿದ್ದಾನೆ. ಇನ್ನು, ಈ ಘಟನೆಯಲ್ಲಿ ಯುವಕರಿಗೆ ಸೇರಿದ ಬೈಕ್ಗಳು ಸಂಪೂರ್ಣ ನುಜ್ಜುಗುಜ್ಜಾಗಿವೆ.
ಸುದ್ದಿ ತಿಳಿದಾಕ್ಷಣ ಘಟನಾ ಸ್ಥಳಕ್ಕೆ ಡಿವೈಎಸ್ಪಿ ಗಿರಿಮಲ್ಲ ತಳಕಟ್ಟಿ ಸೇರಿದಂತೆ ಮೊದಲಾದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ವಶಕ್ಕೆ ಪಡೆದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪ್ರೆಗೆ ರವಾನಿಸಿದರು. ಬದುಕಿ ಬಾಳಿ ಸುಂದರ ಭವಿಷ್ಯದ ಕನಸು ಕಟ್ಟಿಕೊಂಡಿದ್ದ ನಾಲ್ವರು ಸ್ನೇಹಿತರು ದಾರುಣ ಅಂತ್ಯ ಕಂಡಿರುವುದರಿಂದ ಕುಟುಂಬಸ್ಥರು ಮತ್ತು ಸಂಬಂಧಿಕರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ.
In a tragic incident, four persons were killed on the spot when a speeding truck ran over them near a toll gate in Vijayapura district.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Builder Jithendra Kottary, FIR: ಗನ್ ಹಿಡಿದು ಜೀ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am