ಬ್ರೇಕಿಂಗ್ ನ್ಯೂಸ್
18-10-23 01:03 pm HK News Desk ಕರ್ನಾಟಕ
ವಿಜಯಪುರ, ಅ.18: ಸರ್ವಿಸ್ ರಸ್ತೆಯ ಡಿವೈಡರ್ ಮೇಲೆ ಕುಳಿತು ಮಾತನಾಡುತ್ತಿದ್ದವರ ಮೇಲೆ ವೇಗವಾಗಿ ಬಂದ ಟ್ರಕ್ ಯುವಕರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವಿಗೀಡಾಗಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ಟೋಲ್ ಗೇಟ್ ಬಳಿ ನಡೆದಿದೆ.
ಮೃತ ಯುವಕರನ್ನು ವಿಜಯಪುರ ವಜ್ರಹನುಮಾನ ನಗರದ ನಿವಾಸಿಗಳಾದ ಶಿವಾನಂದ ಚೌಧರಿ (25), ಸುನೀಲ ಖಾನಾಪೂರ (26), ಈರಣ್ಣ ಕೋಲಾರ (26) ಮತ್ತು ಪ್ರವೀಣ ಪಾಟೀಲ್ (30) ಎಂದು ಗುರುತಿಸಲಾಗಿದೆ.
ಮಂಗಳವಾರ ರಾತ್ರಿ 10 ಗಂಟೆಯ ಸುಮಾರಿಗೆ ನಾಲ್ವರು ಸ್ನೇಹಿತರು ಸೇರಿ ಊಟಕ್ಕೆ ಹೊರಗಡೆ ಹೋಗಿದ್ದಾರೆ. ಊಟ ಮುಗಿಸಿಕೊಂಡು ರಾಷ್ಟ್ರೀಯ ಹೆದ್ದಾರಿ 50ರಲ್ಲಿನ ಟೋಲ್ಗೇಟ್ ಹತ್ತಿರದ ಟ್ರಕ್ ಬೇ ಬಳಿ ಇರುವ ಡಿವೈಡರ್ ಮೇಲೆ ಯುವಕರು ಕುಳಿತಿದ್ದರು. ಈ ವೇಳೆ ಜವರಾಯನ ರೂಪದಲ್ಲಿ ಬಂದ ಲಾರಿ ಯುವಕರ ಮೇಲೆ ಹರಿದಿದೆ. ತಕ್ಷಣವೇ ಸ್ಥಳೀಯರು ಅಂಬ್ಯುಲೆನ್ಸ್ ಕರೆ ಮಾಡಿ ತೀವ್ರವಾಗಿ ಗಾಯಗೊಂಡ ಯುವಕರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲು ಮುಂದಾಗಿದ್ದರು. ಆದ್ರೆ ಯುವಕರು ಗಂಭೀರವಾಗಿ ಗಾಯಗೊಂಡ ಹಿನ್ನೆಲೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಚಾಲಕ ಲಾರಿಯೊಂದಿಗೆ ಪರಾರಿಯಾಗಿದ್ದಾನೆ. ಇನ್ನು, ಈ ಘಟನೆಯಲ್ಲಿ ಯುವಕರಿಗೆ ಸೇರಿದ ಬೈಕ್ಗಳು ಸಂಪೂರ್ಣ ನುಜ್ಜುಗುಜ್ಜಾಗಿವೆ.
ಸುದ್ದಿ ತಿಳಿದಾಕ್ಷಣ ಘಟನಾ ಸ್ಥಳಕ್ಕೆ ಡಿವೈಎಸ್ಪಿ ಗಿರಿಮಲ್ಲ ತಳಕಟ್ಟಿ ಸೇರಿದಂತೆ ಮೊದಲಾದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ವಶಕ್ಕೆ ಪಡೆದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪ್ರೆಗೆ ರವಾನಿಸಿದರು. ಬದುಕಿ ಬಾಳಿ ಸುಂದರ ಭವಿಷ್ಯದ ಕನಸು ಕಟ್ಟಿಕೊಂಡಿದ್ದ ನಾಲ್ವರು ಸ್ನೇಹಿತರು ದಾರುಣ ಅಂತ್ಯ ಕಂಡಿರುವುದರಿಂದ ಕುಟುಂಬಸ್ಥರು ಮತ್ತು ಸಂಬಂಧಿಕರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ.
In a tragic incident, four persons were killed on the spot when a speeding truck ran over them near a toll gate in Vijayapura district.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm