ಬ್ರೇಕಿಂಗ್ ನ್ಯೂಸ್
18-10-23 01:03 pm HK News Desk ಕರ್ನಾಟಕ
ವಿಜಯಪುರ, ಅ.18: ಸರ್ವಿಸ್ ರಸ್ತೆಯ ಡಿವೈಡರ್ ಮೇಲೆ ಕುಳಿತು ಮಾತನಾಡುತ್ತಿದ್ದವರ ಮೇಲೆ ವೇಗವಾಗಿ ಬಂದ ಟ್ರಕ್ ಯುವಕರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವಿಗೀಡಾಗಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ಟೋಲ್ ಗೇಟ್ ಬಳಿ ನಡೆದಿದೆ.
ಮೃತ ಯುವಕರನ್ನು ವಿಜಯಪುರ ವಜ್ರಹನುಮಾನ ನಗರದ ನಿವಾಸಿಗಳಾದ ಶಿವಾನಂದ ಚೌಧರಿ (25), ಸುನೀಲ ಖಾನಾಪೂರ (26), ಈರಣ್ಣ ಕೋಲಾರ (26) ಮತ್ತು ಪ್ರವೀಣ ಪಾಟೀಲ್ (30) ಎಂದು ಗುರುತಿಸಲಾಗಿದೆ.
ಮಂಗಳವಾರ ರಾತ್ರಿ 10 ಗಂಟೆಯ ಸುಮಾರಿಗೆ ನಾಲ್ವರು ಸ್ನೇಹಿತರು ಸೇರಿ ಊಟಕ್ಕೆ ಹೊರಗಡೆ ಹೋಗಿದ್ದಾರೆ. ಊಟ ಮುಗಿಸಿಕೊಂಡು ರಾಷ್ಟ್ರೀಯ ಹೆದ್ದಾರಿ 50ರಲ್ಲಿನ ಟೋಲ್ಗೇಟ್ ಹತ್ತಿರದ ಟ್ರಕ್ ಬೇ ಬಳಿ ಇರುವ ಡಿವೈಡರ್ ಮೇಲೆ ಯುವಕರು ಕುಳಿತಿದ್ದರು. ಈ ವೇಳೆ ಜವರಾಯನ ರೂಪದಲ್ಲಿ ಬಂದ ಲಾರಿ ಯುವಕರ ಮೇಲೆ ಹರಿದಿದೆ. ತಕ್ಷಣವೇ ಸ್ಥಳೀಯರು ಅಂಬ್ಯುಲೆನ್ಸ್ ಕರೆ ಮಾಡಿ ತೀವ್ರವಾಗಿ ಗಾಯಗೊಂಡ ಯುವಕರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲು ಮುಂದಾಗಿದ್ದರು. ಆದ್ರೆ ಯುವಕರು ಗಂಭೀರವಾಗಿ ಗಾಯಗೊಂಡ ಹಿನ್ನೆಲೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಚಾಲಕ ಲಾರಿಯೊಂದಿಗೆ ಪರಾರಿಯಾಗಿದ್ದಾನೆ. ಇನ್ನು, ಈ ಘಟನೆಯಲ್ಲಿ ಯುವಕರಿಗೆ ಸೇರಿದ ಬೈಕ್ಗಳು ಸಂಪೂರ್ಣ ನುಜ್ಜುಗುಜ್ಜಾಗಿವೆ.
ಸುದ್ದಿ ತಿಳಿದಾಕ್ಷಣ ಘಟನಾ ಸ್ಥಳಕ್ಕೆ ಡಿವೈಎಸ್ಪಿ ಗಿರಿಮಲ್ಲ ತಳಕಟ್ಟಿ ಸೇರಿದಂತೆ ಮೊದಲಾದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ವಶಕ್ಕೆ ಪಡೆದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪ್ರೆಗೆ ರವಾನಿಸಿದರು. ಬದುಕಿ ಬಾಳಿ ಸುಂದರ ಭವಿಷ್ಯದ ಕನಸು ಕಟ್ಟಿಕೊಂಡಿದ್ದ ನಾಲ್ವರು ಸ್ನೇಹಿತರು ದಾರುಣ ಅಂತ್ಯ ಕಂಡಿರುವುದರಿಂದ ಕುಟುಂಬಸ್ಥರು ಮತ್ತು ಸಂಬಂಧಿಕರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ.
In a tragic incident, four persons were killed on the spot when a speeding truck ran over them near a toll gate in Vijayapura district.
19-05-24 11:54 am
Bangalore Correspondent
Hubballi Anjali Murder, Police DCP P Rajeev:...
19-05-24 10:42 am
Deve Gowda, prajwal Revanna: ಪ್ರಜ್ವಲ್ ರೇವಣ್ಣ...
18-05-24 10:01 pm
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
19-05-24 04:30 pm
HK News Desk
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
19-05-24 04:11 pm
Mangalore Correspondent
Dr Dhananjay Sarji in Mangalore, Vidhan Paris...
19-05-24 03:34 pm
Mangalore, MLA Harish poonja, Belthangady vid...
19-05-24 12:13 pm
Bommai, Ayanur Manjunath, Mangalore: ಕಾರ್ಮಿಕರ...
18-05-24 10:31 pm
Raghupati Bhat, BJP, Mangalore: ಬಿಜೆಪಿಯಲ್ಲಿ ಗ...
18-05-24 05:13 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm