ಬ್ರೇಕಿಂಗ್ ನ್ಯೂಸ್
18-10-23 05:07 pm Bangalore Correspondent ಕರ್ನಾಟಕ
ಬೆಂಗಳೂರು, ಅ.18: ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಬುಧವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆ ಆಗಿದೆ.
ತಮಿಳುನಾಡಿನ ವಾಯಂಬಾಡಿ ಮೂಲದ ರಾಜೇಶ್ ಮೃತ ಯುವಕ.
ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ರಾಜೇಶ್ ಕೂಲಿ ಕೆಲಸಕ್ಕಾಗಿ ಬಂದಿದ್ದರು.
ಅಕ್ಟೊಬರ್ 7ರಂದು ಮಧ್ಯಾಹ್ನ 3.30ಕ್ಕೆ ಲಾರಿಯಿಂದ ಗೋದಾಮಿಗೆ ಪಟಾಕಿ ಇಳಿಸುವಾಗ ದುರಂತ ಸಂಭವಿಸಿತ್ತು.
ಅದೇ ದಿನ 13 ಶವಗಳನ್ನು ಹೊರ ತೆಗೆಯಲಾಗಿತ್ತು.
ಅತ್ತಿಬೆಲೆ ಪಟಾಕಿ ದುರಂತಕ್ಕೆ ಸಂಬಂಧಪಟ್ಟಂತೆ ಮ್ಯಾಜಿಸ್ಟ್ರಿಯಲ್ ತನಿಖೆ ನಡೆಸಲು ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮಲಾನ್ ಆದಿತ್ಯ ಬಿಸ್ವಾಸ್ ಅವರನ್ನು ವಿಚಾರಣಾಧಿಕಾರಿಯಾಗಿ ನೇಮಿಸಲಾಗಿದ್ದು, ವಿಚಾರಣೆ ನಡೆಸಿ ವರದಿ ಸಲ್ಲಿಸಲು ಮೂರು ತಿಂಗಳ ಗಡುವು ನಿಗದಿಪಡಿಸಲಾಗಿದೆ.
ಕರ್ನಾಟಕ– ತಮಿಳುನಾಡು ಗಡಿಯಲ್ಲಿರುವ ಅತ್ತಿಬೆಲೆಯ ಶ್ರೀ ಬಾಲಾಜಿ ಟ್ರೇಡರ್ಸ್ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿ, 16 ಮಂದಿ ಮೃತಪಟ್ಟಿದ್ದರು. ಈ ಬಗ್ಗೆ ಅತ್ತಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ–ಐಜಿಪಿ) ಅಲೋಕ್ ಮೋಹನ್ ವರದಿಯೊಂದನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿದ್ದರು. ವರದಿ ಪರಿಶೀಲನೆ ನಡೆಸಿರುವ ಸರ್ಕಾರ, ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ.
‘ಪಟಾಕಿ ಅವಘಡಕ್ಕೆ ಕಾರಣವೇನು? ಪಟಾಕಿ ಮಳಿಗೆಗೆ ಅನುಮತಿ ಪಡೆಯಲಾಗಿತ್ತಾ? ಮಾಲೀಕರಿಂದ ಯಾವೆಲ್ಲ ದಾಖಲೆ ಪಡೆದು ಪರವಾನಗಿ ನೀಡಲಾಗಿತ್ತು ? ಪರವಾನಗಿ ನೀಡುವಲ್ಲಿ ಲೋಪವಾಗಿದೆಯಾ ? ಲೋಪವೆಸಗಿದವರು ಯಾರು ? ಅವಘಡ ಆಕಸ್ಮಿಕವೋ ಅಥವಾ ನಿರ್ಲಕ್ಷ್ಯದಿಂದ ಆಗಿದೆಯಾ ? ನಷ್ಟ ಎಷ್ಟಾಗಿದೆ ? ಎಂಬ ಬಗ್ಗೆ ಪಟಾಕಿ ದಾಸ್ತಾನು ಮಳಿಗೆಗಳ ಸ್ಫೋಟಕ ಕಾಯ್ದೆಯನ್ವಯ ವಿಚಾರಣೆ ನಡೆಸಿ ವರದಿ ಸಲ್ಲಿಸಬೇಕು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.
The death toll in the Attibele firecracker blaze rose to 17 on Wednesday after another victim passed away early in the morning.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am