ಬ್ರೇಕಿಂಗ್ ನ್ಯೂಸ್
18-10-23 05:07 pm Bangalore Correspondent ಕರ್ನಾಟಕ
ಬೆಂಗಳೂರು, ಅ.18: ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಬುಧವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆ ಆಗಿದೆ.
ತಮಿಳುನಾಡಿನ ವಾಯಂಬಾಡಿ ಮೂಲದ ರಾಜೇಶ್ ಮೃತ ಯುವಕ.
ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ರಾಜೇಶ್ ಕೂಲಿ ಕೆಲಸಕ್ಕಾಗಿ ಬಂದಿದ್ದರು.
ಅಕ್ಟೊಬರ್ 7ರಂದು ಮಧ್ಯಾಹ್ನ 3.30ಕ್ಕೆ ಲಾರಿಯಿಂದ ಗೋದಾಮಿಗೆ ಪಟಾಕಿ ಇಳಿಸುವಾಗ ದುರಂತ ಸಂಭವಿಸಿತ್ತು.
ಅದೇ ದಿನ 13 ಶವಗಳನ್ನು ಹೊರ ತೆಗೆಯಲಾಗಿತ್ತು.
ಅತ್ತಿಬೆಲೆ ಪಟಾಕಿ ದುರಂತಕ್ಕೆ ಸಂಬಂಧಪಟ್ಟಂತೆ ಮ್ಯಾಜಿಸ್ಟ್ರಿಯಲ್ ತನಿಖೆ ನಡೆಸಲು ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮಲಾನ್ ಆದಿತ್ಯ ಬಿಸ್ವಾಸ್ ಅವರನ್ನು ವಿಚಾರಣಾಧಿಕಾರಿಯಾಗಿ ನೇಮಿಸಲಾಗಿದ್ದು, ವಿಚಾರಣೆ ನಡೆಸಿ ವರದಿ ಸಲ್ಲಿಸಲು ಮೂರು ತಿಂಗಳ ಗಡುವು ನಿಗದಿಪಡಿಸಲಾಗಿದೆ.
ಕರ್ನಾಟಕ– ತಮಿಳುನಾಡು ಗಡಿಯಲ್ಲಿರುವ ಅತ್ತಿಬೆಲೆಯ ಶ್ರೀ ಬಾಲಾಜಿ ಟ್ರೇಡರ್ಸ್ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿ, 16 ಮಂದಿ ಮೃತಪಟ್ಟಿದ್ದರು. ಈ ಬಗ್ಗೆ ಅತ್ತಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ–ಐಜಿಪಿ) ಅಲೋಕ್ ಮೋಹನ್ ವರದಿಯೊಂದನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿದ್ದರು. ವರದಿ ಪರಿಶೀಲನೆ ನಡೆಸಿರುವ ಸರ್ಕಾರ, ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ.
‘ಪಟಾಕಿ ಅವಘಡಕ್ಕೆ ಕಾರಣವೇನು? ಪಟಾಕಿ ಮಳಿಗೆಗೆ ಅನುಮತಿ ಪಡೆಯಲಾಗಿತ್ತಾ? ಮಾಲೀಕರಿಂದ ಯಾವೆಲ್ಲ ದಾಖಲೆ ಪಡೆದು ಪರವಾನಗಿ ನೀಡಲಾಗಿತ್ತು ? ಪರವಾನಗಿ ನೀಡುವಲ್ಲಿ ಲೋಪವಾಗಿದೆಯಾ ? ಲೋಪವೆಸಗಿದವರು ಯಾರು ? ಅವಘಡ ಆಕಸ್ಮಿಕವೋ ಅಥವಾ ನಿರ್ಲಕ್ಷ್ಯದಿಂದ ಆಗಿದೆಯಾ ? ನಷ್ಟ ಎಷ್ಟಾಗಿದೆ ? ಎಂಬ ಬಗ್ಗೆ ಪಟಾಕಿ ದಾಸ್ತಾನು ಮಳಿಗೆಗಳ ಸ್ಫೋಟಕ ಕಾಯ್ದೆಯನ್ವಯ ವಿಚಾರಣೆ ನಡೆಸಿ ವರದಿ ಸಲ್ಲಿಸಬೇಕು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.
The death toll in the Attibele firecracker blaze rose to 17 on Wednesday after another victim passed away early in the morning.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm