ಬ್ರೇಕಿಂಗ್ ನ್ಯೂಸ್
18-10-23 05:07 pm Bangalore Correspondent ಕರ್ನಾಟಕ
ಬೆಂಗಳೂರು, ಅ.18: ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಬುಧವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆ ಆಗಿದೆ.
ತಮಿಳುನಾಡಿನ ವಾಯಂಬಾಡಿ ಮೂಲದ ರಾಜೇಶ್ ಮೃತ ಯುವಕ.
ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ರಾಜೇಶ್ ಕೂಲಿ ಕೆಲಸಕ್ಕಾಗಿ ಬಂದಿದ್ದರು.
ಅಕ್ಟೊಬರ್ 7ರಂದು ಮಧ್ಯಾಹ್ನ 3.30ಕ್ಕೆ ಲಾರಿಯಿಂದ ಗೋದಾಮಿಗೆ ಪಟಾಕಿ ಇಳಿಸುವಾಗ ದುರಂತ ಸಂಭವಿಸಿತ್ತು.
ಅದೇ ದಿನ 13 ಶವಗಳನ್ನು ಹೊರ ತೆಗೆಯಲಾಗಿತ್ತು.
ಅತ್ತಿಬೆಲೆ ಪಟಾಕಿ ದುರಂತಕ್ಕೆ ಸಂಬಂಧಪಟ್ಟಂತೆ ಮ್ಯಾಜಿಸ್ಟ್ರಿಯಲ್ ತನಿಖೆ ನಡೆಸಲು ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮಲಾನ್ ಆದಿತ್ಯ ಬಿಸ್ವಾಸ್ ಅವರನ್ನು ವಿಚಾರಣಾಧಿಕಾರಿಯಾಗಿ ನೇಮಿಸಲಾಗಿದ್ದು, ವಿಚಾರಣೆ ನಡೆಸಿ ವರದಿ ಸಲ್ಲಿಸಲು ಮೂರು ತಿಂಗಳ ಗಡುವು ನಿಗದಿಪಡಿಸಲಾಗಿದೆ.
ಕರ್ನಾಟಕ– ತಮಿಳುನಾಡು ಗಡಿಯಲ್ಲಿರುವ ಅತ್ತಿಬೆಲೆಯ ಶ್ರೀ ಬಾಲಾಜಿ ಟ್ರೇಡರ್ಸ್ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿ, 16 ಮಂದಿ ಮೃತಪಟ್ಟಿದ್ದರು. ಈ ಬಗ್ಗೆ ಅತ್ತಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ–ಐಜಿಪಿ) ಅಲೋಕ್ ಮೋಹನ್ ವರದಿಯೊಂದನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿದ್ದರು. ವರದಿ ಪರಿಶೀಲನೆ ನಡೆಸಿರುವ ಸರ್ಕಾರ, ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ.
‘ಪಟಾಕಿ ಅವಘಡಕ್ಕೆ ಕಾರಣವೇನು? ಪಟಾಕಿ ಮಳಿಗೆಗೆ ಅನುಮತಿ ಪಡೆಯಲಾಗಿತ್ತಾ? ಮಾಲೀಕರಿಂದ ಯಾವೆಲ್ಲ ದಾಖಲೆ ಪಡೆದು ಪರವಾನಗಿ ನೀಡಲಾಗಿತ್ತು ? ಪರವಾನಗಿ ನೀಡುವಲ್ಲಿ ಲೋಪವಾಗಿದೆಯಾ ? ಲೋಪವೆಸಗಿದವರು ಯಾರು ? ಅವಘಡ ಆಕಸ್ಮಿಕವೋ ಅಥವಾ ನಿರ್ಲಕ್ಷ್ಯದಿಂದ ಆಗಿದೆಯಾ ? ನಷ್ಟ ಎಷ್ಟಾಗಿದೆ ? ಎಂಬ ಬಗ್ಗೆ ಪಟಾಕಿ ದಾಸ್ತಾನು ಮಳಿಗೆಗಳ ಸ್ಫೋಟಕ ಕಾಯ್ದೆಯನ್ವಯ ವಿಚಾರಣೆ ನಡೆಸಿ ವರದಿ ಸಲ್ಲಿಸಬೇಕು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.
The death toll in the Attibele firecracker blaze rose to 17 on Wednesday after another victim passed away early in the morning.
13-02-25 07:28 pm
HK News Desk
ಜನಪದ ಹಾಡುಗಾರ್ತಿ, ಪದ್ಮಶ್ರೀ ಪುರಸ್ಕೃತ ಸುಕ್ರಜ್ಜಿ...
13-02-25 05:05 pm
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬದಲಾವಣೆ ಸುಳಿವು ಕೊಟ...
12-02-25 12:55 pm
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
13-02-25 02:45 pm
HK News Desk
Maha Kumbh, Jabalpur Accident: ಪ್ರಯಾಗ್ರಾಜ್ನ...
11-02-25 04:19 pm
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
13-02-25 09:40 pm
Mangalore Correspondent
Mangalore Ullal Police, Inspector Balakrishna...
13-02-25 09:17 pm
Income tax Raid, Swastik Trading company, Man...
13-02-25 10:08 am
Bomb Threat, School, Mangalore: ಮಂಗಳೂರಿನಲ್ಲಿ...
12-02-25 10:58 pm
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
13-02-25 10:20 pm
Mangalore Correspondent
Mangalore Robbery, Kolya: ನೋಡ ನೋಡುತ್ತಲೇ ಅಂಚೆ...
13-02-25 10:14 pm
Fake HPCL oil racket, Belagavi, Vijayapura: ಎ...
13-02-25 05:54 pm
Mangalore, Sieal Residency Bar Valachil, Crim...
12-02-25 10:28 pm
Honor killing Bangalore, Daughter killed, Cri...
12-02-25 06:23 pm