ಮರಕ್ಕೆ ಜೀಪ್ ಡಿಕ್ಕಿ: ಎಎಸ್‌ಐ, ಪೊಲೀಸ್‌ ಕಾನ್ಸ್‌ಟೇಬಲ್‌ ಸ್ಥಳದಲ್ಲೇ ಸಾವು

12-11-20 11:53 am       Mysore Correspondent   ಕರ್ನಾಟಕ

ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್‌ ಜೀಪ್ ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು, ನವೆಂಬರ್ 12: ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್‌ ಜೀಪ್ ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಜೀಪ್ ನಲ್ಲಿದ್ದ ಎಎಸ್ಐ ಹಾಗೂ ಹೆಡ್‌ ಕಾನ್‌ಸ್ಟೇಬಲ್ ಸಾವಿಗೀಡಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಸಿದ್ದನಕೊಪ್ಪಲು ಗೇಟ್‌ ಬಳಿ ರಾತ್ರಿ ನಡೆದಿದೆ.

ಮೃತ ಪೊಲೀಸರನ್ನು ಕೆ.ಆರ್.ನಗರ ಪೊಲೀಸ್ ಠಾಣೆಯ ಎಎಸ್ಐ ಮೂರ್ತಿ ಹಾಗೂ ಹೆಡ್ ಕಾನ್ಸಟೇಬಲ್ ಶಾಂತಕುಮಾರ್ ಎಂದು ಗುರುತಿಸಲಾಗಿದೆ.

ಪೊಲೀಸ್ ಇಲಾಖೆಯ ಜೀಪಿನಲ್ಲಿ ನೈಟ್ ರೌಂಡ್ ಕರ್ತವ್ಯ ನಿರ್ವಹಿಸಿಕೊಂಡು, ಸಾಲಿಗ್ರಾಮ ಪೊಲೀಸ್ ಠಾಣೆಯ ಕಡೆಯಿಂದ ಕೆ.ಆರ್.ನಗರದ ಕಡೆಗೆ ಬರುತ್ತಿರುವಾಗ ಬೆಳಗಿನ ಜಾವ 3 ಗಂಟೆ ಸಮಯದಲ್ಲಿ ಸಿದ್ದನಕೊಪ್ಪಲು ಗೇಟ್ ಸಮೀಪ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರ ಮೃತದೇಹಗಳನ್ನು ಕೆ.ಆರ್.ನಗರ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ.

ಶವಾಗಾರ ಮತ್ತು ಘಟನಾ ಸ್ಥಳಕ್ಕೆ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಸೌತ್ ಡಿವೈಎಸ್ಪಿ ಸುಮಿತ್ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Police Inspector and Constable we're found dead after the jeep lost control and hit the tree in Mysore.