ಬ್ರೇಕಿಂಗ್ ನ್ಯೂಸ್
21-10-23 04:10 pm Bangalore Correspondent ಕರ್ನಾಟಕ
ಬೆಂಗಳೂರು, ಅ.21: ಪದ್ಮಭೂಷಣ ಪ್ರಶಸ್ತಿ ವಿಜೇತ ಎಸ್.ಎಲ್. ಭೈರಪ್ಪ ಅವರ ಪರ್ವ ಕಾದಂಬರಿ ಬಾಲಿವುಡ್ ಚಿತ್ರವಾಗಿ ತೆರೆಮೇಲೆ ಬರಲು ತಯಾರಾಗಿದೆ. ಕಾಶ್ಮೀರ್ ಫೈಲ್ಸ್, ವ್ಯಾಕ್ಸಿನ್ ವಾರ್ ಚಿತ್ರದ ಮೂಲಕ ದೇಶ- ವಿದೇಶದಲ್ಲಿ ಸಂಚಲನ ಸೃಷ್ಟಿಸಿರುವ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಪರ್ವ ಚಿತ್ರದ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾದಂಬರಿಕಾರ, ಎಸ್.ಎಲ್ ಭೈರಪ್ಪ, ಪ್ರಕಾಶ್ ಬೆಳವಾಡಿ, ನಿರ್ಮಾಪಕಿ ಪಲ್ಲವಿ ಜೋಶಿ ಸೇರಿದಂತೆ ಪ್ರಮುಖರ ಸಮ್ಮುಖದಲ್ಲೇ ಪರ್ವ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.
ಮಹಾಭಾರತದ ಕಥಾನಕ ಇರುವ ಪರ್ವ ಕನ್ನಡದ ಮೇರು ಕೃತಿಗಳಲ್ಲಿ ಒಂದು. ವಿಶೇಷ ಅಂದರೆ ಮೂರು ಭಾಗಗಳಲ್ಲಾಗಿ ಪರ್ವ ತೆರೆಗೆ ಬರಲಿದೆ. ಈ ಕುರಿತು ವಿವೇಕ್ ಅಗ್ನಿಹೋತ್ರಿ ಸಂತಸ ವ್ಯಕ್ತಪಡಿಸಿದ್ದು, ಮಹಾಭಾರತದ ದೃಶ್ಯಕಾವ್ಯವನ್ನು ಪ್ರಮುಖ ಪಾತ್ರಗಳ ಮೂಲಕ ನಿರೂಪಿಸಲಾಗಿದೆ. ಮಾಡರ್ನ್ ಕ್ಲಾಸಿಕ್ ಕೃತಿಯೆಂದು ಪ್ರಶಂಸೆ ಪಡೆದಿರುವ ಪರ್ವವನ್ನು ತೆರೆ ಮೇಲೆ ತರುವ ಮಹತ್ತರ ಜವಾಬ್ದಾರಿ ನಮ್ಮ ಮೇಲೆ ಇದೆ ಎಂದು ವಿವೇಕ್ ಅಗ್ನಿಹೋತ್ರಿ ಹೇಳಿದ್ದಾರೆ.
ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ ಫೈಲ್ಸ್ ಚಿತ್ರ ನೋಡಿ ಮೆಚ್ಚಿಕೊಂಡಿದ್ದ ಎಸ್.ಎಲ್ ಬೈರಪ್ಪ, ಆಪ್ತರಾಗಿರುವ ಪ್ರಕಾಶ್ ಬೆಳವಾಡಿ ಜೊತೆ ಚಿತ್ರದ ಕುರಿತು ಮಾತನಾಡಿದ್ದರು. ಇದೇ ವೇಳೆ ಪ್ರಕಾಶ್ ಬೆಳವಾಡಿ ದೂರವಾಣಿ ಕರೆ ಮೂಲಕ ವಿವೇಕ್ ಅಗ್ನಿಹೋತ್ರಿ ಜೊತೆ ಮಾತನಾಡಿದ್ದರು. ಎಸ್ಎಲ್ ಭೈರಪ್ಪ ಜೊತೆ ಮಾತನಾಡುವಂತೆ ಅಗ್ನಿಹೋತ್ರಿಗೆ ಸೂಚಿಸಿದ್ದರು. ಒಂದು ವರ್ಷ ಹಿಂದೆ ನಡೆದಿರುವ ಈ ಘಟನೆಯನ್ನು ವೇದಿಕೆಯಲ್ಲಿ ಹಂಚಿಕೊಂಡ ವಿವೇಕ್ ಅಗ್ನಿಹೋತ್ರಿ, ಭೈರಪ್ಪ ಜೊತೆ ಚರ್ಚಿಸಿ ಪರ್ವ ಕೃತಿಯನ್ನು ತೆರೆ ಮೇಲೆ ತರುವ ಧೈರ್ಯ ಮಾಡಿದ್ದಾಗಿ ತಿಳಿಸಿದ್ದಾರೆ.
BIG ANNOUNCEMENT:
— Vivek Ranjan Agnihotri (@vivekagnihotri) October 21, 2023
Is Mahabharat HISTORY or MYTHOLOGY?
We, at @i_ambuddha are grateful to the almighty to be presenting Padma Bhushan Dr. SL Bhyrappa’s ‘modern classic’:
PARVA - AN EPIC TALE OF DHARMA.
There is a reason why PARVA is called ‘Masterpiece of masterpieces’.
1/2 pic.twitter.com/BiRyClhT5c
Ahead of Dussehra, Vivek Ranjan Agnihotri announced his next film 'Parva.' The movie will be based on a Book named Parva, written by S. L. Bhyrappa. It will be 3 parts big franchise. The director who made the announcement in Bangalore introduced the film team to the audience as well.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am