ಬ್ರೇಕಿಂಗ್ ನ್ಯೂಸ್
12-11-20 12:49 pm Headline Karnataka News Network ಕರ್ನಾಟಕ
ಧಾರವಾಡ, ನವೆಂಬರ್ 11 : ಅಕ್ರಮ ಚಟುವಟಿಕೆಗಳನ್ನು ತಡೆಯಬೇಕಾದ ಆರಕ್ಷಕರೇ ಅಂದರ್ ಬಾಹರ್ ಆಡಲು ಹೋಗಿ ಸಿಕ್ಕಿಬಿದ್ದಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡ ತಾಲೂಕಿನ ಗರಗ ಪೊಲೀಸ್ ಠಾಣಾ ವ್ಯಾಪ್ತಿಯ ಮುಮ್ಮಿಗಟ್ಟಿ ಎಂಬಲ್ಲಿ ಉಡುಪಿ ಹೋಟೆಲ್ ಬಳಿಯ ಕೋಣೆಯೊಂದರಲ್ಲಿ 10 ಜನ ಪೊಲೀಸರು ಜೂಜು ಆಡುತ್ತಿದ್ದರು. ಈ ವೇಳೆ ಧಾರವಾಡ ಡಿವೈಎಸ್ಪಿ ತಂಡ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದೆ. ಆದರೆ, ದಾಳಿ ವಿಚಾರ ಗೊತ್ತಾದ ಕಳ್ಳ ಪೊಲೀಸರು ಪರಾರಿಯಾಗಿದ್ದಾರಂತೆ.
ಪ್ರಕರಣ ಸಂಬಂಧ ಗರಗ ಗ್ರಾಮದ ಅನಿಲ್ ಉಳವಣ್ಣವರ್ ನನ್ನು ಗರಗ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನಿಲ್ ಜೊತೆ ಸೇರಿಕೊಂಡು ಗರಗ ಠಾಣೆಯ ಪೊಲೀಸರೇ ಆದ ಆತ್ಮಾನಂದ ಬೆಟಗೇರಿ, ಮಂಜುನಾಥ ನಾಗಾವಿ, ಸಶಸ್ತ್ರ ಮೀಸಲು ಪಡೆಯ ಪೊಲೀಸರಾದ ಮೈನುದ್ದೀನ್ ಮುಲ್ಲಾ, ಶಂಕರ ಭಜಂತ್ರಿ, ಬಸವರಾಜ ಮಠದ, ವರ್ಧಮಾನ ಹಟಿಂಗಳಿ, ಆರ್.ಎಸ್.ಜಂಗನವರ, ಹುಲಿಗೆಪ್ಪ ದೊಡಮನಿ, ಮಲ್ಲಿಕಾರ್ಜುನ ಶಿರೂರ ಹಾಗೂ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸ್ ಪೇದೆ ಸೈಯದಸಾಬ್ ಇಸ್ಮಾಯಿಲ್ ಎಂಬವರು ಅಂದರ್ ಬಾಹರ್ ಆಡುತ್ತಿದ್ದರು ಎನ್ನಲಾಗುತ್ತಿದೆ.
ಮಾಹಿತಿ ಮೇರೆಗೆ ಸ್ವತಃ ಡಿವೈಎಸ್ಪಿ ರವಿ ನಾಯಕ್ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಹತ್ತೂ ಜನ ಪೊಲೀಸರು ಪರಾರಿಯಾಗಿದ್ದಾರೆ. ಈ ವೇಳೆ 35 ಸಾವಿರ ರೂಪಾಯಿ, 1 ಮೊಬೈಲ್ ಹಾಗೂ 5 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
10 police personals of caught playing Gambling in Dharwad when Dysp Raided the spot. It is said all of them have escaped from the spot. 35 thousand cash two Wheeler's and Mobile phones have been confiscated.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm